ಧರ್ಮ ಸಂಸತ್ತಿನಲ್ಲಿ ಬಾಬಾ vs ಶಂಕರ ಜಟಾಪಟಿ
ರಾಯಪುರ್, ಆ.25: ಹಿಂದೂ ಧರ್ಮ ಸಂಸತ್ತಿನ ಮೊದಲ ದಿನವೇ ದ್ವಾರಕಾಪೀಠ ಶಂಕರಾಚಾರ್ಯ್ ಸ್ವರೂಪಾನಂದ ಸರಸ್ವತಿ ಅನುಯಾಯಿಗಳು ಹಾಗೂ ಸಾಯಿಬಾಬಾ ಭಕ್ತರ ನಡುವೆ ಜಟಾಪಟಿ ನಡೆದಿದೆ. ಛತ್ತೀಸ್ ಗಢದ ಕಬಿರ್ ಧಾಮ್ ಜಿಲೆಯ ಕವರ್ಧ ನಗರದಲ್ಲಿ ಹಿಂದೂ ಧರ್ಮ ಸಂಸತ್ ಸಭೆ ನಡೆದಿದೆ.
ಈ ಸಂಸತ್ತಿನ ಶಂಕರಾಚಾರ್ಯರ ಭಕ್ತರು ಆಕ್ರೋಶಗೊಂಡು ಸಾಯಿಬಾಬಾ ಭಕ್ತರನ್ನ ವೇದಿಕೆಯಿಂದ ಹೊರ ನೂಕಿದ ಘಟನೆ ನಡೆದಿದೆ. ಸ್ವತಃ ಶಂಕರಾಚಾರ್ಯ ಸ್ವರೂಪಾನಂದಸ್ವಾಮಿಗಳು ಮಧ್ಯಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಪೊಲೀಸರು ಕೂಡ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿದ ಪರಿಸ್ಥಿತಿ ಹದ್ದುಮೀರದಂತೆ ಎಚ್ಚರವಹಿಸಿದರು ಎಂದು ತಿಳಿದು ಬಂದಿದೆ.
ಎರಡು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಸಮ್ಮೇಳನದಲ್ಲಿ 400 ಧಾರ್ಮಿಕ ಮುಖಂಡರು ಭಾಗವಹಿಸಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮಿ ಸೇರಿದಂತೆ ಎಲ್ಲಾ 13 ಶಂಕರಾಚಾರ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಸಾಯಿಬಾಬಾ ದೇವರಲ್ಲ: ಸಾಯಿಬಾಬಾ ದೇವರಲ್ಲ ಎಂದು ದ್ವಾರಕಾಪೀಠದ ಶಂಕರಾಚಾರ್ಯರು ಹೇಳಿದ್ದು, ಇದಕ್ಕೆ ಅನೇಕ ಹಿಂದೂ ಧಾರ್ಮಿಕ ಮುಖಂಡರು ದನಿಗೂಡಿಸಿದ್ದು ಸಹಜವಾಗೇ ಸಾಯಿಬಾಬಾ ಭಕ್ತರನ್ನು ಕೆರಳಿಸಿದೆ. ಧರ್ಮ ಸಂಸತ್ತಿನಲ್ಲಿ ಸಾಯಿಬಾಬಾ ವಿರುದ್ಧ ದನಿ ಎತ್ತಿದ ಮುಖಂಡರು ಎದುರಿಗೆ ಸಿಕ್ಕದ ತಕ್ಷಣ ಕೆರಳಿ ಅವರ ಮೇಲೆ ಮುಗಿ ಬಿದ್ದಿದ್ದಾರೆ.
ಸಾಯಿಬಾಬಾ ಅವರನ್ನು ದೇವರ ಬದಲು ಸಂತನಂತೆ ಕಾಣಲು ಕೆಲವರು ಯತ್ನಿಸಿದ್ದುಂಟು ಅದರೆ, ಶಂಕರಾಚಾರ್ಯರ ವಿಚಾರಧಾರೆ ಒಪ್ಪಿಕೊಳ್ಳಲು ಅಥವಾ ಇತರೆ ಧಾರ್ಮಿಕ ಮುಖಂಡರ ಮಾತುಗಳನ್ನು ಕೇಳಲು ಸಾಯಿಬಾಬಾ ಭಕ್ತರು ತಯಾರಿರಲಿಲ್ಲ, ಈ ಬಗ್ಗೆ ಪ್ರಶ್ನಿಸಲು ವೇದಿಕೆ ಏರಿದ ಸಾಯಿ ಭಕ್ತರನ್ನು ಸ್ವರೂಪಾನಂದ ಭಕ್ತರು ಕೆಳಗೆ ನೂಕಿದ್ದಾರೆ. ಅಲ್ಲಿಂದ ಮಾತಿನ ಚಕಮಕಿ, ಕೈಕೈ ಮಿಲಾಯಿಸುವ ಹಂತ ಮುಟ್ಟಿದೆ.
ಸಾಯಿಬಾಬಾ ದೇವರಲ್ಲ ಎಂಬ ವಿಷಯವಲ್ಲದೆ, ರಾಮ ಮಂತ್ರ ಜಪಿಸಬೇಡಿ, ಗಂಗೆಯಲ್ಲಿ ಸ್ನಾನ ಮಾಡಬೇಡಿ ಎಂಬ ವಿವಾದಿತ ಹೇಳಿಕೆಯನ್ನು 90 ವರ್ಷ ವಯಸ್ಸಿನ ಸ್ವರೂಪಾನಂದ ಸ್ವಾಮೀಜಿ ನೀಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications