ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ವಂಚನೆ ದೂರು
ಔರಂಗಾಬಾದ್, ಜನವರಿ 23: ತಮಗೆ 21 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಟ್ರಾವೆಲ್ ಏಜೆಂಟ್ ಒಬ್ಬರು ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಮಹಮ್ಮದ್ ಅಜರುದ್ದೀನ್ ಮತ್ತು ಇನ್ನಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಆದರೆ ಈ ಆರೋಪ ಆಧಾರರಹಿತವಾಗಿದ್ದು, ದೂರುದಾರನ ವಿರುದ್ಧ 100 ಕೋಟಿ ರೂ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಅಜರುದ್ದೀನ್ ಹೇಳಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಡ್ಯಾನಿಶ್ ಟೂರ್ಸ್ ಆಂಡ್ ಟ್ರಾವೆಲ್ಸ್ ಏಜೆನ್ಸಿ ಮಾಲೀಕ ಮೊಹಮ್ಮದ್ ಶಹಾಬ್, ಅಜರುದ್ದೀನ್ ಮತ್ತು ಇತರರಿಗಾಗಿ ಕಳೆದ ವರ್ಷದ ನವೆಂಬರ್ನಲ್ಲಿ ಸುಮಾರು 20.96 ಲಕ್ಷ ವೆಚ್ಚದಲ್ಲಿ ವಿವಿಧ ಅಂತಾರಾಷ್ಟ್ರೀಯ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಿದ್ದೆ. ಮಾಜಿ ಕ್ರಿಕೆಟಿಗ ಅಜರುದ್ದೀನ್ ಅವರ ಆಪ್ತ ಸಹಾಯಕ ಮುಜೀಬ್ ಖಾನ್ ಮನವಿಯಂತೆ ಟಿಕೆಟ್ ಬುಕ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಈ ಟಿಕೆಟ್ ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡುವುದಾಗಿ ಅಜರುದ್ದೀನ್ ಪದೇ ಪದೇ ಹೇಳುತ್ತಿದ್ದರೂ ಇದುವರೆಗೂ ಯಾವುದೇ ಹಣ ಬಂದಿಲ್ಲ ಎಂದು ಶಹಾಬ್ ಆರೋಪಿಸಿದ್ದಾರೆ.
ಹಣ ಪಾವತಿಗಾಗಿ ಕೇಳಿದಾಗ ಮುಜೀಬ್ ಖಾನ್ ಸಹವರ್ತಿ ಸುದೇಶ್ ಅವಕ್ಕಲ್ ಎಂಬಾತ ತಮಗೆ 10.6 ಲಕ್ಷ ರೂ. ವರ್ಗಾವಣೆ ಮಾಡಿರುವುದಾಗಿ ಇ-ಮೇಲ್ನಲ್ಲಿ ತಿಳಿಸಿದ್ದಾರೆ. ಆದರೆ ತಮಗೆ ಯಾವುದೇ ಹಣ ಬಂದಿಲ್ಲ. ನವೆಂಬರ್ 24ರಂದು ಅವಕ್ಕಲ್ ಮತ್ತು ನ.29ರಂದು ಮುಜೀಬ್ ಖಾನ್, ಹಣ ಪಾವತಿಯ ಚೆಕ್ ಚಿತ್ರವನ್ನು ವಾಟ್ಸಾಪ್ನಲ್ಲಿ ಕಳುಹಿಸಿದ್ದರು. ಆದರೆ ಅಂತಹ ಯಾವುದೇ ಚೆಕ್ ತಮಗೆ ಬಂದಿಲ್ಲ ಎಂದು ಶಹಾಬ್ ದೂರಿನಲ್ಲಿ ಹೇಳಿದ್ದಾರೆ.
ಮೊಹಮ್ಮದ್ ಅಜರುದ್ದೀನ್, ಮುಜೀಬ್ ಖಾನ್ ಮತ್ತು ಸುದೇಶ್ ಅವಕ್ಕಲ್ ವಿರುದ್ಧ ಶಹಾಬ್ ಅವರು ಬುಧವಾರ ಔರಂಗಾಬಾದ್ ಸಿಟಿ ಚೌಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
I strongly rubbish the false FIR filed against me in Aurangabad. I’m consulting my legal team, and would be taking actions as necessary pic.twitter.com/6XrembCP7T
— Mohammed Azharuddin (@azharflicks) January 22, 2020
ಈ ಬಗ್ಗೆ ಟ್ವಿಟ್ಟರ್ನಲ್ಲಿವ ವಿಡಿಯೋ ಹಂಚಿಕೊಂಡಿರುವ ಅಜರುದ್ದೀನ್, 'ಈ ದೂರಿನಲ್ಲಿ ಯಾವುದೇ ಸತ್ಯವಿಲ್ಲ. ಪ್ರಚಾರ ಪಡೆದುಕೊಳ್ಳುವ ಸಲುವಾಗಿ ಈ ರೀತಿ ಮಾಡಲಾಗಿದೆ. ಈ ದೂರಿನಲ್ಲಿ ಮಾಡಲಾಗಿರುವ ಆರೋಪಗಳು ಆಧಾರರಹಿತ. ದೂರುದಾರನ ವಿರುದ್ಧ ನಾನು 100 ಕೋಟಿ ರೂ ಮಾನಹಾನಿ ಪ್ರಕರಣ ದಾಖಲಿಸಲು ಕಾನೂನು ಸಲಹೆ ಪಡೆಯಲಿದ್ದೇನೆ' ಎಂದು ತಿಳಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications