ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ವಂಚನೆ ದೂರು
ಔರಂಗಾಬಾದ್, ಜನವರಿ 23: ತಮಗೆ 21 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಟ್ರಾವೆಲ್ ಏಜೆಂಟ್ ಒಬ್ಬರು ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಮಹಮ್ಮದ್ ಅಜರುದ್ದೀನ್ ಮತ್ತು ಇನ್ನಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಆದರೆ ಈ ಆರೋಪ ಆಧಾರರಹಿತವಾಗಿದ್ದು, ದೂರುದಾರನ ವಿರುದ್ಧ 100 ಕೋಟಿ ರೂ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಅಜರುದ್ದೀನ್ ಹೇಳಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಡ್ಯಾನಿಶ್ ಟೂರ್ಸ್ ಆಂಡ್ ಟ್ರಾವೆಲ್ಸ್ ಏಜೆನ್ಸಿ ಮಾಲೀಕ ಮೊಹಮ್ಮದ್ ಶಹಾಬ್, ಅಜರುದ್ದೀನ್ ಮತ್ತು ಇತರರಿಗಾಗಿ ಕಳೆದ ವರ್ಷದ ನವೆಂಬರ್ನಲ್ಲಿ ಸುಮಾರು 20.96 ಲಕ್ಷ ವೆಚ್ಚದಲ್ಲಿ ವಿವಿಧ ಅಂತಾರಾಷ್ಟ್ರೀಯ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಿದ್ದೆ. ಮಾಜಿ ಕ್ರಿಕೆಟಿಗ ಅಜರುದ್ದೀನ್ ಅವರ ಆಪ್ತ ಸಹಾಯಕ ಮುಜೀಬ್ ಖಾನ್ ಮನವಿಯಂತೆ ಟಿಕೆಟ್ ಬುಕ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಈ ಟಿಕೆಟ್ ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡುವುದಾಗಿ ಅಜರುದ್ದೀನ್ ಪದೇ ಪದೇ ಹೇಳುತ್ತಿದ್ದರೂ ಇದುವರೆಗೂ ಯಾವುದೇ ಹಣ ಬಂದಿಲ್ಲ ಎಂದು ಶಹಾಬ್ ಆರೋಪಿಸಿದ್ದಾರೆ.
ಹಣ ಪಾವತಿಗಾಗಿ ಕೇಳಿದಾಗ ಮುಜೀಬ್ ಖಾನ್ ಸಹವರ್ತಿ ಸುದೇಶ್ ಅವಕ್ಕಲ್ ಎಂಬಾತ ತಮಗೆ 10.6 ಲಕ್ಷ ರೂ. ವರ್ಗಾವಣೆ ಮಾಡಿರುವುದಾಗಿ ಇ-ಮೇಲ್ನಲ್ಲಿ ತಿಳಿಸಿದ್ದಾರೆ. ಆದರೆ ತಮಗೆ ಯಾವುದೇ ಹಣ ಬಂದಿಲ್ಲ. ನವೆಂಬರ್ 24ರಂದು ಅವಕ್ಕಲ್ ಮತ್ತು ನ.29ರಂದು ಮುಜೀಬ್ ಖಾನ್, ಹಣ ಪಾವತಿಯ ಚೆಕ್ ಚಿತ್ರವನ್ನು ವಾಟ್ಸಾಪ್ನಲ್ಲಿ ಕಳುಹಿಸಿದ್ದರು. ಆದರೆ ಅಂತಹ ಯಾವುದೇ ಚೆಕ್ ತಮಗೆ ಬಂದಿಲ್ಲ ಎಂದು ಶಹಾಬ್ ದೂರಿನಲ್ಲಿ ಹೇಳಿದ್ದಾರೆ.
ಮೊಹಮ್ಮದ್ ಅಜರುದ್ದೀನ್, ಮುಜೀಬ್ ಖಾನ್ ಮತ್ತು ಸುದೇಶ್ ಅವಕ್ಕಲ್ ವಿರುದ್ಧ ಶಹಾಬ್ ಅವರು ಬುಧವಾರ ಔರಂಗಾಬಾದ್ ಸಿಟಿ ಚೌಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
I strongly rubbish the false FIR filed against me in Aurangabad. I’m consulting my legal team, and would be taking actions as necessary pic.twitter.com/6XrembCP7T
— Mohammed Azharuddin (@azharflicks) January 22, 2020
ಈ ಬಗ್ಗೆ ಟ್ವಿಟ್ಟರ್ನಲ್ಲಿವ ವಿಡಿಯೋ ಹಂಚಿಕೊಂಡಿರುವ ಅಜರುದ್ದೀನ್, 'ಈ ದೂರಿನಲ್ಲಿ ಯಾವುದೇ ಸತ್ಯವಿಲ್ಲ. ಪ್ರಚಾರ ಪಡೆದುಕೊಳ್ಳುವ ಸಲುವಾಗಿ ಈ ರೀತಿ ಮಾಡಲಾಗಿದೆ. ಈ ದೂರಿನಲ್ಲಿ ಮಾಡಲಾಗಿರುವ ಆರೋಪಗಳು ಆಧಾರರಹಿತ. ದೂರುದಾರನ ವಿರುದ್ಧ ನಾನು 100 ಕೋಟಿ ರೂ ಮಾನಹಾನಿ ಪ್ರಕರಣ ದಾಖಲಿಸಲು ಕಾನೂನು ಸಲಹೆ ಪಡೆಯಲಿದ್ದೇನೆ' ಎಂದು ತಿಳಿಸಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications