Chanakyya Bihar Exit Poll: ಬಿಹಾರದಲ್ಲಿ ಬಿಜೆಪಿ & ಜೆಡಿಯು ದರ್ಬಾರ್, ಮತ್ತೆ ಸಮ್ಮಿಶ್ರ ಸರ್ಕಾರ, ಚಾಣಕ್ಯ ಸಮೀಕ್ಷೆ ಮುನ್ಸೂಚನೆ
Chanakyya Bihar Exit Poll: ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ (ಎಕ್ಸಿಟ್ ಪೋಲ್) Chanakyya ಸಮೀಕ್ಷೆ ಬಿಡುಗಡೆಯಾಗಿದೆ. Chanakyya ಸಮೀಕ್ಷೆಯ ಪ್ರಕಾರ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ದರ್ಬಾರ್ ಮುಂದುವರಿದಿದೆ. ಈ ಬಾರಿಯು ಬಿಜೆಪಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ ಎಂದು ಸಮೀಕ್ಷೆ ಹೇಳಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 130ರಿಂದ 138 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ 100ರಿಂದ108 ಸ್ಥಾನಗಳಲ್ಲಿ ಹಾಗೂ ಇತರೆ / ಪಕ್ಷೇತರರು 3ರಿಂದ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು Chanakyya ಸಮೀಕ್ಷೆಯ ವರದಿ ಮಾಡಿದೆ. ಬಿಹಾರ ವಿಧಾನಸಭೆಯಲ್ಲಿ ಒಟ್ಟು 243 ಕ್ಷೇತ್ರಗಳಿವೆ. ಇದರಲ್ಲಿ ಮ್ಯಾಜಿಕ್ ಸಂಖ್ಯೆ 122 ಆಗಿದೆ. ಮ್ಯಾಜಿಕ್ ಸಂಖ್ಯೆಯನ್ನು ಗಳಿಸುವಲ್ಲಿ ಎನ್ಡಿಎ ಸಫಲವಾಗಲಿದೆ ಎಂದು ಸಮೀಕ್ಷಾ ವರದಿ ಉಲ್ಲೇಖಿಸಿದೆ.

2025ನೇ ಸಾಲಿನ ಬಿಹಾರ ವಿಧಾನಸಭೆ ಚುನಾವಣೆಯು ಮುಕ್ತಾಯವಾಗಿದೆ. ನವೆಂಬರ್ 6 ಮತ್ತು 11, 2025 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯನ್ನು ನವೆಂಬರ್ 14, 2025 ರಂದು ನಿಗದಿಪಡಿಸಲಾಗಿದೆ. ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದ್ದು, ಎಲ್ಲವೂ ಬಹುತೇಕ ಸುಸೂತ್ರವಾಗಿ ನಡೆದಿದೆ.
ಬಿಹಾರದ ಮೊದಲ ಹಂತದ ಮತದಾನವು ನವೆಂಬರ್ 6, 2025 121 ಕ್ಷೇತ್ರಗಳಲ್ಲಿ ನಡೆದಿತ್ತು ಹಾಗೂ ಎರಡನೇ ಹಂತದ ಮತದಾನವು ನವೆಂಬರ್ 11, 2025ರಂದು ಮಂಗಳವಾರ 122 ಕ್ಷೇತ್ರಗಳಲ್ಲಿ ನಡೆದಿದೆ. ಈ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶಗಳು ನವೆಂಬರ್ 14, 2025ರಂದು ನಡೆಯಲಿದೆ. ಪ್ರಸ್ತುತ ಬಿಹಾರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 22, 2025 ರಂದು ಕೊನೆಗೊಳ್ಳಲಿದೆ.
ನವೆಂಬರ್ 14ಕ್ಕೆ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ
ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶವು ನವೆಂಬರ್ 14ರ ಶುಕ್ರವಾರ ಪ್ರಕಟವಾಗಲಿದೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಹಲವು ಕಾರಣಗಳಿಗೆ ಚರ್ಚೆಗೆ ಗ್ರಾಸವಾಗಿತ್ತು. ಮೊದಲನೆಯದಾಗಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವು ಭಾರೀ ಚರ್ಚೆಗೆ ಕಾರಣವಾಯಿತು. ಮತದಾರರ ಪಟ್ಟಿ ಪರಿಷ್ಕರಣೆಯ ಮೂಲಕ ಬರೋಬ್ಬರಿ 69 ಲಕ್ಷ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗಿರಿಸಲಾಗಿದೆ ಎಂದು ಬಿಹಾರದ ವಿರೋಧ ಪಕ್ಷಗಳು ಗಂಭೀರ ಆರೋಪ ಮಾಡಿದ್ದವು.
ಕರ್ನಾಟಕ ಮತ್ತು ಮಹಾರಾಷ್ಟ್ರದ ನಂತರದಲ್ಲಿ ಹರಿಯಾಣದಲ್ಲೂ ಮತಗಳ ಕಳ್ಳತನ ಮಾಡಲಾಗಿದೆ (ವೋಟ್ ಚೋರಿ) ಈ ಮೂಲಕವೇ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಹಾರದಲ್ಲೂ ಈ ಬೆಳವಣಿಗೆ ನಡೆದರೂ ನಡೆಯಬಹುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಆರೋಪವನ್ನು ಮಾಡಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications