ಭಾರತೀಯರಿಗೆ ಅಮೆರಿಕ ವೀಸಾ ಪ್ರಕ್ರಿಯೆ ಇನ್ನು ಸರಳ
ನವದೆಹಲಿ, ಆಗಸ್ಟ್ 29: ಭಾರತೀಯರ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳಗೊಳಿಸಲು ಅಮೆರಿಕ ಮುಂದಾಗಿದ್ದು, ಸೆ. 1ರಿಂದ ಅದು ಜಾರಿಯಾಗಲಿದೆ. ನಿರ್ದಿಷ್ಟ ಅರ್ಜಿದಾರರು ಕಡ್ಡಾಯ ಸಂದರ್ಶನದಿಂದ ವಿನಾಯಿತಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.
ಟ್ರಾವೆಲ್ ಏಜೆಂಟ್ ಅಸೋಸಿಯೇಷನ್ಗೆ ಮಾಹಿತಿ ನೀಡಿರುವ ಅಮೆರಿಕದ ಕಾನ್ಸುಲೇಟ್, ಭಾರತದಾದ್ಯಂತ ವೀಸಾ ಅರ್ಜಿದಾರರ ವೀಸಾ ಪರಿಷ್ಕರಣೆಯ ಸಮಯವನ್ನು ಇಳಿಕೆ ಮಾಡಲು ಮತ್ತು ಗ್ರಾಹಕ ಸೇವೆಗಳ ಸುಧಾರಣೆಗೆ ಮುಂದಾಗಿರುವುದನ್ನು ತಿಳಿಸಿದೆ.
14 ವರ್ಷಕ್ಕೆ ಕೆಳಗಿನ ಮಕ್ಕಳು ಮತ್ತು 79 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು (ಕೆಲವು ಷರತ್ತುಗಳ ಅನ್ವಯದೊಂದಿಗೆ) ಮುಂದಿನ ತಿಂಗಳಿನಿಂದ ಅಮೆರಿಕ ವೀಸಾದ ಪರಿಷ್ಕರಣೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂದರ್ಶನದಿಂದ ವಿನಾಯಿತಿ ಪಡೆಯಲು ಅರ್ಹತೆ ಹೊಂದಬಹುದಾಗಿದೆ.

ಸೆ.1ರಿಂದ ಈ ಯೋಜನೆ ಜಾರಿಗೆ ಬರಲಿದೆ. ಅರ್ಹ ಅರ್ಜಿದಾರರು ದೇಶದಲ್ಲಿನ ತನ್ನ 11 ಸ್ಥಳಗಳಲ್ಲಿ ಎಲ್ಲಿಯಾದರೂ ಪಾಸ್ಪೋರ್ಟ್ ಮತ್ತು ವೀಸಾ ಅರ್ಜಿಗಳ ದಾಖಲೆಗಳನ್ನು ಸಲ್ಲಿಸಿ ಭೇಟಿ ನಿಗದಿಯ ದಿನಾಂಕವನ್ನು ಪಡೆದುಕೊಳ್ಳಬೇಕಾಗುತ್ತದೆ. ವೀಸಾ ಅರ್ಜಿಯ ಕೇಂದ್ರದ ಉದ್ಯೋಗಿಯು ಆ ದಾಖಲೆಗಳನ್ನು ಮೊದಲು ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಮೆರಿಕದ ರಾಯಭಾರ ಕಚೇರಿ ಅಥವಾ ಕಾನ್ಸುಲೇಟ್ಗೆ ರವಾನಿಸಲು ಅಂಗೀಕರಿಸುತ್ತಾರೆ.
ಅರ್ಜಿ ಸಲ್ಲಿಸಿದ ಏಳರಿಂದ ಹತ್ತು ವ್ಯವಹಾರದ ದಿನಗಳಲ್ಲಿ ಅರ್ಜಿದಾರರಿಗೆ ನಿರ್ಣಯದ ಮಾಹಿತಿ ದೊರಕುತ್ತದೆ. ಕೆಲವು ಪ್ರಕರಣಗಳಲ್ಲಿ ಅರ್ಜಿದಾರರು ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.
ಒಂದು ವೇಳೆ ಸಂದರ್ಶನಕ್ಕೆ ಹಾಜರಾಗುವ ಅಗತ್ಯಬಿದ್ದರೆ ಅರ್ಜಿದಾರರು ಸಂದರ್ಶನ ವಿನಾಯಿತಿ ಪ್ರಕ್ರಿಯೆಗೆ ಆಯ್ಕೆಯಾದ ಸ್ಥಳಕ್ಕೇ ಪ್ರಯಾಣಿಸಬೇಕಾಗುತ್ತದೆ. ಒಮ್ಮೆ ದಾಖಲೆಗಳನ್ನು ಸಲ್ಲಿಸಿದ ಬಳಿಕ ಅದನ್ನು ಕೇಂದ್ರಗಳ ನಡುವೆ ವರ್ಗಾವಣೆ ಮಾಡಲು ಅವಕಾಶವಿಲ್ಲ. ಸಂದರ್ಶನಕ್ಕೆ ಹಾಜರಾಗಬೇಕಾದ ಅರ್ಜಿದಾರರಿಗೆ ಹೇಗೆ ಪ್ರಕ್ರಿಯೆ ನಡೆಸಬೇಕು ಎಂಬ ಸೂಚನೆ ನೀಡಲಾಗುತ್ತದೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications