Chandrayaan-3: ಸಂಪೂರ್ಣ ಚಂದ್ರನ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಪ್ರಗ್ಯಾನ್ನ ಸಂಸ್ಕೃತ ಅರ್ಥವೇನು?
ಚಂದ್ರನ ದಕ್ಷಿಣ ಧ್ರುವವನ್ನು ತಲುಪುವ ಮೂಲಕ ಭಾರತವು ಬಾಹ್ಯಾಕಾಶ ಜಗತ್ತಿನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಚಂದ್ರಯಾನ-3 ರ ಲ್ಯಾಂಡರ್ 'ವಿಕ್ರಮ್' ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಿದ ನಂತರ ದೇಶಾದ್ಯಂತ ಸಂಭ್ರಮಾಚರಣೆ ಪ್ರಾರಂಭವಾಯಿತು. ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ನಂತರ ಇಸ್ರೋ ವಿಜ್ಞಾನಿಗಳು ವಿಶ್ವದಲ್ಲಿ ಭಾರತದ ಹೆಸರನ್ನು ಹೆಮ್ಮೆಯಿಂದ ಎತ್ತಿ ಹಿಡಿದಿದ್ದಾರೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ 'ವಿಕ್ರಮ್' ಇಳಿದ ನಂತರ ಅದರಿಂದ ಹೊರಬಂದ ರೋವರ್ ಪ್ರಗ್ಯಾನ್ ಈಗ ಇಡೀ ಚಂದ್ರನ ಕಾರ್ಯಾಚರಣೆಯ ಜವಾಬ್ದಾರಿಯನ್ನು ಹೊತ್ತಿದೆ. ಅಷ್ಟಕ್ಕೂ ಏನಿದು ರೋವರ್ ಪ್ರಗ್ಯಾನ್? ಪ್ರಗ್ಯಾನ್ ಎಂದು ಹೆಸರು ಬರಲು ಕಾರಣವೇನು? ಅದರ ಅರ್ಥವೇನು ಎಂದು ತಿಳಿಯೋಣ.

ಲ್ಯಾಂಡರ್ 'ವಿಕ್ರಮ್' ಬಗ್ಗೆ ಮೊದಲ ವಿಷಯ
ಇಸ್ರೋ ಪ್ರಕಾರ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಲ್ಯಾಂಡಿಂಗ್ ಮಾಡುವುದು ಅತ್ಯಂತ ಸವಾಲಿನ ಕೆಲಸ. ಹೀಗಿರುವಾಗ ಲ್ಯಾಂಡರ್ ಅಂಡ್ ರೋವರ್ ಹೆಸರಿಡುವುದರ ಹಿಂದೆ ಬೇರೆಯದೇ ಕಥೆಯಿದೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಮತ್ತು ಶ್ರೇಷ್ಠ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಲ್ಯಾಂಡರ್ಗೆ ಇಡಲಾಗಿದೆ. 'ವಿಕ್ರಮ್' ಪದದ ಅರ್ಥವು ಧೈರ್ಯ ಮತ್ತು ಶೌರ್ಯದೊಂದಿಗೆ ಸಂಬಂಧಿಸಿದೆ. ಲ್ಯಾಂಡರ್ ಮತ್ತು ರೋವರ್ ಅನ್ನು ಅವರ ಗೌರವಾರ್ಥವಾಗಿ ಹೆಸರಿಸಲಾಗಿದೆ.
ಚಂದ್ರನ ಮಣ್ಣಿನಿಂದ ಡೇಟಾ ಸಂಗ್ರಹ
ಚಂದ್ರಯಾನ-3 ಲ್ಯಾಂಡಿಂಗ್ ಆದ ಕೆಲವು ಗಂಟೆಗಳ ನಂತರ, ರೋವರ್ ಲ್ಯಾಂಡರ್ ಒಳಗಿನಿಂದ ಚಂದ್ರನ ಮೇಲ್ಮೈಯಲ್ಲಿ ಹೊರಬಂದಿದೆ. ಈಗ ರೋವರ್ 'ಪ್ರಗ್ಯಾನ್' ಚಂದ್ರನ ಮೇಲ್ಮೈಯಲ್ಲಿ ಸಂಚರಿಸಿ ಮಾಹಿತಿ ಸಂಗ್ರಹಿಸಲಿದೆ. ರೋವರ್ ಒಂದು ಬಾಕ್ಸ್ ಆಕಾರದ ಚಕ್ರದ ಸಾಧನವಾಗಿದ್ದು, ಇದು ಖನಿಜಗಳು, ನೀರು ಮತ್ತು ಅನಿಲವನ್ನು ಹುಡುಕಲು ಚಂದ್ರನ ಮೇಲೆ ಸ್ಥಳದಿಂದ ಸ್ಥಳಕ್ಕೆ ಚಲಿಸುತ್ತದೆ.

ಪ್ರಗ್ಯಾನ್ ಅರ್ಥ
ಈ ರೋವರ್ಗೆ ಪ್ರಗ್ಯಾನ್ ಎಂದು ಹೆಸರಿಸಲಾಗಿದೆ. ಏಕೆಂದರೆ ರೋವರ್ ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ಚಂದ್ರನ ಮೇಲ್ಮೈಯಲ್ಲಿರುವ ಅನೇಕ ವಿಷಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗುತ್ತದೆ ಎಂದು ವಿಜ್ಞಾನಿಗಳು ನಂಬಿದ್ದಾರೆ. ಸಂಸ್ಕೃತದಲ್ಲಿ ಪ್ರಗ್ಯಾನ್ ಅರ್ಥ ಜ್ಞಾನವಾಗಿದೆ. ರೋವರ್ ಪ್ರಗ್ಯಾನ್ ತನ್ನ ಬುದ್ಧಿವಂತಿಕೆಯೊಂದಿಗೆ ಸಂಪೂರ್ಣ ಕಾರ್ಯಾಚರಣೆ ಮಾಡುವುದರಿಂದ ಇದಕ್ಕೆ ಪ್ರಗ್ಯಾನ್ ಎಂಬ ಹೆಸರು ಇಡಲಾಗಿದೆ.
ರೋವರ್ನಲ್ಲಿ ಯಾವುದೇ ಬದಲಾವಣೆ ಇಲ್ಲ
ಚಂದ್ರಯಾನ -2 ರಲ್ಲಿ ಇದ್ದ ರೋವರ್ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಇದರ ಕಾಲುಗಳು ಒತ್ತಡವನ್ನು ಸಹಿಸಿಕೊಳ್ಳು ಶಕ್ತಿ ಹೊಂದಿರುತ್ತವೆ. ಇದರೊಂದಿಗೆ ಹೆಚ್ಚಿನ ಇಂಧನಕ್ಕಾಗಿ ಜಾಗವನ್ನು ರಚಿಸಲಾಗಿದೆ. ಲ್ಯಾಂಡಿಂಗ್ ನಂತರ ಲ್ಯಾಂಡರ್ ಮತ್ತು ರೋವರ್ ನಡುವಿನ ಸಂಪರ್ಕವನ್ನು ಬಲಪಡಿಸಲಾಗಿದೆ. ಈಗ ರೋವರ್ ಎಲ್ಲಾ ಡೇಟಾವನ್ನು ಲ್ಯಾಂಡರ್ಗೆ ಕಳುಹಿಸುತ್ತದೆ ಮತ್ತು ನಂತರ ಲ್ಯಾಂಡರ್ ಅದನ್ನು ಇಸ್ರೋಗೆ ಕಳುಹಿಸುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications