Chandrababu Naidu: ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಆರೋಪಪಟ್ಟಿ
ವಿಜಯವಾಡ, ಏಪ್ರಿಲ್.05: ಬಹುಕೋಟಿ ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣದ ತನಿಖೆ ನಡೆಸುತ್ತಿರುವ ಆಂಧ್ರಪ್ರದೇಶ ರಾಜ್ಯ ಅಪರಾಧ ತನಿಖಾ ಇಲಾಖೆ (ಎಪಿಸಿಐಡಿ) ಗುರುವಾರ ವಿಜಯವಾಡದ ಎಸಿಬಿ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಹೆಸರಿಸಿದೆ.
ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ (APSSDC) ಪ್ರಸ್ತುತ ಅಧ್ಯಕ್ಷ ಕೆ ಅಜಯ್ ರೆಡ್ಡಿ ಅವರ ದೂರಿನ ಆಧಾರದ ಮೇಲೆ ಸಿಐಡಿ ಅಧಿಕಾರಿಗಳು ಡಿಸೆಂಬರ್ 2021 ರಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ 370 ಕೋಟಿ ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಐಡಿ ಈಗ ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಪಟ್ಟಿಯಲ್ಲಿ ತನಿಖಾ ಸಂಸ್ಥೆಯು ಮಾಜಿ ಸಚಿವ ಕಿಂಜರಾಪು ಅಚ್ಚಂನಾಯ್ಡು, ಎಪಿಎಸ್ಎಸ್ಡಿಸಿಯ ಮಾಜಿ ಎಂಡಿ ಮತ್ತು ಸಿಇಒ ಘಂಟಾ ಸುಬ್ಬಾ ರಾವ್, ಎಪಿಎಸ್ಎಸ್ಡಿಸಿಯ ಮಾಜಿ ನಿರ್ದೇಶಕ ಡಾ ಕೆ ಲಕ್ಷ್ಮೀನಾರಾಯಣ ಮತ್ತು ಸೀಮೆನ್ಸ್, ಡಿಸೈನ್ಟೆಕ್, ಪಿವಿಎಸ್ಪಿ ಸ್ಕಿಲರ್ ಮತ್ತು ಇತರ ಶೆಲ್ ಕಂಪನಿಗಳ ಪ್ರತಿನಿಧಿಗಳ ಹೆಸರನ್ನು ಉಲ್ಲೇಖಿಸಿದೆ.
ಮೂಲಗಳ ಪ್ರಕಾರ, ಚಂದ್ರಬಾಬು ನಾಯ್ಡು ಅವರು ಮಾಜಿ ಸಚಿವರೊಂದಿಗೆ ಸೇರಿ ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ. ಕೌಶಲಾಭಿವೃದ್ಧಿ ನಿಗಮವನ್ನು ಸಚಿವ ಸಂಪುಟವನ್ನು ಬೈಪಾಸ್ ಮಾಡಿ ಮತ್ತು ಅಸ್ತಿತ್ವದಲ್ಲಿರುವ ನಿಯಮಗಳನ್ನು ಬದಲಾಯಿಸಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

3,300 ಕೋಟಿ ರೂಪಾಯಿಗಳ ಹೈಪರ್ ಇನ್ಫ್ಲೇಟೆಡ್ ದರದಲ್ಲಿ ಸೀಮೆನ್ಸ್ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಯನ್ನು ಅನುಮೋದಿಸುವ ಆದೇಶಗಳನ್ನು ಅವರು ಹೊರಡಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಇದಲ್ಲದೆ, ಚಂದ್ರಬಾಬು ನಾಯ್ಡು ಮತ್ತು ಅಚ್ಚಂನಾಯ್ಡು ಅವರ ರಾಜ್ಯ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅನುದಾನದ ರೂಪದಲ್ಲಿ ಬಿಡುಗಡೆಯಾದ 371 ಕೋಟಿ ರೂ.ಗಳಲ್ಲಿ ಹೆಚ್ಚಿನ ಭಾಗವನ್ನು ಎಲ್ಲಾ ಆರೋಪಿಗಳು ಕಬಳಿಸಿದ್ದಾರೆ ಎಂದಿದೆ.
ಕೌಶಲ್ಯ ಕೇಂದ್ರಗಳ ಸ್ಥಾಪನೆಗೆ ಡಿಸೈನ್ಟೆಕ್ ಏನೂ ಖರ್ಚು ಮಾಡಿಲ್ಲ: ಸಿಐಡಿ
ಡಿಸೈನ್ಟೆಕ್ ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಉಪಕರಣಗಳು ಮತ್ತು ಸಾಫ್ಟ್ವೇರ್ಗಳನ್ನು ಖರೀದಿಸಲು ಏನನ್ನೂ ಖರ್ಚು ಮಾಡಿಲ್ಲ ಎಂದು ತನಿಖೆಯ ಸಮಯದಲ್ಲಿ ಕಂಡುಬಂದಿದೆ ಎಂದು ಸಿಐಡಿ ಅಧಿಕಾರಿಗಳು ಎಸಿಬಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಹಗರಣವು 2017-18ರಲ್ಲಿ ಮೊದಲು ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಡಿಸೆಂಬರ್ 2021 ರಲ್ಲಿ ಸೆಕ್ಷನ್ 120(B), 166, 167, 418, 420, 465, 468, 471, 477-A, 409, 201,109 r/w 34 & 37 3IPC, ಭ್ರಷ್ಟಾಚಾರ ತಡೆ ಕಾಯಿದೆ, 1988 ರ r/w 13(1) (c) & (d) ಸೆಕ್ಷನ್ಗಳ ಅಡಿಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications