Changes from 1st April : ಉಳಿತಾಯಕ್ಕೂ ಮೊದಲು ಓದಿ: ದೇಶದಲ್ಲಿ ಏಪ್ರಿಲ್ 1ರಿಂದ ಏನೆಲ್ಲಾ ನಿಯಮಗಳ ಬದಲಾವಣೆ?
ನವದೆಹಲಿ, ಮಾರ್ಚ್ 28: ಭಾರತದಲ್ಲಿ ಹಲವು ಆರ್ಥಿಕ ಬದಲಾವಣೆ ಮತ್ತು ಏರಿಳಿತಗಳಿಗೆ ಏಪ್ರಿಲ್ ತಿಂಗಳು ಸಾಕ್ಷಿ ಆಗಲಿದೆ. ಹೊಸ ಆರ್ಥಿಕ ವರ್ಷದ ಪ್ರಾರಂಭಿಕ ತಿಂಗಳಿನಲ್ಲಿ ಏನೆಲ್ಲಾ ನಿಯಮಗಳು ಬದಲಾಗುತ್ತದೆ ಎಂಬ ಕುತೂಹಲಕ್ಕೆ ಈ ವರದಿಯಲ್ಲಿ ಉತ್ತರ ತಿಳಿಯಿರಿ.
ದೇಶದಲ್ಲಿ ಮುಂಬರುವ ಏಪ್ರಿಲ್ 1ನೇ ತಾರೀಖಿನಿಂದಲೇ ಹೊಸ ನಿಯಮಗಳು ಬ್ಯಾಂಕಿಂಗ್, ಪಿಎಫ್, ಆಧಾರ್ ಕಾರ್ಡ್ ಜೋಡಣೆ ಹೀಗೆ ಹಲವು ವಿಷಯಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ರಷ್ಯಾ-ಉಕ್ರೇನ್ ಯುದ್ಧದ ಕಾರಣಕ್ಕಾಗಿ ಈಗಾಗಲೇ ಇಂಧನ ಬೆಲೆಗಳು ಗಗನಮುಖಿಯಾಗಿ ಏರಿಕೆ ಕಂಡಿವೆ. ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲೂ ಏರಿಳಿತ ಮುಂದುವರಿದಿದೆ. ಅಡುಗೆ ಎಣ್ಣೆಯಿಂದ ಹಿಡಿದು ಪ್ರಮುಖ ಅಗತ್ಯ ಸರಕು ಸೇವೆಗಳ ಬೆಲೆ ಏರಿಕೆಯಾಗುವ ನಿರೀಕ್ಷೆಗಳಿವೆ. ಈ ಎಲ್ಲ ಬೆಳವಣಿಗೆಗಳು ದೇಶದ ಬ್ಯಾಂಕಿಂಗ್ ವಲಯ ಸೇರಿದಂತೆ ಹಲವು ವಲಯಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿಯೋಣ.

ಪಿಎಫ್ ಹಣಕ್ಕೂ ಬಡ್ಡಿ
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಆದಾಯ ತೆರಿಗೆ (25ನೇ ತಿದ್ದುಪಡಿ) ನಿಯಮ 2021 ಅನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ನಿರ್ಧರಿಸಿದೆ. ಇದರಿಂದ ಉದ್ಯೋಗಿಗಳ ಭವಿಷ್ಯ ನಿಧಿಯಲ್ಲಿ 2.5 ಲಕ್ಷ ರೂಪಾಯಿಗಳವರೆಗೆ ತೆರಿಗೆ-ಮುಕ್ತ ಕೊಡುಗೆಯ ಮಿತಿಯನ್ನು ವಿಧಿಸಲಾಗುತ್ತಿದೆ ( ಇಪಿಎಫ್) ಖಾತೆ. ಇದಕ್ಕಿಂತ ಹೆಚ್ಚಿನ ಕೊಡುಗೆಯನ್ನು ನೀಡಿದರೆ, ಆದಾಯಕ್ಕೆ ತೆರಿಗೆ ಬಡ್ಡಿ ವಿಧಿಸಲಾಗುತ್ತದೆ.

ಉಳಿತಾಯ ಖಾತೆಗೆ ನೇರವಾಗಿ ಬಡ್ಡಿ ಹಣ ಪಾವತಿ
ಪೋಸ್ಟ್ ಆಫೀಸ್ನ ಮಾಸಿಕ ಆದಾಯ ಯೋಜನೆ (MIS), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS), ಅಥವಾ ಪೋಸ್ಟ್ ಆಫೀಸ್ ಟರ್ಮ್ ಡೆಪಾಸಿಟ್ (TD) ನಲ್ಲಿ ಹೂಡಿಕೆ ಮಾಡಲು ಸಂಬಂಧಿಸಿದ ನಿಯಮಗಳು ಸಹ ಬದಲಾಗಲಿವೆ. ಈ ಯೋಜನೆಗಳಲ್ಲಿನ ಬಡ್ಡಿ ಹಣವನ್ನು ಏಪ್ರಿಲ್ 1 ರಿಂದ ನಗದು ರೂಪದಲ್ಲಿ ನೀಡುವುದಿಲ್ಲ. ಅದರ ಬದಲಿಗೆ ನೀವು ಉಳಿತಾಯ ಖಾತೆಯನ್ನು ತೆರೆಯಬೇಕಾಗುತ್ತದೆ. ಅಂಚೆ ಇಲಾಖೆಯ ಪ್ರಕಾರ, ಅನೇಕ ಗ್ರಾಹಕರು ತಮ್ಮ ಅಂಚೆ ಕಚೇರಿಯ ಉಳಿತಾಯ ಖಾತೆ ಅಥವಾ ಬ್ಯಾಂಕ್ ಖಾತೆಯನ್ನು ತಮ್ಮ MIS, SCSS, TD ಯೊಂದಿಗೆ ಲಿಂಕ್ ಮಾಡಿಲ್ಲ. ಇಂತಹ ಸಂದರ್ಭಗಳಲ್ಲಿ ಬಡ್ಡಿಯನ್ನು ಪಾವತಿ ಮಾಡಲಾಗುವುದಿಲ್ಲ.

ಜಿಎಸ್ಟಿ ನಿಮಯಗಳ ಸರಳಗೊಳಿಸುವಿಕೆ
ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC)ಯು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿಯಲ್ಲಿ ಇ-ಚಲನ್ಗಳ (ಎಲೆಕ್ಟ್ರಾನಿಕ್ ಚಲನ್ಗಳು) ವಿತರಣೆಯ ವಹಿವಾಟಿನ ಮಿತಿಯನ್ನು ಹಿಂದಿನ 50 ಕೋಟಿ ರೂಪಾಯಿ ನಿಗದಿತ ಮಿತಿಯಿಂದ 20 ಕೋಟಿಗೆ ಇಳಿಸಲಾಗಿದೆ.

ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ
ಮಾರ್ಚ್ 31ರೊಳಗೆ ನಿಮ್ಮ ಪ್ಯಾನ್ ಅನ್ನು ನಿಮ್ಮ ಆಧಾರ್ ಸಂಖ್ಯೆಯ ಜೊತೆ ಲಿಂಕ್ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ ಮತ್ತು ನಿಮಗೆ ದಂಡ ವಿಧಿಸಲಾಗುತ್ತದೆ. ಈ ದಂಡವನ್ನು ವಿಧಿಸಲು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 234H ಅನ್ನು ಬಳಸಲಾಗುತ್ತದೆ. ಸರ್ಕಾರವು ಇನ್ನೂ ದಂಡದ ಮೊತ್ತವನ್ನು ಘೋಷಿಸದಿದ್ದರೂ, ನಿಗದಿತ ದಿನಾಂಕದ ನಂತರ ಆಧಾರ್ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡುವುದಕ್ಕೆ ಗರಿಷ್ಠ 1000 ರೂಪಾಯಿವರೆಗೂ ಶುಲ್ಕ ವಿಧಿಸಲಾಗುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications