ನೋಟ್ ಬ್ಯಾನ್ ಆಯ್ತು, ಇದೇನು ಮೋದಿ ಸರಕಾರದ ಚೆಕ್ ಬ್ಯಾನ್ ಸುದ್ದಿ!
ನವದೆಹಲಿ, ನ 21: ಅಪನಗದೀಕರಣದ ನಂತರ ಕ್ಯಾಷ್ ಲೆಸ್ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರ, ಚೆಕ್ ವ್ಯವಹಾರಕ್ಕೂ ಕಡಿವಾಣ ಹಾಕುವ ಸಾಧ್ಯತೆಯಿದೆ.
ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡಲು, ಸದ್ಯದಲ್ಲೇ ಚೆಕ್ ಬುಕ್ ಪದ್ದತಿಯನ್ನು ಕೇಂದ್ರ ಸರಕಾರ ರದ್ದು ಮಾಡುವ ಸಾಧ್ಯತೆಯಿದೆ ಎಂದು ಪಿಟಿಐ ವರದಿಯನ್ನು ಉಲ್ಲೇಖಿಸಿ ಇಕನಾಮಿಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

'ಡಿಜಿಟಲ್ ರಥ್' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದ ಸಿಎಐಟಿ (Confederation of All India Traders) ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್, ಚೆಕ್ ಪದ್ದತಿಯನ್ನು ಸದ್ಯದಲ್ಲೇ ಕೇಂದ್ರ ಹಿಂದಕ್ಕೆ ಪಡೆಯಲಿದೆ ಎನ್ನುವ ಸುಳಿವನ್ನು ನೀಡಿದ್ದಾರೆ.
ಸರಕಾರ ನೋಟು ಮುದ್ರಣಕ್ಕೆ 25ಸಾವಿರ ಕೋಟಿ, ಅದರ ಭದ್ರತೆ ಮತ್ತು ಇತರ ವ್ಯವಸ್ಥೆಗೆ ಆರು ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಡೆಬಿಟ್ ಕಾರ್ಡ್ ವ್ಯವಹಾರಕ್ಕೆ 1%,, ಕ್ರೆಡಿಟ್ ಕಾರ್ಡ್ ವ್ಯವಹಾರಕ್ಕೆ 2% ಶುಲ್ಕವನ್ನು ಗ್ರಾಹಕರಿಗೆ ವಿಧಿಸಲಾಗುತ್ತಿದೆ.
ಕೇಂದ್ರ ಸರಕಾರ ಕ್ಯಾಷ್ ಲೆಸ್ ವ್ಯವಹಾರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಕಾರ್ಡ್ ಮೂಲಕ ನಡೆಸುವ ವ್ಯವಹಾರಕ್ಕೆ ವಿಧಿಸಲಾಗುವ ಶುಲ್ಕವನ್ನು ರದ್ದುಗೊಳಿಸಿ, ಕೇಂದ್ರ ಸರಕಾರ ನೇರವಾಗಿ ಬ್ಯಾಂಕಿಗೆ ಇದರ ಸಬ್ಸಿಡಿ ನೀಡುವಂತಾಗಾಬೇಕೆಂದು ಪ್ರವೀಣ್ ಹೇಳಿದ್ದಾರೆ.
ಅಪಗನದೀಕರಣದ ನಂತರ ಚೆಕ್ ವ್ಯವಹಾರ ಗಣನೀಯವಾಗಿ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಪ್ರವೀಣ್ ಖಂಡೇಲ್ವಾಲ್, 25 ಬಿಲಿಯನ್ ಡಿಜಿಟಲ್ ಪೇಮೆಂಟ್ ಗುರಿಯನ್ನು ಇಟ್ಟುಕೊಂಡಿರುವ ಕೇಂದ್ರ ಸರಕಾರ, ಚೆಕ್ ವ್ಯವಹಾರವನ್ನು ರದ್ದುಗೊಳಿಸಿದರೆ, ಶೀಘ್ರದಲ್ಲೇ ತನ್ನ ಗುರಿಯನ್ನು ತಲುಪಬಹುದಾಗಿದೆ ಎಂದು ಪ್ರವೀಣ್ ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications