ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು
ದಕ್ಷಿಣ ಭಾರತದ ರಾಜ್ಯಗಳ ಜನ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ವೃದ್ಧರ ಸಂಖ್ಯೆ ಹೆಚ್ಚುತ್ತಿದ್ದು, ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು, ಹೆಚ್ಚಿನ ಮಕ್ಕಳಿರುವ ಕುಟುಂಬಗಳಿಗೆ ಪ್ರೋತ್ಸಾಹ ಕೊಡಲು, ಹೊಸ ಕಾನೂನುಗಳನ್ನು ರಚಿಸುವ ಜೊತೆಗೆ ಜನಸಂಖ್ಯೆ ನಿರ್ವಹಣೆಯನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ಜಾರಿ ಮಾಡಲು ಸರ್ಕಾರ ಯೋಜಿಸಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ಈ ಹಿಂದೆ ರಾಜ್ಯವು ಕಾನೂನು ರೂಪಿಸಿದೆ ಎಂದ ಅವರು, ನಾವು ಆ ಕಾನೂನನ್ನು ರದ್ದು ಮಾಡಿದ್ದೇವೆ. ಆ ಯೋಜನೆಯನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದ್ದು, ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನ ನೀಡುವ ಬಗ್ಗೆ ಯೋಚಿಸುತ್ತದೆ ಎಂದರು.
ದಕ್ಷಿಣ ಭಾರತದಲ್ಲಿ ಸಮಸ್ಯೆ
2047ರವರೆಗೆ ಜನಸಂಖ್ಯೆ ಹೆಚ್ಚಳದ ಪ್ರಯೋಜನ ಹೊಂದಿದ್ದರೂ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚುತ್ತಿದ್ದು, ಯುವಕರ ಸಂಖ್ಯೆ ಕಡಿಮೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಕೆಲವು ಯೂರೋಪ್ ರಾಷ್ಟ್ರಗಳು ವಯಸ್ಸಾದವರ ಸಂಖ್ಯೆಯನ್ನು ಹೆಚ್ಚಿಗೆ ಹೊಂದಿದ್ದು ಅನೇಕ ಸಮಸ್ಯೆ ಜೊತೆ ಹೋರಾಡುತ್ತಿವೆ. ದಕ್ಷಿಣ ಭಾರತದ ಯುವಜನತೆ ದೇಶದ ವಿವಿಧ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುತ್ತಿರುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದರು.
ಭಾರತದಲ್ಲಿ ಫಲವತ್ತತೆ ದರ ಸರಾಸರಿ 2.1 ಇದ್ದರೆ ದಕ್ಷಿಣ ಭಾರತದ ಫಲವತ್ತತೆ ದರ 1.6ಕ್ಕೆ ಕಡಿಮೆಯಾಗಿದೆ. ಇದು ಇನ್ನೂ ಕಡಿಮೆಯಾದರೆ 2047 ರಲ್ಲಿ ಭಾರತದಲ್ಲಿ ಯುವಕರಿಗಿಂತ ಹೆಚ್ಚಿನ ಸಂಖ್ಯೆಯ ವೃದ್ಧರನ್ನು ನೋಡುತ್ತೇವೆ. ಆಂಧ್ರ ಮತ್ತು ದೇಶದ ಇತರ ಭಾಗಗಳ ಹಳ್ಳಿಗಳಲ್ಲಿ ಕೇವಲ ವಯಸ್ಸಾದವರು ಮಾತ್ರ ಉಳಿದುಕೊಂಡಿದ್ದಾರೆ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ನಗರಗಳಿಗೆ ಸೇರುತ್ತಿದ್ದಾರೆ ಎಂದರು.
ಜನಸಂಖ್ಯಾ ನಿಯಂತ್ರಣ ಮಾಡಬೇಕು ಎಂದು ತಾವು ಈ ಮೊದಲು ಹೊಂದಿದ್ದ ನಿಲುವಿನ ಬಗ್ಗೆ ಮಾತನಾಡಿದ ಅವರು, ಆ ಸಮಯದಲ್ಲಿ ವಿರಳವಾಗಿದ್ದ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡುವುದು ಗುರಿಯಾಗಿತ್ತು. ಬೆಳೆಯುತ್ತಿರುವ ಜನಸಂಖ್ಯೆಯುವ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎನ್ನುವುದು ನನ್ನ ನಂಬಿಕೆಯಾಗಿತ್ತು. ಜನಸಂಖ್ಯೆಯ ಬೆಳವಣಿಗೆಯನ್ನು ಕಡಿಮೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ, ಆದರೆ ಅದರಿಂದ ಹೊಸ ಸವಾಲುಗಳನ್ನು ಎದುರಿಸುವಂತಾಗಿದೆ ಎಂದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications