ಮಗಳ ಮದುವೆಗೆ ಟೀ ಮಾರೋನು ಕೊಟ್ಟಿದ್ದು 1.50 ಕೋಟಿ ವರದಕ್ಷಿಣೆ
ರಾಜಸ್ತಾನದಲ್ಲಿ ಟೀ ಮಾರುವ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಗೆ 1.51 ಕೋಟಿ ರುಪಾಯಿ ವರದಕ್ಷಿಣೆ ನೀಡಿದ ವಿಡಿಯೋ ಭಾರೀ ಸುದ್ದಿಯಾಗಿದೆ. ಟೀ ಮಾರುವ ಲೀಲಾ ರಾಮ್ ಗುಜ್ಜರ್ ಐಟಿ ಅಧಿಕಾರಿಗಳ ಕಣ್ಣಿಗೆ ಬಿದ್ದಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ
ಜೈಪುರ್, ಏಪ್ರಿಲ್ 13: ರಾಜಸ್ತಾನದಲ್ಲಿ ಟೀ ಮಾರುವ ವ್ಯಕ್ತಿಯೊಬ್ಬನ ಮೇಲೆ ಅದಾಯ ತೆರಿಗೆ ಇಲಾಖೆಯ ಕಣ್ಣು ಬಿದ್ದಿದೆ. ಆತ ತನ್ನ ಮಗಳ ಮದುವೆ ವೇಳೆ ವರದಕ್ಷಿಣೆ ಎಂದು ಕೊಟ್ಟಿದ್ದೇ 1.51 ಕೋಟಿ ರುಪಾಯಿಯಂತೆ. ಇಲ್ಲಿನ ಹದುವಾತದಲ್ಲಿ ಟೀ ಮಾರುವ ಲೀಲಾ ರಾಮ್ ಗುಜ್ಜರ್ ನೋತುಗಳನ್ನು ಎಣಿಸಿ, ವರನ ಕಡೆಯವರಿಗೆ ಕೊಡುವ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ವಿಡಿಯೋ ಪ್ರಚಾರಕ್ಕೆ ಬರುತ್ತಿದ್ದಂತೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆತನಿಗೆ ನೋಟಿಸ್ ನೀಡಿದ್ದಾರೆ. ಹೇಗಪ್ಪ ಇಷ್ಟು ದುಡ್ಡು ಬಂತು, ವಿವರಣೆ ನೀಡಿ ಎಂದು ಕೇಳಿದ್ದಾರೆ. ಆದರೆ ಆದಾಯದ ಮೂಲ ತಿಳಿಸಲು ಆತನಿಗೆ ತಿಳಿಸಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಆತನಿಗೆ ನೋಟಿಸ್ ನೀಡಿ, ಆದಾಯದ ಮೂಲವನ್ನು ತೋರಿಸುವ ದಾಖಲೆಗಳನ್ನು ಹಾಜರುಪಡಿಸಲು ತಿಳಿಸಲಾಗಿದೆ.[ತಮಿಳುನಾಡಿನ ವ್ಯಾಪಾರಿಯಿಂದ PMGKYಗೆ 246 ಕೋಟಿ ಜಮೆ]

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆನ್ನು ಬಿದ್ದಿರುವುದು ಒಂದು ಕಡೆಯಾಯಿತು. ಇದರ ಜತೆಗೆ ತನ್ನ ನಾಲ್ವರು ಅಪ್ರಾಪ್ತ ಹೆಣ್ಣುಮಕ್ಕಳಿಗೆಮದುವೆ ಮಾಡಿದ್ದಾನೆ. ಇನ್ನು ವರದಕ್ಷಿಣೆ ಕೊಡುವುದು ಕಾನೂನಿನ ಪ್ರಕಾರ ಅಪರಾಧ. ಆ ಆರೋಪ ಕೂಡ ಲೀಲಾ ರಾಮ್ ಗುಜ್ಜರ್ ಮೇಲೆ ಇದೆ.[ಮಂಗಳೂರು: ಐಟಿ ದಾಳಿ, ಒಂದೇ ದಿನದಲ್ಲಿ ಸಿಕ್ಕಿರೋದು ರು.172 ಕೋಟಿ!]
ಸದ್ಯಕ್ಕೆ ಆತ ತಲೆ ಮರೆಸಿಕೊಂಡಿದ್ದಾನೆ. ಆತನ ಮನೆಗೆ ಪೊಲೀಸರಿಗೆ ಭೇಟಿ ನೀಡಿದ ವೇಳೆ ಬಾಗಿಲಿಗೆ ಬೀಗ ಬಿದ್ದಿದ್ದನ್ನು ನೋಡಿ ವಾಪಸಾಗಿದ್ದಾರೆ. ಆತ ಹಾಗೂ ಆತನ ಕುಟುಂಬದವರ ಶೋಧಕ್ಕಾಗಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications