Chandrayaan 3: ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್!
ಚಂದ್ರಯಾನ-3 ರೋವರ್ ಪ್ರಗ್ಯಾನ್ ಇಂದು ಲ್ಯಾಂಡರ್ ವಿಕ್ರಂನ ಚಿತ್ರವನ್ನು ಹಂಚಿಕೊಂಡಿದ್ದು, ಇದು ತನ್ನ ನ್ಯಾವಿಗೇಷನ್ ಕ್ಯಾಮೆರಾವನ್ನು ಬಳಸಿ ಕ್ಲಿಕ್ ಮಾಡಿದ ಮೊದಲ ಚಿತ್ರವಾಗಿದೆ. ಚಂದ್ರನ ಮೇಲೆ ಇಳಿದ ನಂತರ ರೋವರ್ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದೆ. ಇದುವರೆಗೂ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳನ್ನು ವಿಕ್ರಂ ಲ್ಯಾಂಡರ್ ಸೆರೆಹಿಡಿದಿತ್ತು.
ಟ್ವಿಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದನ್ನು "ಮಿಷನ್ನ ಚಿತ್ರ" ಎಂದು ಕರೆದಿದೆ. ರೋವರ್ನಲ್ಲಿರುವ ನವಕ್ಯಾಮ್ಗಳನ್ನು ಬೆಂಗಳೂರಿನಲ್ಲಿರುವ ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ-ಆಪ್ಟಿಕ್ಸ್ ಸಿಸ್ಟಮ್ಸ್ (LEOS) ಅಭಿವೃದ್ಧಿಪಡಿಸಿದೆ.

ಚಂದ್ರಯಾನ 3 ವಿಚಾರದಲ್ಲಿ ಇಸ್ರೋ ಭಾರಿ ಯಶಸ್ಸು ಸಾಧಿಸಿದೆ. ಚಂದ್ರಯಾನ 2 ವಿಫಲವಾದ ಬಳಿಕ ಈ ಬಾರಿ ಇಸ್ರೋ ಹೆಚ್ಚಿನ ತಯಾರಿ ಮಾಡಿಕೊಂಡು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧೃವದಲ್ಲಿ ನೌಕೆಯನ್ನು ಇಳಿಸಿದೆ. ಭಾರತ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಎನಿಸಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರವಾಗಿದೆ. ರಷ್ಯಾ ಕೂಡ ಇದೇ ಸಂದರ್ಭದಲ್ಲಿ ನೌಕೆಯನ್ನು ಇಳಿಸಲು ಪ್ರಯತ್ನಿಸಿದರೂ ಲ್ಯಾಂಡರ್ ಅಪಘಾತಕ್ಕೀಡಾಗಿತ್ತು.
Chandrayaan-3 Mission:
— ISRO (@isro) August 30, 2023
Smile, please📸!
Pragyan Rover clicked an image of Vikram Lander this morning.
The 'image of the mission' was taken by the Navigation Camera onboard the Rover (NavCam).
NavCams for the Chandrayaan-3 Mission are developed by the Laboratory for… pic.twitter.com/Oece2bi6zE
ಹಲವು ಖನಿಜಗಳು ಪತ್ತೆ
ಚಂದ್ರನ ದಕ್ಷಿಣ ಧ್ರುವದ ಬಳಿ ರೋವರ್ ಸಲ್ಫರ್ ಅನ್ನು ಕಂಡುಹಿಡಿದ ಒಂದು ದಿನದ ನಂತರ ಹೊಸ ಫೋಟೋ ಹಂಚಿಕೊಂಡಿದೆ. ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕವನ್ನೂ ರೋಬೋಟ್ ಪತ್ತೆ ಮಾಡಿದೆ ಎಂದು ಇಸ್ರೋ ಮಂಗಳವಾರ ಪ್ರಕಟಿಸಿದೆ.
"ಚಂದ್ರಯಾನ-3 ರೋವರ್ನಲ್ಲಿರುವ ಲೇಸರ್-ಇಂಡ್ಯೂಸ್ಡ್ ಬ್ರೇಕ್ಡೌನ್ ಸ್ಪೆಕ್ಟ್ರೋಸ್ಕೋಪಿ (LIBS) ಉಪಕರಣವು ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲ್ಮೈಯ ಧಾತುರೂಪದ ಸಂಯೋಜನೆಯ ಮೇಲೆ ಮೊಟ್ಟಮೊದಲ ಇನ್-ಸಿಟು ಮಾಪನಗಳನ್ನು ಮಾಡಿದೆ. ಈ ಇನ್-ಸಿಟು ಮಾಪನಗಳು ಸಲ್ಫರ್ ಇರುವಿಕೆಯನ್ನು ಖಚಿತಪಡಿಸುತ್ತವೆ." ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಚಂದ್ರಯಾನ 3 ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತಕ್ಕೆ ಹೊಸ ಗೌರವ ತಂದುಕೊಟ್ಟಿದೆ, ಚಂದ್ರನಲ್ಲಿ ಮಾನವ ವಸಾಹತು ಸ್ಥಾಪನೆಗೆ ಹಲವು ಮುಖ್ಯ ಮಾಹಿತಿಗಳು ಈ ಯಾನದಲ್ಲಿ ತಿಳಿದುಬಂದಿವೆ.
ಚಂದ್ರಯಾನ 3 ಯಶಸ್ಸಿನಲ್ಲಿರುವ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2ರಂದು ಆದಿತ್ಯ ಎಲ್1 ನೌಕೆಯನ್ನು ಉಡಾವಣೆ ಮಾಡಲಿದೆ. ಆದಿತ್ಯ ಎಲ್ 1 ನೌಕೆಯು ಸೂರ್ಯನ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಲಿದ್ದು, ಹಲವು ಆಸಕ್ತಿಕರ ಸಂಗತಿಗಳು ಹೊರಬೀಳುವ ಸಾಧ್ಯತೆ ಇದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications