Chandrayaan-3: ಸಂಪೂರ್ಣ ಚಂದ್ರನ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಪ್ರಗ್ಯಾನ್ನ ಸಂಸ್ಕೃತ ಅರ್ಥವೇನು?
ಚಂದ್ರನ ದಕ್ಷಿಣ ಧ್ರುವವನ್ನು ತಲುಪುವ ಮೂಲಕ ಭಾರತವು ಬಾಹ್ಯಾಕಾಶ ಜಗತ್ತಿನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಚಂದ್ರಯಾನ-3 ರ ಲ್ಯಾಂಡರ್ 'ವಿಕ್ರಮ್' ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಿದ ನಂತರ ದೇಶಾದ್ಯಂತ ಸಂಭ್ರಮಾಚರಣೆ ಪ್ರಾರಂಭವಾಯಿತು. ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ನಂತರ ಇಸ್ರೋ ವಿಜ್ಞಾನಿಗಳು ವಿಶ್ವದಲ್ಲಿ ಭಾರತದ ಹೆಸರನ್ನು ಹೆಮ್ಮೆಯಿಂದ ಎತ್ತಿ ಹಿಡಿದಿದ್ದಾರೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ 'ವಿಕ್ರಮ್' ಇಳಿದ ನಂತರ ಅದರಿಂದ ಹೊರಬಂದ ರೋವರ್ ಪ್ರಗ್ಯಾನ್ ಈಗ ಇಡೀ ಚಂದ್ರನ ಕಾರ್ಯಾಚರಣೆಯ ಜವಾಬ್ದಾರಿಯನ್ನು ಹೊತ್ತಿದೆ. ಅಷ್ಟಕ್ಕೂ ಏನಿದು ರೋವರ್ ಪ್ರಗ್ಯಾನ್? ಪ್ರಗ್ಯಾನ್ ಎಂದು ಹೆಸರು ಬರಲು ಕಾರಣವೇನು? ಅದರ ಅರ್ಥವೇನು ಎಂದು ತಿಳಿಯೋಣ.

ಲ್ಯಾಂಡರ್ 'ವಿಕ್ರಮ್' ಬಗ್ಗೆ ಮೊದಲ ವಿಷಯ
ಇಸ್ರೋ ಪ್ರಕಾರ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಲ್ಯಾಂಡಿಂಗ್ ಮಾಡುವುದು ಅತ್ಯಂತ ಸವಾಲಿನ ಕೆಲಸ. ಹೀಗಿರುವಾಗ ಲ್ಯಾಂಡರ್ ಅಂಡ್ ರೋವರ್ ಹೆಸರಿಡುವುದರ ಹಿಂದೆ ಬೇರೆಯದೇ ಕಥೆಯಿದೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಮತ್ತು ಶ್ರೇಷ್ಠ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಲ್ಯಾಂಡರ್ಗೆ ಇಡಲಾಗಿದೆ. 'ವಿಕ್ರಮ್' ಪದದ ಅರ್ಥವು ಧೈರ್ಯ ಮತ್ತು ಶೌರ್ಯದೊಂದಿಗೆ ಸಂಬಂಧಿಸಿದೆ. ಲ್ಯಾಂಡರ್ ಮತ್ತು ರೋವರ್ ಅನ್ನು ಅವರ ಗೌರವಾರ್ಥವಾಗಿ ಹೆಸರಿಸಲಾಗಿದೆ.
ಚಂದ್ರನ ಮಣ್ಣಿನಿಂದ ಡೇಟಾ ಸಂಗ್ರಹ
ಚಂದ್ರಯಾನ-3 ಲ್ಯಾಂಡಿಂಗ್ ಆದ ಕೆಲವು ಗಂಟೆಗಳ ನಂತರ, ರೋವರ್ ಲ್ಯಾಂಡರ್ ಒಳಗಿನಿಂದ ಚಂದ್ರನ ಮೇಲ್ಮೈಯಲ್ಲಿ ಹೊರಬಂದಿದೆ. ಈಗ ರೋವರ್ 'ಪ್ರಗ್ಯಾನ್' ಚಂದ್ರನ ಮೇಲ್ಮೈಯಲ್ಲಿ ಸಂಚರಿಸಿ ಮಾಹಿತಿ ಸಂಗ್ರಹಿಸಲಿದೆ. ರೋವರ್ ಒಂದು ಬಾಕ್ಸ್ ಆಕಾರದ ಚಕ್ರದ ಸಾಧನವಾಗಿದ್ದು, ಇದು ಖನಿಜಗಳು, ನೀರು ಮತ್ತು ಅನಿಲವನ್ನು ಹುಡುಕಲು ಚಂದ್ರನ ಮೇಲೆ ಸ್ಥಳದಿಂದ ಸ್ಥಳಕ್ಕೆ ಚಲಿಸುತ್ತದೆ.

ಪ್ರಗ್ಯಾನ್ ಅರ್ಥ
ಈ ರೋವರ್ಗೆ ಪ್ರಗ್ಯಾನ್ ಎಂದು ಹೆಸರಿಸಲಾಗಿದೆ. ಏಕೆಂದರೆ ರೋವರ್ ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ಚಂದ್ರನ ಮೇಲ್ಮೈಯಲ್ಲಿರುವ ಅನೇಕ ವಿಷಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗುತ್ತದೆ ಎಂದು ವಿಜ್ಞಾನಿಗಳು ನಂಬಿದ್ದಾರೆ. ಸಂಸ್ಕೃತದಲ್ಲಿ ಪ್ರಗ್ಯಾನ್ ಅರ್ಥ ಜ್ಞಾನವಾಗಿದೆ. ರೋವರ್ ಪ್ರಗ್ಯಾನ್ ತನ್ನ ಬುದ್ಧಿವಂತಿಕೆಯೊಂದಿಗೆ ಸಂಪೂರ್ಣ ಕಾರ್ಯಾಚರಣೆ ಮಾಡುವುದರಿಂದ ಇದಕ್ಕೆ ಪ್ರಗ್ಯಾನ್ ಎಂಬ ಹೆಸರು ಇಡಲಾಗಿದೆ.
ರೋವರ್ನಲ್ಲಿ ಯಾವುದೇ ಬದಲಾವಣೆ ಇಲ್ಲ
ಚಂದ್ರಯಾನ -2 ರಲ್ಲಿ ಇದ್ದ ರೋವರ್ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಇದರ ಕಾಲುಗಳು ಒತ್ತಡವನ್ನು ಸಹಿಸಿಕೊಳ್ಳು ಶಕ್ತಿ ಹೊಂದಿರುತ್ತವೆ. ಇದರೊಂದಿಗೆ ಹೆಚ್ಚಿನ ಇಂಧನಕ್ಕಾಗಿ ಜಾಗವನ್ನು ರಚಿಸಲಾಗಿದೆ. ಲ್ಯಾಂಡಿಂಗ್ ನಂತರ ಲ್ಯಾಂಡರ್ ಮತ್ತು ರೋವರ್ ನಡುವಿನ ಸಂಪರ್ಕವನ್ನು ಬಲಪಡಿಸಲಾಗಿದೆ. ಈಗ ರೋವರ್ ಎಲ್ಲಾ ಡೇಟಾವನ್ನು ಲ್ಯಾಂಡರ್ಗೆ ಕಳುಹಿಸುತ್ತದೆ ಮತ್ತು ನಂತರ ಲ್ಯಾಂಡರ್ ಅದನ್ನು ಇಸ್ರೋಗೆ ಕಳುಹಿಸುತ್ತದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications