ಏಪ್ರಿಲ್ 1ರಿಂದ ಆದಾಯ ತೆರಿಗೆ ಸೇರಿ ಯುಪಿಐ, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ನಿಯಮಗಳಲ್ಲಿ ಬದಲಾವಣೆ
ಮಾರ್ಚ್ ತಿಂಗಳು ಮುಕ್ತಾಯವಾಗಿ ಏಪ್ರಿಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಏಪ್ರಿಲ್ 1ರಿಂದ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿದ್ದು, ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚು ಹೊಡೆತ ಬೀಲಲಿದೆ. ಹಾಗೆಯೇ ಆದಾಯ ತೆರಿಗೆ ಸೇರಿದಂತೆ ಯುಪಿಐ ಮತ್ತು ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ನಿಯಮಗಳಲ್ಲಿ ಬದಲಾವಣೆ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಏಪ್ರಿಲ್ 1ರಿಂದ ಹಣಕಾಸು ನಿಯಮಗಳಲ್ಲಿ ಹಲವು ಬದಲಾವಣೆಗಳು ಜಾರಿಗೆ ಬರಲಿದ್ದು, ತೆರಿಗೆದಾರರು, ಯುಪಿಐ ಬಳಕೆದಾರರು, ಕ್ರೆಡಿಟ್ ಕಾರ್ಡ್ ಹೊಂದಿರುವವರು ಮತ್ತು ಪಿಂಚಣಿದಾರರ ಮೇಲೆ ಇದು ಪರಿಣಾಮ ಬೀರಲಿದೆ. 2025-26ರ ಹಣಕಾಸು ವರ್ಷ ಪ್ರಾರಂಭ ಆಗುತ್ತಿದ್ದಂತೆ, ಆದಾಯ ತೆರಿಗೆ, ಕ್ರೆಡಿಟ್ ಕಾರ್ಡ್ಗಳು, ಯುಪಿಐ ಭದ್ರತೆ, ಜಿಎಸ್ಟಿ ಹಾಗೂ ಬ್ಯಾಂಕಿಂಗ್ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಯಾಗಲಿದೆ ಎಂದು ತಿಳಿದುಬಂದಿದೆ.

2025ರ ಕೇಂದ್ರ ಬಜೆಟ್ನಲ್ಲಿ ಪರಿಷ್ಕೃತ ಆದಾಯ ತೆರಿಗೆ ಸ್ಲ್ಯಾಬ್ಗಳು ಮತ್ತು ಕಡಿತಗಳನ್ನು ಪರಿಚಯಿಸಿದೆ. ಅವುಗಳನ್ನು ಈದೀಗ ಜಾರಿಗೆ ತರಲಾಗುತ್ತಿದ್ದು, ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವರ್ಷಕ್ಕೆ 12 ಲಕ್ಷ ರೂಪಾಯಿವರೆಗೆ ಗಳಿಸುವವರು ಆದಾಯ ತೆರಿಗೆ ಪಾವತಿಸುವುದರಿಂದ ವಿನಾಯಿತಿ ಪಡೆಯುತ್ತಾರೆ. ಅದಕ್ಕೂ ಹೆಚ್ಚು ಸಂಬಳ ಪಡೆಯುವವರು 75,000 ರೂಪಾಯಿಗಳ ಪ್ರಯೋಜನ ಪಡೆಯುತ್ತಾರೆ. ಇದರಿಂದಾಗಿ 12.75 ಲಕ್ಷ ರೂಪಾಯಿವರೆಗಿನ ವಾರ್ಷಿಕ ಆದಾಯವು ತೆರಿಗೆ ಮುಕ್ತ ಆಗಿರುತ್ತದೆ.
ನಿಷ್ಕ್ರಿಯ ಮೊಬೈಲ್ ಸಂಖ್ಯೆಗಳಿಂದ ಯುಪಿಐ ವಹಿವಾಟು ನಡೆಸಲಾಗುವುದಿಲ್ಲ. ಭದ್ರತೆಯನ್ನು ಹೆಚ್ಚಿಸಲು, ಬ್ಯಾಂಕ್ಗಳು ಮತ್ತು ಫೋನ್ ಪೇ ಮತ್ತು ಗೂಗಲ್ ಪೇನಂತಹ ಥರ್ಡ್ ಪಾರ್ಟಿ ಅಪ್ಲಿಕೇಶನ್ಗಳಲ್ಲಿ ದೀರ್ಘಕಾಲದವರೆಗೆ ಬಳಕೆಯಾಗದೆ ಉಳಿದಿರುವ ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಖಾತೆಗಳನ್ನು ಹಂತಹಂತವಾಗಿ ರದ್ದುಗೊಳಿಸಲು ಸೂಚಿಸಲಾಗಿದೆ. ಆದ್ದರಿಂದ ಏಪ್ರಿಲ್ 1ರ ಮೊದಲು ಮೊಬೈಲ್ ಸಂಖ್ಯೆಗಳನ್ನು ನವೀಕರಿಸಬೇಕೆಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಆದೇಶಿಸಿದೆ.
ಮತ್ತೊಂದು ಮಹತ್ವದ ಆರ್ಥಿಕ ಬದಲಾವಣೆಯೆಂದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಬದಲಾಯಿಸುವ ಏಕೀಕೃತ ಪಿಂಚಣಿ ಯೋಜನೆ. 2024ರ ಆಗಸ್ಟ್ನಲ್ಲಿ ಪರಿಚಯಿಸಲಾದ ಯುಪಿಎಸ್, ಏಪ್ರಿಲ್ 1ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಬದಲಾವಣೆಯಿಂದ ಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಲಿದೆ. ಕನಿಷ್ಠ 25 ವರ್ಷಗಳ ಸೇವೆಯನ್ನು ಹೊಂದಿರುವವರು ತಮ್ಮ ಕೊನೆಯ 12 ತಿಂಗಳ ಸರಾಸರಿ ಮೂಲ ವೇತನದ ಶೇಕಡ 50ರಷ್ಟಕ್ಕೆ ಸಮಾನವಾದ ಪಿಂಚಣಿಯನ್ನು ಪಡೆಯಲಿದ್ದಾರೆ.
ಬ್ಯಾಂಕಿಂಗ್ ವಲಯದಲ್ಲಿ, ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾದಂತಹ ಪ್ರಮುಖ ಬ್ಯಾಂಕ್ಗಳು ಕನಿಷ್ಠ ಬ್ಯಾಲೆನ್ಸ್ ನಿಯಮಗಳನ್ನು ನವೀಕರಿಸುತ್ತಿದ್ದು, ಪರಿಷ್ಕೃತ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಸಾಧ್ಯವಾಗದಿದ್ದರೆ, ಗ್ರಾಹಕರು ಹೊಸ ಬ್ಯಾಂಕಿಂಗ್ ಮಾರ್ಗಸೂಚಿಗಳ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications