ಕೇಂದ್ರದಿಂದ ಆಧಾರ್ ಕಾರ್ಡ್ ಜತೆ ಡ್ರೈವಿಂಗ್ ಲೈಸನ್ಸ್ ಲಿಂಕ್: ಸುಪ್ರೀಂ
ನವದೆಹಲಿ, ಫೆಬ್ರವರಿ 7: ಕೇಂದ್ರ ಸರಕಾರ ಆಧಾರ್ ಸಂಖ್ಯೆ ಜತೆ ಡ್ರೈವಿಂಗ್ ಲೈಸನ್ಸ್ ಜೋಡಣೆ ಮಾಡುವ ಪ್ರಕ್ರಿಯೆ ನಡೆಸುತ್ತಿದೆ. ನಕಲಿ ಲೈಸನ್ಸ್ ಗಳನ್ನು ನಿವಾರಣೆ ಮಾಡಲು ಈ ಕ್ರಮಕ್ಕೆ ಮುಂದಾಗಿದೆ ಮತ್ತು ಇದಕ್ಕಾಗಿ ಎಲ್ಲಾ ರಾಜ್ಯಗಳನ್ನು ಒಳಗೊಳ್ಳುವ ಸಾಫ್ಟ್ ವೇರ್ ಸಿದ್ದಪಡಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಮತ್ತು ದೀಪಕ್ ಮಿಶ್ರಾ ಅವರಿದ್ದ ಪೀಠಕ್ಕೆ ನ್ಯಾಯಾಲಯ ನೇಮಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಈ ಮಾಹಿತಿ ನೀಡಿದೆ. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ ಎಸ್ ರಾಧಾಕೃಷ್ಣನ್ ಈ ಸಮಿತಿ ಅಧ್ಯಕ್ಷರಾಗಿದ್ದಾರೆ.
ಸುಪ್ರಿಂ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಸಮಿತಿಯು, "ನಕಲಿ ಲೈಸನ್ಸ್ ಗಳನ್ನು ರದ್ದುಗೊಳಿಸಲು ಎನ್ಐಸಿ (ರಾಷ್ಟ್ರೀಯ ಮಾಹಿತಿ ಕೇಂದ್ರ) 'ಸಾರ್ಥಿ4' ಸಿದ್ದಪಡಿಸುತ್ತಿದೆ ಎಂದು ರಸ್ತೆ ಸಂಪರ್ಕ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ. ಇದರಲ್ಲಿ ಎಲ್ಲಾ ಲೈಸನ್ಸ್ ಗಳನ್ನು ಆಧಾರ್ ಜತೆ ಜೋಡಿಸಲಾಗುವುದು," ಎಂದು ಹೇಳಿದೆ.

"ರಿಯಲ್ ಟೈಮ್ ನಲ್ಲಿ ಈ ಸಾಫ್ಟ್ ವೇರ್ ಎಲ್ಲಾ ರಾಜ್ಯಗಳನ್ನು ಒಳಗೊಳ್ಳಲಿದೆ. ಇದರಿಂದ ಯಾವುದೇ ರಾಜ್ಯಗಳಲ್ಲಿ ಯಾವುದೇ ವ್ಯಕ್ತಿ ನಕಲಿ ಅಥವಾ ಇನ್ನೊಂದು ಲೈಸನ್ಸ್ ಪಡೆಯಲಾಗುವುದಿಲ್ಲ," ಎಂದು ವರದಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಾಂವಿಧಾನಿಕ ಪೀಠ ಆಧಾರ್ ಯೋಜನೆಯ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications