ಹೆಸರು ಬದಲಿಸೋದು ಬಿಜೆಪಿಗೆ ಕಷ್ಟದ ಕೆಲಸವಲ್ಲ ಬಿಡಿ: ಹರ್ಯಾಣ ಮಾಜಿ ಸಿಎಂ ಹೂಡಾ
ಬಿಜೆಪಿಗೆ ಹೆಸರು ಬದಲಿಸುವುದೇನು ಕಷ್ಟದ ಕೆಲಸವಲ್ಲ. ಅದು ನಗರಕ್ಕೆ, ಹಳ್ಳಿಗೆ, ಇದೀಗ ಪ್ರಾಧಿಕಾರಗಳಿಗೂ ಹೆಸರು ಬದಲಿಸುತ್ತಿದೆ ಎಂದು ಹರ್ಯಾಣ ಮಾಜಿ ಸಿಎಂ ಭುಪಿಂದರ್ ಸಿಂಗ್ ಹೂಡಾ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.
ಹರ್ಯಾಣ, ಜೂನ್ 02: ಹರ್ಯಾಣ ಅರ್ಬನ್ ಡೆವಲಪ್ ಮೆಂಟ್ ಅಥಾರಿಟಿ (ಹೂಡಾ) ವನ್ನು ಇನ್ಮೇಲ್ ಹರ್ಯಾಣ ಶೆಹರಿ ವಿಕಾಸ್ ಪ್ರಾಧಿಕಾರ (ಎಚ್ಎಸ್ ವಿಪಿ) ಎಂದು ಕರೆಯಬೇಕೆಂದು ಹರ್ಯಾಣ ಸಚಿವಾಲಯ ಸಭೆಯಲ್ಲಿ ನಿನ್ನೆ (ಜೂನ್ 01) ನಿರ್ಧರಿಸಲಾಗಿದೆ.
ಹರ್ಯಾಣ ಅರ್ಬನ್ ಡೆವಲಪ್ ಮೆಂಟ್ ಅಥಾರಿಟಿ ಎಂಬುದನ್ನು ಸಂಕ್ಷಿಪ್ತವಾಗಿ ಹೂಡಾ ಎಂದು ಕರೆಯಲಾಗುತ್ತದೆ. ಈ ಉಚ್ಚಾರಣೆ ಹರ್ಯಾಣದ ಮಾಜಿ ಮುಖ್ಯಮಂತ್ರಿ ಭುಪಿಂದರ್ ಸಿಂಗ್ ಹೂಡಾ ಹೆಸರಿನಂತೆಯೇ ಕೇಳುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ!

ಹರ್ಯಾಣದ ಹಾಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಇಲ್ಲಿನ ಆರೋಗ್ಯ ಸಚಿವ ಅನಿಲ್ ವಿಜ್, ಯಾರಾದರೂ ಹರ್ಯಾಣ ಅರ್ಬನ್ ಡೆವಲಪ್ ಮೆಂಟ್ ಅಥಾರಿಟಿಯನ್ನು ಉಲ್ಲೇಖಿಸುವಾಗ ಹೂಡಾ ಎಂದು ಉಚ್ಚಾರಣೆ ಮಾಡಿದರೆ ಕೇಳುಗರಿಗೆ ಮಾಜಿ ಮುಖ್ಯಮಂತ್ರಿಯವರ ಬಗ್ಗೆ ಮಾತನಾಡುತ್ತಿದ್ದಾರೆ ಅನ್ನಿಸುತ್ತದೆ, ಇದರಿಂದ ಗೊಂದಲವಾಗುತ್ತದೆ. ಆದ್ದರಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.[ದೆಹಲಿ ಸೇರಿದಂತೆ ಉತ್ತರಭಾರತದ ಹಲವೆಡೆ ಭೂಕಂಪ]
ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಭುಪಿಂದರ್ ಸಿಂಗ್ ಹೂಡಾ, ಬಿಜೆಪಿಗೆ ಹೆಸರು ಬದಲಿಸುವುದೇನು ಕಷ್ಟದ ಕೆಲಸವಲ್ಲ. ಅದು ನಗರಕ್ಕೆ, ಹಳ್ಳಿಗೆ, ಇದೀಗ ಪ್ರಾಧಿಕಾರಗಳಿಗೂ ಹೆಸರು ಬದಲಿಸುತ್ತಿದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications