Breaking: ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ!
ರಾಜಸ್ಥಾನದ ಭರತ್ಪುರದಲ್ಲಿ ಇಂದು ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿಗಳು ರಕ್ಷಣ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜಸ್ಥಾನದ ಭರತ್ಪುರದಲ್ಲಿ ಇಂದು ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿಗಳು ರಕ್ಷಣ ಕಾರ್ಯದಲ್ಲಿ ತೊಡಗಿದ್ದಾರೆ. ತಾಂತ್ರಿಕ ದೋಷದಿಂದಾಗಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಬೆಳಗ್ಗೆ ಭಾರತ್ಪುರದ ಸೇವರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ವೀಸಾದಲ್ಲಿ ಭಾರತೀಯ ಸೇನೆಯ ಫೈಟರ್ ಜೆಟ್ ಪತನಗೊಂಡಿದೆ. ಫೈಟರ್ ಜೆಟ್ ಅಪಘಾತಕ್ಕೀಡಾದ ಬೆನ್ನಲ್ಲೇ ಅದು ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡಿದೆ. ಈ ಫೈಟರ್ ಜೆಟ್ ಹಳ್ಳಿಯ ಸಮೀಪವಿರುವ ಬಂಜರು ಭೂಮಿಯಲ್ಲಿ ಪತನಗೊಂಡಿದ್ದು ಸ್ಥಳೀಯರಲ್ಲಿ ಕೆಲ ಹೊತ್ತು ಆತಂಕ ಮನೆ ಮಾಡಿತ್ತು. ಆದರೆ ಭಾರೀ ಆಪಾಯವೊಂದು ತಪ್ಪಿದಂತಾಗಿದೆ. ವಿಮಾನ ಪತನದ ಬಗ್ಗೆ ಮಾಹಿತಿ ಬಂದ ತಕ್ಷಣ ಎಲ್ಲಾ ಪೊಲೀಸ್ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ರಾಜಸ್ಥಾನದ ಭರತ್ಪುರ ಜಿಲ್ಲೆಯ ಉಚ್ಚೈನ್ ಪ್ರದೇಶದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎನ್ನಲಾದ ವಿಮಾನ ಉತ್ತರ ಪ್ರದೇಶದ ಆಗ್ರಾದಿಂದ ಹೊರಟಿತ್ತು. ಸದ್ಯ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಕೂಡಲೇ ಅಪಘಾತ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸದಿರುವುದು ಸಮಾಧಾನದ ಸಂಗತಿ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ತಿಳಿಸಿದ್ದಾರೆ. ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಜಿಲ್ಲಾಧಿಕಾರಿ ಅಲೋಕ್ ರಂಜನ್ ಪ್ರಕಾರ, "ಪೊಲೀಸರು ಮತ್ತು ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications