ಪೊಲೀಸ್ ಠಾಣೆಯಲ್ಲಿಟ್ಟಿದ್ದ 22 ಕೆಜಿ ಗಾಂಜಾ ತಿಂದು ಮುಗಿಸಿದ ಇಲಿಗಳು: ಚೆನ್ನೈನಲ್ಲಿ ವಿಲಕ್ಷಣ ಘಟನೆ- ವಿವರ ತಿಳಿಯಿರಿ
ಚೆನ್ನೈ, ಜುಲೈ 05: ಗಾಂಜಾ ಶೇಖರಿಸಿದ್ದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. ಈ ಇಬ್ಬರು ಆರೋಪಿಗಳಿಂದ 22 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿದ ನಂತರ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಅದನ್ನು ಪೊಲೀಸ್ ಉಗ್ರಾಣದಲ್ಲಿ ಇರಿಸಲಾಗಿತ್ತು. ಅಲ್ಲಿದ್ದ ಸುಮಾರು 22 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಇಲಿಗಳು ತಿಂದುಹಾಕಿವೆ ಎಂದು ಚೆನ್ನೈ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಒಟ್ಟು 22 ಕಿಲೋಗ್ರಾಂ ಗಾಂಜಾದಲ್ಲಿ ಪೊಲೀಸರು ಕೇವಲ 50 ಗ್ರಾಂಗಳನ್ನು ಮಾತ್ರ ಸಾಕ್ಷ್ಯವಾಗಿ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿದೆ.
ಉಳಿದ 50 ಗ್ರಾಂ ಗಾಂಜಾವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 21.9 ಕೆಜಿ ಗಾಂಜಾವನ್ನು ಇಲಿಗಳು ಸೇವಿಸಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಪ್ರಕರಣವು 2022 ರ ಹಿಂದಿನದಾಗಿದೆ. ರಾಜಗೋಪಾಲ್ ಮತ್ತು ನಾಗೇಶ್ವರ ರಾವ್ ಅವರನ್ನು ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್ ಪ್ರದೇಶದಿಂದ ಪೊಲೀಸರು ಬಂಧಿಸಿದ್ದರು. ಅವರಿಂದ 22 ಕೆಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಯಿತು. ಆ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು. ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು.

ಇಲಿಗಳು ಗಾಂಜಾ ಅಥವಾ ಇತರ ಮಾದಕ ವಸ್ತುವನ್ನು ಸೇವಿಸಿರುವುದು ಇದೇ ಮೊದಲ ನಿದರ್ಶನವಲ್ಲ ಎಂದು ಪೊಲೀಸರು ಕೋರ್ಟ್ಗೆ ತಿಳಿಸಿದ್ದಾರೆ.
ನವೆಂಬರ್ 2022 ರಲ್ಲಿ ಇದೇ ರೀತಿಯ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿತ್ತು. ಇಲಿಗಳು 500 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಸೇವಿಸಿದ್ದವು. ಗಾಂಜಾವನ್ನು ವಶಪಡಿಸಿಕೊಂಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು.
ಈ ಪ್ರಕರಣದಲ್ಲಿಯೂ ಪೊಲೀಸರು ನ್ಯಾಯಾಲಯಕ್ಕೆ ಸಾಕ್ಷ್ಯ ಒದಗಿಸುವಲ್ಲಿ ವಿಫಲರಾಗಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications