Breaking:ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಸರ್ಕಾರ
ನವದೆಹಲಿ, ನವೆಂಬರ್ 03: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ 5 ರೂ, ಹಾಗೂ ಡೀಸೆಲ್ ಮೇಲೆ 10 ರೂ.ಇಳಿಕೆ ಮಾಡಿದೆ.

ನವೆಂಬರ್ 04ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆ ಆಗಲಿದೆ. ಗ್ರಾಹಕರ ಹಿತ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡುವಂತೆ ರಾಜ್ಯಗಳನ್ನು ಒತ್ತಾಯಿಸಲಾಗುತ್ತಿದೆ.
ಕಳೆದ ಕೆಲವು ತಿಂಗಳುಗಳಿಂದ ಪ್ರತಿ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಕಳೆದ 36 ದಿನಗಳಲ್ಲಿ 28 ರೂಪಾಯಿ ಏರಿಕೆಯಾಗಿದೆ.
ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ನವೆಂಬರ್ 3ರಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ. ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ.
ಜನರ ಅತ್ಯವಶ್ಯಕ ವಸ್ತುವಾಗಿರುವ ಇಂಧನ ದರ ಏರಿಕೆಯಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇನ್ನೊಂದೆಡೆ ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸುಂಕ ಕಡಿತಗೊಳಿಸುವುದಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ.
ಈ ಮಧ್ಯೆ ಪೆಟ್ರೋಲ್, ಡೀಸೆಲ್ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು ಸಂಸ್ಥೆ ಗೋಲ್ಡ್ಮನ್ ಸ್ಯಾಕ್ಸ್ ತಿಳಿಸಿದೆ.
ಪ್ರಸ್ತುತ ಪ್ರತಿ ಬ್ಯಾರೆಲ್ಗೆ 85 ಡಾಲರ್ ಇರುವ ಬ್ರೆಂಟ್ ಕಚ್ಚಾ ತೈಲ ದರ ಮುಂದಿನ ವರ್ಷ ಶೇ.30ರಷ್ಟು ಹೆಚ್ಚಳದೊಂದಿಗೆ 110 ಡಾಲರ್ಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ವರದಿ ತಿಳಿಸಿದೆ.
ಇದೀಗ ಅಬಕಾರಿ ಸುಂಕ ಇಳಿಕೆ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿದೆ.
-
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications