ಧರ್ಮ ಸಂಸತ್ತಿನಲ್ಲಿ ಬಾಬಾ vs ಶಂಕರ ಜಟಾಪಟಿ
ರಾಯಪುರ್, ಆ.25: ಹಿಂದೂ ಧರ್ಮ ಸಂಸತ್ತಿನ ಮೊದಲ ದಿನವೇ ದ್ವಾರಕಾಪೀಠ ಶಂಕರಾಚಾರ್ಯ್ ಸ್ವರೂಪಾನಂದ ಸರಸ್ವತಿ ಅನುಯಾಯಿಗಳು ಹಾಗೂ ಸಾಯಿಬಾಬಾ ಭಕ್ತರ ನಡುವೆ ಜಟಾಪಟಿ ನಡೆದಿದೆ. ಛತ್ತೀಸ್ ಗಢದ ಕಬಿರ್ ಧಾಮ್ ಜಿಲೆಯ ಕವರ್ಧ ನಗರದಲ್ಲಿ ಹಿಂದೂ ಧರ್ಮ ಸಂಸತ್ ಸಭೆ ನಡೆದಿದೆ.
ಈ ಸಂಸತ್ತಿನ ಶಂಕರಾಚಾರ್ಯರ ಭಕ್ತರು ಆಕ್ರೋಶಗೊಂಡು ಸಾಯಿಬಾಬಾ ಭಕ್ತರನ್ನ ವೇದಿಕೆಯಿಂದ ಹೊರ ನೂಕಿದ ಘಟನೆ ನಡೆದಿದೆ. ಸ್ವತಃ ಶಂಕರಾಚಾರ್ಯ ಸ್ವರೂಪಾನಂದಸ್ವಾಮಿಗಳು ಮಧ್ಯಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಪೊಲೀಸರು ಕೂಡ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿದ ಪರಿಸ್ಥಿತಿ ಹದ್ದುಮೀರದಂತೆ ಎಚ್ಚರವಹಿಸಿದರು ಎಂದು ತಿಳಿದು ಬಂದಿದೆ.
ಎರಡು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಸಮ್ಮೇಳನದಲ್ಲಿ 400 ಧಾರ್ಮಿಕ ಮುಖಂಡರು ಭಾಗವಹಿಸಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮಿ ಸೇರಿದಂತೆ ಎಲ್ಲಾ 13 ಶಂಕರಾಚಾರ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಸಾಯಿಬಾಬಾ ದೇವರಲ್ಲ: ಸಾಯಿಬಾಬಾ ದೇವರಲ್ಲ ಎಂದು ದ್ವಾರಕಾಪೀಠದ ಶಂಕರಾಚಾರ್ಯರು ಹೇಳಿದ್ದು, ಇದಕ್ಕೆ ಅನೇಕ ಹಿಂದೂ ಧಾರ್ಮಿಕ ಮುಖಂಡರು ದನಿಗೂಡಿಸಿದ್ದು ಸಹಜವಾಗೇ ಸಾಯಿಬಾಬಾ ಭಕ್ತರನ್ನು ಕೆರಳಿಸಿದೆ. ಧರ್ಮ ಸಂಸತ್ತಿನಲ್ಲಿ ಸಾಯಿಬಾಬಾ ವಿರುದ್ಧ ದನಿ ಎತ್ತಿದ ಮುಖಂಡರು ಎದುರಿಗೆ ಸಿಕ್ಕದ ತಕ್ಷಣ ಕೆರಳಿ ಅವರ ಮೇಲೆ ಮುಗಿ ಬಿದ್ದಿದ್ದಾರೆ.
ಸಾಯಿಬಾಬಾ ಅವರನ್ನು ದೇವರ ಬದಲು ಸಂತನಂತೆ ಕಾಣಲು ಕೆಲವರು ಯತ್ನಿಸಿದ್ದುಂಟು ಅದರೆ, ಶಂಕರಾಚಾರ್ಯರ ವಿಚಾರಧಾರೆ ಒಪ್ಪಿಕೊಳ್ಳಲು ಅಥವಾ ಇತರೆ ಧಾರ್ಮಿಕ ಮುಖಂಡರ ಮಾತುಗಳನ್ನು ಕೇಳಲು ಸಾಯಿಬಾಬಾ ಭಕ್ತರು ತಯಾರಿರಲಿಲ್ಲ, ಈ ಬಗ್ಗೆ ಪ್ರಶ್ನಿಸಲು ವೇದಿಕೆ ಏರಿದ ಸಾಯಿ ಭಕ್ತರನ್ನು ಸ್ವರೂಪಾನಂದ ಭಕ್ತರು ಕೆಳಗೆ ನೂಕಿದ್ದಾರೆ. ಅಲ್ಲಿಂದ ಮಾತಿನ ಚಕಮಕಿ, ಕೈಕೈ ಮಿಲಾಯಿಸುವ ಹಂತ ಮುಟ್ಟಿದೆ.
ಸಾಯಿಬಾಬಾ ದೇವರಲ್ಲ ಎಂಬ ವಿಷಯವಲ್ಲದೆ, ರಾಮ ಮಂತ್ರ ಜಪಿಸಬೇಡಿ, ಗಂಗೆಯಲ್ಲಿ ಸ್ನಾನ ಮಾಡಬೇಡಿ ಎಂಬ ವಿವಾದಿತ ಹೇಳಿಕೆಯನ್ನು 90 ವರ್ಷ ವಯಸ್ಸಿನ ಸ್ವರೂಪಾನಂದ ಸ್ವಾಮೀಜಿ ನೀಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications