ಛತ್ತೀಸ್ ಗಢ: ನಕ್ಸಲ್ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಸಾವು
ಬಿಜಾಪುರ, ಏಪ್ರಿಲ್ 04: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.

31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
#WATCH | On ground visuals from the site of Naxal attack at Sukma-Bijapur border in Chhattisgarh; 22 security personnel have lost their lives in the attack pic.twitter.com/nulO8I2GKn
— ANI (@ANI) April 4, 2021
ರಾಯಪುರ ಆಸ್ಪತ್ರೆಗೆ ಗಾಯಗೊಂಡ ಸಿಬ್ಬಂದಿ:
ಛತ್ತೀಸ್ ಗಢ ನಕ್ಸಲ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಭೂಪೆಶ್ ಬಾಘೆಲ್, 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿರುವ ಬಗ್ಗೆ ತಿಳಿಸಿದರು. 7 ಭದ್ರತಾ ಸಿಬ್ಬಂದಿಯನ್ನು ರಾಯಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಮಾಹಿತಿ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications