ಜಗನ್ರಿಂದ ನಮ್ಮಪ್ಪನಿಗೆ ತೊಂದ್ರೆ ಆಗ್ತಿದೆ: ಅಮಿತ್ ಶಾ ಮುಂದೆ ಅಳುತ್ತಲೇ ಅಳಲು ತೋಡಿಕೊಂಡ ಚಂದ್ರಬಾಬು ನಾಯ್ಡು ಪುತ್ರ
ಆಂದ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನವಾಗಿ ಹಲವು ದಿನಗಳೇ ಕಳೆದಿವೆ. ಅವರ ಬಂಧನಕ್ಕೆ ಸಿಎಂ ಜಗನ್ ಮೋಹನ ರೆಡ್ಡಿ ಕಾರಣವೆಂದು ನಾಯ್ಡು ಕುಟುಂಬದವರು ಆರೋಪಿಸುತ್ತಿದ್ದಾರೆ. ಜಗನ್ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಾಯ್ಡು ಪುತ್ರ, ಟಿಡಿಪಿ ನಾಯಕ ನಾರಾ ಲೋಕೇಶ್ ಹೇಳಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿದ್ದಾರೆ.
73 ವರ್ಷದ ಚಂದ್ರಬಾಬು ನಾಯ್ಡು ವಿರುದ್ಧ ಹಲವು ಆರೋಪ ಹೊರಿಸಲಾಗಿದೆ. ಇಷ್ಟೊಂದು ಆರೋಪಗಳನ್ನು ಹೊರಿಸಿ ತೊಂದರೆ ಕೊಡುವುದು ಸರಿಯಲ್ಲ ಎಂಬುದಾಗಿ ನಾರಾ ಲೋಕೇಶ್ ಮುಂದೆ ಅಮಿತ್ ಶಾ ಹೇಳಿದ್ದಾರೆ ಎಂದು ವರದಿಯಾಗಿದೆ.

ಕೌಶಲ್ಯಾಭಿವೃದ್ಧಿ ನಿಗಮದ ಹಗರಣದಲ್ಲಿ ತಮ್ಮ ತಂದೆಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ನಾರಾ ಲೋಕೇಶ್ ಅವರ ಅಳಲಾಗಿದೆ. ಟಿಡಿಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಂದ್ರಬಾಬು ನಾಯ್ಡು ಅವರ ಪುತ್ರ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ವೈಎಸ್ಆರ್ಸಿಪಿ ನೇತೃತ್ವದ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಚಂದ್ರಬಾಬು ನಾಯ್ಡು ವಿರುದ್ಧ ಜಗನ್ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ನಾರಾ ಲೋಕೇಶ್ ಅಮಿತ್ ಶಾ ಅವರಿಗೆ ಹೇಳಿದ್ದಾರೆ.
73 ವರ್ಷದ ಹಿರಿಯ ನಾಯಕನಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ತಮ್ಮ ತಂದೆಯನ್ನು ರಾಜಮಂಡ್ರಿ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ಅಲ್ಲಿ ಭಯಾನಕ ವಾತಾವರಣವಿದೆ. ಅಲ್ಲಿ ಅವರ ಜೀವಕ್ಕೆ ಬೆದರಿಕೆ ಇದೆ ಎಂದು ನಾ ರಾ ಲೋಕೇಶ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ.
ದೆಹಲಿಗೆ ತೆರಳುವ ಮುನ್ನ ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, 'ಕಳೆದ ಒಂದು ವಾರದಲ್ಲಿ ತಾಪಮಾನ ಏರಿಕೆಯಾಗಿದೆ. ಬಿಸಿಗಾಳಿ ಬೀಸುತ್ತಿದೆ. ನನ್ನ ತಂದೆ ವಿಪರೀತ ತಾಪಮಾನದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ' ಎಂದು ಅವರು ಹೇಳಿದ್ದಾರೆ.
ಅವರಿಗೆ ಡಿಹೈರ್ಡೆಟ್ ಆಗುತ್ತಿದೆ. ಸಾಕಷ್ಟು ಅಸ್ವಸ್ಥತೆಯಲ್ಲಿದ್ದಾರೆ. ಅವರು 73 ವರ್ಷ ವಯಸ್ಸಿನವರಾಗಿದ್ದಾರೆ. ಅವರಿಗೆ ಬಿಪಿ ಶುಗರ್ ಇದೆ. ಅವರ ಮೇಲೆ ಸುಳ್ಳು ಪ್ರಕರಣಗಳನ್ನು ಹೇರಿಲಾಗಿದೆ. 32 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಎ ಕ್ಲಾಸ್ ಸೌಲಭ್ಯಗಳನ್ನು ನೀಡದಿರುವುದು ಸ್ವೀಕಾರಾರ್ಹವಲ್ಲ ಎಂದು ಲೋಕೇಶ್ ತಿಳಿಸಿದ್ದಾರೆ.
ಈ ಹಿಂದೆ ಜಗನ್ ಕೇವಲ ಸಂಸದರಾಗಿದ್ದರು. ಅವರನ್ನು ಚಂಚಲಗುಡ ಜೈಲಿನಲ್ಲಿ ಇರಿಸಲಾಗಿತ್ತು. ಅವರು ಎ ಕ್ಲಾಸ್ ಸೌಲಭ್ಯಗಳನ್ನು ಕೋರಿದ್ದಾರೆ. ಅವರಿಗೆ ಈ ಸೌಲಭ್ಯವನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕಳೆದ ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 18 ರ ವರೆಗೆ ವಿಸ್ತರಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications