Get Updates
Get notified of breaking news, exclusive insights, and must-see stories!

Chardham Yatra 2024: ಯಮುನೋತ್ರಿಯಲ್ಲಿ ಭಕ್ತ ಸಾಗರ, ಉಸಿರುಗಟ್ಟಿಸುವ ವಾತಾವರಣ- ಯಾತ್ರೆ ಮುಂದೂಡುವಂತೆ ಮನವಿ

ಉತ್ತರಾಖಂಡದ ಚಾರ್‌ಧಾಮ್ ಯಾತ್ರೆಯಲ್ಲಿ ಭಕ್ತ ಸಾಗರವೇ ಕಂಡು ಬಂದಿದ್ದು ಯಮುನೋತ್ರಿಯಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಇಂದು (ಮೇ 12) ಭಾನುವಾರವಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ಉತ್ತರಕಾಶಿ ಪೊಲೀಸರು ಯಾತ್ರೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ .

ಉತ್ತರಾಖಂಡದಲ್ಲಿ ಮೇ 10ರಂದು ಬಾಬಾ ಕೇದಾರನಾಥನ ಬಾಗಿಲು ತೆರೆಯುವ ಮೂಲಕ ಚಾರ್ ಧಾಮ್ ಯಾತ್ರೆ ಆರಂಭವಾಗಿದೆ.

Chardham Yatra 2024 Huge number of devotees at Yamunotri- requested to postpone the Yatra

ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಯಾತ್ರೆಗೆ ಹೊರಟಿದ್ದರಿಂದ ಅಪಾರ ಜನಸ್ತೋಮ ಕಂಡು ಬರುತ್ತಿದೆ. ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು, ಭಕ್ತರು ತಮ್ಮ ಯಾತ್ರೆಯನ್ನು ಮುಂದೂಡಲು ಉತ್ತರಕಾಶಿ ಪೊಲೀಸರು ಭಾನುವಾರ ಒತ್ತಾಯಿಸಿದ್ದಾರೆ.

ಯಮುನೋತ್ರಿಯ ಕಿರಿದಾದ ರಸ್ತೆಗಳಲ್ಲಿ ಭಕ್ತರ ನೂಕುನುಗ್ಗಲು ಕಂಡುಬಂದಿದೆ. ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಭಕ್ತರು ಯಮುನೋತ್ರಿ ಧಾಮವನ್ನು ತಲುಪಿದ್ದಾರೆ. ಈಗ ಅಲ್ಲಿ ಜಾಗ ಉಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರಣಕ್ಕಾಗಿ ಭಕ್ತರಿಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮನವಿ ಮಾಡಲಾಗುತ್ತಿದೆ. ಭಕ್ತರು ತಮ್ಮ ಯಮುನೋತ್ರಿ ಯಾತ್ರೆಯನ್ನು ಮುಂದೂಡಬೇಕು ಎಂದು ಉತ್ತರಕಾಶಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಮುನೋತ್ರಿ ಬಳಿ ಭಾರೀ ಜನಸ್ತೋಮ

ಗರ್ವಾಲ್ ಹಿಮಾಲಯದಲ್ಲಿರುವ ಯಮುನೋತ್ರಿ ದೇವಸ್ಥಾನದ ಬಾಗಿಲು ತೆರೆದ ನಂತರ, ಶನಿವಾರ ದೇವಾಲಯಕ್ಕೆ ಹೋಗುವ ಕಿರಿದಾದ ಗುಡ್ಡದ ರಸ್ತೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಕಂಡುಬಂದರು.

Chardham Yatra 2024 Huge number of devotees at Yamunotri- requested to postpone the Yatra

ಗರ್ವಾಲ್ ಹಿಮಾಲಯದ ಯಮುನೋತ್ರಿ ದೇವಸ್ಥಾನದ ಬಾಗಿಲು ಭಕ್ತರಿಗೆ ತೆರೆದ ಒಂದು ದಿನದ ನಂತರ, ಅನೇಕ ಜನರು ಗಂಟೆಗಳ ಕಾಲ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಈ ವಿಡಿಯೋಗಳು ನಿಜಕ್ಕೂ ಬೆಚ್ಚಿ ಬೀಳಿಸುವಂತಿವೆ. ಗುಡ್ಡಗಾಡು ಪ್ರದೇಶದಲ್ಲಿ ಅಂಟಿಕೊಂಡಿರುವ ಕಿರಿದಾದ ರಸ್ತೆಯಲ್ಲಿ ಜನಸ್ತೋಮವೇ ಕಂಡು ಬಂದಿದೆ.

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ 2024

ಈ ವರ್ಷ ಚಾರ್ ಧಾಮ್ ಯಾತ್ರೆಯು ಮೇ 10ರಂದು ಪ್ರಾರಂಭವಾಯಿತು. ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ಸೇರಿದಂತೆ ಮೂರು ದೇವಾಲಯಗಳ ಬಾಗಿಲು ತೆರೆಯಲಾಯಿತು. ಇಂದು ಅಂದರೆ ಮೇ 12 ರಂದು ಬದರಿನಾಥದ ಬಾಗಿಲು ತೆರೆಯಲಾಗಿದೆ.

ಚಾರ್ ಧಾಮ್ ಯಾತ್ರೆಯು ಹಿಂದೂ ಧರ್ಮದಲ್ಲಿ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಯಾತ್ರೆ ಸಾಮಾನ್ಯವಾಗಿ ಏಪ್ರಿಲ್-ಮೇ ನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯುತ್ತದೆ. ಚಾರ್ ಧಾಮ್ ಯಾತ್ರೆಯನ್ನು ಪ್ರದಕ್ಷಿಣಾಕಾರವಾಗಿ ಪೂರ್ಣಗೊಳಿಸಬೇಕು ಎಂದು ನಂಬಲಾಗಿದೆ.

ಆದ್ದರಿಂದ, ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ, ಗಂಗೋತ್ರಿಯ ಕಡೆಗೆ ಚಲಿಸುತ್ತದೆ, ನಂತರ ಕೇದಾರನಾಥಕ್ಕೆ ಹೋಗಿ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.

ಬದರಿನಾಥ ದೇವಾಲಯವು 10,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿದೆ. ಚಾರ್ ಧಾಮ್ ಯಾತ್ರೆ ಕಳೆದ ಎರಡು ವರ್ಷಗಳಲ್ಲಿ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+