ಡಿಸೆಂಬರ್ ವೇಳೆಗೆ ಕ್ಯಾಪಿಟಲ್ ಎಕ್ಸ್ಪೆಂಡಿಚರ್ನ ಶೇಕಡಾ 80ರಷ್ಟು ನಿಧಿ ಬಳಕೆ ಮಾಡಲು ಸೂಚನೆ
2024ರಲ್ಲಿ ಲೋಕಸಭಾ ಚುನಾವಣೆ ಇರುವ ಹಿನ್ನಲೆಯಲ್ಲಿ ಈ ವರ್ಷದ ಡಿಸೆಂಬರ್ ವೇಳೆಗೆ ಕ್ಯಾಪಿಟಲ್ ಎಕ್ಸ್ಪೆಂಡಿಚರ್ನ (ಕೆಪೆಕ್ಸ್) ಶೇಕಡ 80ರಷ್ಟು ಮೊತ್ತವನ್ನು ವೆಚ್ಚ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಣಕಾಸು ವರ್ಷದಲ್ಲಿ ಪ್ರತಿ ಸಚಿವಾಲಯಕ್ಕೂ ಬಜೆಟ್ ಸಂದರ್ಭದಲ್ಲಿ ನಿಗದಿತ ನಿಧಿಯನ್ನು ಹಂಚಿಕೆ ಮಾಡಲಾಗಿರುತ್ತದೆ. ಹಂಚಿಕೆಯಾಗಿರುವ ನಿಧಿಯಲ್ಲಿ 80 ಪ್ರತಿಶತ ನಿಧಿಯನ್ನು ಡಿಸೆಂಬರ್ ವೇಳೆಗೆ ಬಳಕೆ ಮಾಡುವುದು ಕೇಂದ್ರದ ಗುರಿಯಾಗಿದೆ.
ಕೇಂದ್ರ ಸರ್ಕಾರದ ಕೆಲವು ಸಚಿವರ ತಮ್ಮ ಖಾತೆಗೆ ಒಂದು ವರ್ಷದ ಅವಧಿಗೆ ಹಂಚಿಕೆ ಮಾಡಿರುವ ನಿಧಿಯಲ್ಲಿ ಶೇಕಡಾ 45-46 ರಷ್ಟು ಮಾತ್ರ ಬಳಕೆ ಮಾಡಿದ್ದಾರೆ. ಆದರೆ ಇನ್ನೂ ಕೆಲವು ಸಚಿವಾಲಯಗಳಿಗೆ ಹಂಚಿಕೆಯಾಗಿರುವ ನಿಧಿ ಸದ್ಭಳಕೆ ಆಗಿಲ್ಲ. ಈ ಸಚಿವಾಲಯಗಳಿಗೆ ಡಿಸೆಂಬರ್ ವೇಳೆಗೆ ನಿಧಿಯನ್ನು ಸದ್ಭಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ಸಚಿವಾಲಯಗಳಿಗೆ ಈ ಆದೇಶ ನೀಡಲಾಗಿದೆ. ಡಿಸೆಂಬರ್ ಒಳಗಾಗಿ ಎಲ್ಲ ಸಚಿವಾಲಯಗಳು ತಮ್ಮ ಖಾತೆಗೆ ಹಂಚಿಕೆ ಮಾಡಲಾದ ಒಟ್ಟು ನಿಧಿಯ ಪೈಕಿ ಮೂರನೇ ಎರಡರಷ್ಟು ನಿಧಿಯನ್ನು ಬಳಕೆ ಮಾಡಬೇಕಿದೆ.
ಡಿಸೆಂಬರ್ ವೇಳೆಗೆ ಶೇಕಡಾ 80 ರಷ್ಟು ನಿಧಿಯನ್ನು ವೆಚ್ಚ ಮಾಡಿದರೆ ಉಳಿದ ಮೊತ್ತವನ್ನು ಜನವರಿ- ಮಾರ್ಚ್ ಸಂದರ್ಭದಲ್ಲಿ ಬಳಕೆ ಮಾಡಬೇಕಾಗುತ್ತದೆ. ಯಾವ ಸಚಿವಾಲಯ ಈ ಹಣಕಾಸು ವರ್ಷದಲ್ಲಿ ಹಂಚಿಕೆ ಮಾಡಿದ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡದಿದ್ದರೆ ಮುಂದಿನ ಬಜೆಟ್ನಲ್ಲಿ ನಿಧಿ ಹಂಚಿಕೆಯಲ್ಲಿ ಕಡಿತ ಮಾಡಲಾಗುತ್ತದೆ. ಯಾವ ಸಚಿವಾಲಯ ಅಧಿಕ ನಿಧಿಯನ್ನು ವೆಚ್ಚ ಮಾಡಿರುತ್ತದೆಯೋ ಆ ಸಚಿವಾಲಯಕ್ಕೆ ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಸಿಗಲಿದೆ.
ಹಣಕಾಸು ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಈ ಹಣಕಾಸು ವರ್ಷದಲ್ಲಿ ಕ್ಯಾಪಿಟಲ್ ಎಕ್ಸ್ಪೆಂಡಿಚರ್ ಅಥವಾ ಕೆಪೆಕ್ಸ್ ಶೇಕಡ 55ರಷ್ಟು ಏರಿಕೆಯಾಗಿದೆ. ಇದು 2.7 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಬಜೆಟ್ನ ಶೇಕಡ 27ಕ್ಕಿಂತ ಹೆಚ್ಚಿನ ನಿಧಿಯನ್ನು ಈಗಾಗಲೇ ಬಳಕೆ ಮಾಡಲಾಗಿದೆ.
ನಿಧಿ ಬಳಕೆಯಲ್ಲಿ ಹಿಂದುಳಿದ ಸಾರ್ವಜನಿಕ ಉದ್ದಿಮೆಗಳು
ಕೇಂದ್ರದ ಸಾರ್ವಜನಿಕ ಉದ್ದಿಮೆಗಳು ನಿಧಿಯನ್ನು ಬಳಕೆ ಮಾಡುವಲ್ಲಿ ಹಿಂದೆ ಬಿದ್ದಿವೆ. ಸಾರ್ವಜನಿಕ ಉದ್ದಿಮೆಗಳಲ್ಲಿ ವೆಚ್ಚ ಮಾಡುವುದು ಮುಖ್ಯವಾಗಿದೆ. ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಈಗಾಗಲೇ ಬಡ್ಡಿದರವನ್ನು ಏರಿಕೆ ಮಾಡಲಾಗಿದೆ. ರಫ್ತು ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತಗೊಂಡಿದ್ದು, ಖಾಸಗಿ ಹೂಡಿಕೆ ಪ್ರಮಾಣ ಕಡಿಮೆಯಾಗಿದೆ ಇದು ದೇಶದ ಆರ್ಥಿಕತೆ ಬೆಳವಣಿಗೆ ಮೇಲೆ ಪ್ರಭಾವ ಉಂಟು ಮಾಡುತ್ತದೆ. ಕೆಪೆಕ್ಸ್ ಹೆಚ್ಚಳ ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ವೆಚ್ಚವನ್ನು ಅಧಿಕ ಮಾಡುವುದರಿಂದ ಕೇಂದ್ರಕ್ಕೂ ಅನುಕೂಲವಾಗಲಿದೆ.
ಬಾಕಿ ಉಳಿದಿರುವ ಅಭಿವೃದ್ಧಿ ಕೆಲಸಗಳನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವುದು. ಹೊಸ ಯೋಜನೆಗಳನ್ನು ಪ್ರಾರಂಭಿಸುವ ಮೂಲಕ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಕೊಟ್ಟು, ಪ್ರಚಾರ ಮಾಡಲು ಅನುಕೂಲವಾಗುತ್ತದೆ. ಆದ್ದರಿಂದಲೇ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications