Breaking: ಕಾರ್ಖಾನೆಯಲ್ಲಿ ರಸಾಯನಿಕ ಸೋರಿಕೆ: ಪಕ್ಕದ ಸರ್ಕಾರಿ ಶಾಲೆಯ 150 ಮಕ್ಕಳು ಅಸ್ವಸ್ಥ
ಬೆಂಗಳೂರು, ಅಕ್ಟೋಬರ್ 14: ಕಾರ್ಖಾನೆಯೊಂದರಲ್ಲಿ ಕೆಮಿಕಲ್ ಟ್ಯಾಂಕ್ (ಮೀಥೇನ್ ಗ್ಯಾಸ್) ಒಡೆದ ಪರಿಣಾಮ ಪಕ್ಕದಲ್ಲಿದ್ದ ಸರ್ಕಾರಿ ಶಾಲೆಯ 150ಕ್ಕೂ ಅಧಿಕ ಮಕ್ಕಳಿಗೆ ಉಸಿರಾಟ ತೊಂದರೆ ಉಂಟಾಗಿ ಅಸ್ವಸ್ತರಾಗಿದ್ದಾರೆ. ಕೂಡಲೇ ಅಷ್ಟು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ರಾಜ್ಯದ ಹೊಸೂರು ಸರ್ಕಾರಿ ಶಾಲೆಯೊಂದರ ಹಿಂದೆ ಇದ್ದ ಕಾರ್ಖಾನೆಯಲ್ಲಿ ಶುಕ್ರವಾರ ರಸಾಯನಿಕ ತುಂಬಿಕೊಂಡಿದ್ದ ಟ್ಯಾಂಕ್ ಒಡೆದಿದೆ. ಪರಿಣಾಮ ಗಾಳಿಯಲ್ಲಿ ರಸಾಯನಿಕ (ಮೀಥೇನ್ ಗ್ಯಾಸ್) ವ್ಯಾಪಿಸಿದ್ದು, ಪಕ್ಕದಲ್ಲೆ ಇದ್ದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಮಕ್ಕಳು ರಸಾಯನಿಕ ಯುಕ್ತ ಗಾಳಿ ಸೇವಿಸಿ ಅಸ್ವಸ್ತರಾಗಿ ಬಿದ್ದಿದ್ದಾರೆ. ಕೂಡಲೇ ಒಟ್ಟು ಸುಮಾರು 150 ಮಕ್ಕಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ಹೊಸೂರು ಗ್ರಾಮಸ್ಥರು ಹಾಗೂ ಸರ್ಕಾರಿ ಶಾಲೆ ಶಿಕ್ಷಕರು, ಆಡಳಿತ ಸಿಬ್ಬಂದಿ ಆತಂಕಗೊಂಡಿದ್ದಾರೆ. ತಮ್ಮ ಮಕ್ಕಳಿಗೆ ಏನಾಗಿಬಿಡತ್ತದೋ ಎಂದು 150 ಮಕ್ಕಳ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ವೈದ್ಯರಲ್ಲಿ ಮಕ್ಕಳನ್ನು ಉಳಿಸಿಕೊಡಿ ಎಂದು ಗೋಗರೆಯುತ್ತಿದ್ದಾರೆ. ಇತ್ತ ಆಸ್ಪತ್ರೆಗೆ ದಾಖಲಾದ ಮಕ್ಕಳು ಸರಿಯಾಗಿ ಉಸಿರಾಡಲು ಆಗದೇ ಹಾಸಿಗೆಯಲ್ಲಿ ಒದ್ದಾಡುತ್ತಿರುವ ದೃಶ್ಯಗಳು ಎಂಥವರ ಮನಸ್ಸನ್ನು ಹಿಂಡುತ್ತಿವೆ.

ಇಷ್ಟೆಲ್ಲ ಅವಘಡಕ್ಕೆ ಶಾಲೆಯ ಹಿಂದಿದ್ದ ಕಾರ್ಖಾನೆಯ ಅಸರ್ಪಕ ನಿರ್ವಹಣೆಯೆ, ಅಲ್ಲಿನ ಸಿಬ್ಬಂದಿಯ ಬೇಜವಾಬ್ದಾರಿಯೇ ಕಾರಣ ಎಂದು ಸ್ಥಳಿಯರು ದೂರುತ್ತಿದ್ದಾರೆ. ಉಸಿರಾಟ ತೊಂದರೆ ಅನುಭವಿಸುತ್ತಿರುವ ಮಕ್ಕಳಿಗೆ ಆಸ್ಪತ್ರೆ ಚಿಕಿತ್ಸೆ ಮುಂದುವರಿದಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆ, ಶಾಲೆ ಮುಂದೆ ಜನಸಾಗರ
ಕಾರ್ಖಾನೆಯಲ್ಲಿ ಮೀಥೇನ್ ಗ್ಯಾಸ್ ಸೋರಿಕೆಯಾದ ನಂತರ ಹೊಸೂರು ಸರ್ಕಾರಿ ಶಾಲೆ ಹಾಗೂ ಸ್ಥಳೀಯ ಆಸ್ಪತ್ರೆ ಬಳಿ ಮಕ್ಕಳ ಪೋಷಕರು ಜಮಾಯಿಸಿದರು. ಈವೇಳೆ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ದೌಡಾಯಿಸಿ ಪೋಷಕರು ಸಮಾಧಾನ ಹೇಳಿದ್ದು ಕಂಡು ಬಂತು.
ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿದ್ದಂತೆ ಅಕ್ಕಪಕ್ಕದವರ ನೆರವಿನಿಂದ ಆಸ್ಪತ್ರೆ ಸಾಗಿಸಲಾಯಿತು. ಕೆಲವು ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು ಕಂಡು ಪೋಷಕರು ಚಿರಾಟ ಮುಗಿಲು ಮುಟ್ಟಿತು. ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆ ಮುಂದೆ ಸಾಗರೋಪಾದಿಯಲ್ಲಿ ಜನರು ಆಗಮಿಸಿದರು. ಸಂಜೆ ಬಳಿಕ ಮಕ್ಕಳ ಆರೋಗ್ಯದಲ್ಲಿ ತುಸು ಚೇತರಿಕೆ ಆಗಿರುವುದು ಪೋಷಕರಲ್ಲಿ ಸಮಾಧಾನ ತಂದಿದೆ ಎಂದು ಮೂಲಗಳು ತಿಳಿಸಿವೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications