Chardham Yatra: ಇಂದಿನಿಂದ ಭಕ್ತರಿಗೆ ಕೇದಾರನಾಥ ಶಿವನ ದರ್ಶನಕ್ಕೆ ಅವಕಾಶ
ರುದ್ರಪ್ರಯಾಗ ಏಪ್ರಿಲ್ 25: ಹಿಮಾಲಯ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ದೇವಾಲಯ ಕೇದಾರನಾಥ. ಶಿವನ ವಾಸಸ್ಥಾನವೂ ಆಗಿರುವ, ಉತ್ತರಾಖಂಡ್ನ ನಾಲ್ಕು ಧಾಮಗಳಲ್ಲಿ ಒಂದಾದ ಈ ದೇವಾಲಯದ ಬಾಗಿಲನ್ನು ಪ್ರತಿವರ್ಷ ಅಕ್ಷಯ ತೃತೀಯದಂದು ತೆರೆಯಲಾಗುತ್ತದೆ. ಅಂತೆಯೇ ಏಪ್ರಿಲ್ 22 ರಂದು ಗಂಗೋತ್ರಿ ಮತ್ತು ಯಮುನೋತ್ರಿ ಧಾಮಗಳ ಬಾಗಿಲು ತೆರೆಯುವುದರೊಂದಿಗೆ ಚಾರ್ ಧಾಮ್ ಯಾತ್ರೆ ಪ್ರಾರಂಭವಾಗಿದೆ.
ಕೇದಾರನಾಥ ದೇವಾಲಯ ಬಾಗಿಲನ್ನು ಏಪ್ರಿಲ್ 25 ರಂದು ಬೆಳಿಗ್ಗೆ 6: 20 ಕ್ಕೆ ತೆರೆಯಲಾಯಿತು. ಕೇದಾರನಾಥ ಯಾತ್ರೆ ದೇಶದ ಹಿಂದೂಗಳ ಪ್ರಮುಖ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ನಾಲ್ಕು ಪವಿತ್ರ ಕ್ಷೇತ್ರಗಳಲ್ಲಿ ಕೇದಾರನಾಥವೂ ಸೇರಿದೆ. ಕೇದಾರನಾಥ, ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿಯನ್ನು ನಾಲ್ಕು ಪವಿತ್ರ ಕ್ಷೇತ್ರಗಳು ಎಂದು ಕರೆಯಲಾಗುತ್ತದೆ. ಈ ಎಲ್ಲಾ ನಾಲ್ಕು ದೇವಾಲಯಗಳಿಗೆ ತೀರ್ಥಯಾತ್ರೆಯನ್ನು ಚಾರ್ ಧಾಮ್ ಯಾತ್ರೆ ಎಂದು ಕರೆಯಲಾಗುತ್ತದೆ.

ಯಮುನೋತ್ರಿಯನ್ನು ಯಮುನಾ ದೇವಿಗೆ ಮತ್ತು ಗಂಗೋತ್ರಿಯನ್ನು ಗಂಗಾ ಮಾತೆಗೆ ಸಮರ್ಪಿಸಲಾಗಿದೆ. ಕೇದಾರನಾಥವು ಭಗವಾನ್ ಶಿವನಿಗೆ ಸಮರ್ಪಿತವಾದ ದೇಗುಲವಾದರೆ, ಬದರಿನಾಥವು ವಿಷ್ಣುವಿಗೆ ಸಮರ್ಪಿತವಾದ ದೇವಾಲಯವಾಗಿದೆ.
ಕಳೆದ ಎರಡು ದಿನಗಳಿಂದ ಹವಾಮಾನ ವೈಪರಿತ್ಯದಿಂದಾಗಿ ಚಾರ್ಧಾಮ್ ಪ್ರವೇಶಕ್ಕೆ ಅಡ್ಡಿಯನ್ನುಂಟು ಮಾಡಿದೆ. ಅಧಿಕ ಮಳೆ ಮತ್ತು ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ.

ಭೈರವ ಗದೆರೆ ಬಳಿ ಹಿಮನದಿ ಬರುವ ಸಾಧ್ಯತೆ ಇದೆ. ಇದರಿಂದ ಯಾತ್ರೆಯ ಮಾರ್ಗವನ್ನು ನಿರ್ಬಂಧಿಸಲಾಗಿದೆ. ಮಾತ್ರವಲ್ಲದೆ ಕೆಲವು ಕುಡಿಯುವ ನೀರಿನ ಮಾರ್ಗಗಳು, ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗಿದೆ. ಜೊತೆಗೆ ಕೇದಾರನಾಥ ಧಾಮದಲ್ಲಿ ನಿರ್ಮಿಸಲಾಗಿದ್ದ ಟೆಂಟ್ಗಳಿಗೂ ಹಾನಿಯಾಗಿದೆ.
ಇಂದು ಹವಾಮಾನವು ಉತ್ತಮವಾಗಿದೆ. ಹಿಮದಿಂದ ತುಂಬಿದ ಕೇದಾರನಾಥ ಧಾಮ ಮತ್ತು ಯಾತ್ರಾ ಮಾರ್ಗವನ್ನು ಸರಿಪಡಿಸುವ ಕೆಲಸದಲ್ಲಿ ಕಾರ್ಮಿಕರು ತೊಡಗಿದ್ದಾರೆ. ಅದನ್ನು ಸರಿಪಡಿಸಲು ಕಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಡೆಹಿಡಿಯಲಾದ ಕೇದಾರನಾಥ ಯಾತ್ರೆ ಮಾರ್ಗವನ್ನು ಸಂಚಾರ ಸುಗಮಗೊಳಿಸಲಾಗಿದ್ದು, ಸಕಾಲದಲ್ಲಿ ಎಲ್ಲ ವ್ಯವಸ್ಥೆಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳಿಂದ ಸಿದ್ಧತೆ ಮತ್ತು ವ್ಯವಸ್ಥೆಗಳನ್ನು ತ್ವರಿತಗೊಳಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಮಯೂರ್ ಅವರು ತಿಳಿಸಿದ್ದಾರೆ.

ಉತ್ತರಾಖಂಡವು ಹಲವಾರು ದೇವಾಲಯಗಳಿಗೆ ನೆಲೆಯಾಗಿದೆ. ಕೇದಾರನಾಥ ದೇವಾಲಯವು ಚಳಿಗಾಲದ ತಿಂಗಳುಗಳಲ್ಲಿ ಮುಚ್ಚಲ್ಪಡುತ್ತದೆ ಮತ್ತು ಇದು ಬೇಸಿಗೆಯ ತಿಂಗಳುಗಳಲ್ಲಿ ಮಾತ್ರ ತೆರೆಯುತ್ತದೆ. ಪ್ರಪಂಚದಾದ್ಯಂತದ ಭಕ್ತರು ಆರು ತಿಂಗಳ ಕಾಲ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಚಳಿಗಾಲದ ತಿಂಗಳಲ್ಲಿ ಅಂದರೆ, ನವೆಂಬರ್ ನಿಂದ ಏಪ್ರಿಲ್ ಮಧ್ಯದವರೆಗೆ ದೇವಾಲಯವನ್ನು ಮುಚ್ಚಲಾಗುತ್ತದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications