2022ರ ಮೂರನೇ ತ್ರೈಮಾಸಿಕದಲ್ಲಿ ಚಂದ್ರಯಾನ-3 ಉಡಾವಣೆ
ನವದೆಹಲಿ, ಜುಲೈ 28: ಎಲ್ಲವೂ ಮಾಮೂಲಿಯಂತೆ ಕೆಲಸ ಕಾರ್ಯಗಳು ನಡೆದರೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಂದ್ರಯಾನ-3 ಉಡಾವಣೆ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ (ಸ್ವತಂತ್ರ ಹೊಣೆಗಾರಿಕೆ) ರಾಜ್ಯ ಸಚಿವ; ಭೂ ವಿಜ್ಞಾನ (ಸ್ವತಂತ್ರ ಹೊಣೆಗಾರಿಕೆ) ಪಿಎಂಒ ಕಚೇರಿ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪಿಂಚಣಿ, ಆಣು ಇಂಧನ ಮತ್ತು ಬಾಹ್ಯಾಕಾಶ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಲೋಕಸಭೆಗೆ ಇಂದು ನೀಡಿದ ಲಿಖಿತ ಉತ್ತರದಲ್ಲಿ ಸಚಿವ ಡಾ.ಜಿತೇಂದ್ರ ಚಂದ್ರಯಾನ-3 ಯೋಜನೆ ಸಾಕಾರದ ನಿಟ್ಟಿನಲ್ಲಿ ಪ್ರಗತಿ ಸಾಗಿದೆ ಎಂದು ತಿಳಿಸಿದ್ದಾರೆ.
ಚಂದ್ರಯಾನ-3 ಯೋಜನೆಯು ಸಂರಚನೆಯನ್ನು ಅಂತಿಮಗೊಳಿಸುವುದು, ಉಪವ್ಯವಸ್ಥೆಗಳನ್ನು ಸಾಕಾರಗೊಳಿಸುವುದು, ಜೋಡಿಸುವುದು, ಬಾಹ್ಯಾಕಾಶ ನೌಕಾ ಮಟ್ಟದ ವಿಸ್ತೃತ ಪರೀಕ್ಷೆ ಮತ್ತು ಭೂಮಿಯ ಮೇಲಿನ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುಲು ಹಲವು ವಿಶೇಷ ಪರೀಕ್ಷೆ ಒಳಗೊಂಡಂತೆ ವಿವಿಧ ಪ್ರಕ್ರಿಯೆಗಳು ಸೇರಿವೆ.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಯೋಜನೆಯ ಸಾಕಾರದ ಪ್ರಗತಿಗೆ ಅಡ್ಡಿಯುಂಟಾಗಿದೆ. ಆದರೂ ಲಾಕ್ಡೌನ್ ಸಮಯದಲ್ಲೂ ಸಹ ಮನೆಯಿಂದಲೇ ಕೆಲಸ ಮಾಡುತ್ತಾ ಸಾಧ್ಯವಾದಷ್ಟೂ ಕೆಲಸಗಳನ್ನು ಕೈಗೊಳ್ಳಲಾಗಿದೆ. ಅನ್ಲಾಕ್ ಅವಧಿ ಆರಂಭದ ನಂತರ ಚಂದ್ರಯಾನ-3 ಯೋಜನೆ ಸಾಕಾರದ ಕಾರ್ಯ ಆರಂಭವಾಗಿದೆ ಮತ್ತು ಅದು ಸಾಕಾರದ ಪ್ರಬುದ್ಧ ಹಂತದಲ್ಲಿದೆ ಎಂದರು.
''ಈ ಹಿಂದಿನ ಚಂದ್ರಯಾನಗಳಲ್ಲಿ ಆರ್ಬಿಟರ್ ಇತ್ತು. ಆದರೆ ಚಂದ್ರಯಾನ-3 ಆರ್ಬಿಟರ್ ರಹಿತವಾಗಿರಲಿದೆ. ಚಂದ್ರಯಾನ-3 ರೆಡೆಗೆ ನಾವು ಕೆಲಸ ಮಾಡುತ್ತಿದ್ದೇವೆ, ಚಂದ್ರಯಾನ-2 ಮಾದರಿಯಲ್ಲೇ ಚಂದ್ರಯಾನ-3 ರ ಸಂರಚನೆ ಇರಲಿದ್ದು, 2022 ಕ್ಕೆ ಉಡಾವಣೆಯಾಗುವ ನಿರೀಕ್ಷೆ ಇದೆ'' ಎಂದು ಇಸ್ರೋ ಮುಖ್ಯಸ್ಥ ಕೆ ಶಿವನ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications