ಆಪರೇಷನ್ ಪ್ರಹಾರ್: ಛತ್ತೀಸ್ ಗಢದಲ್ಲಿ 12 ನಕ್ಸಲರ ಹತ್ಯೆ
ಸುಕ್ಮಾ (ಛತ್ತೀಸ್ ಗಢ), ಜೂನ್ 25: ಕಳೆದೆರಡು ದಿನಗಳಲ್ಲಿ ಇಲ್ಲಿನ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನಡೆದ ಭಾರೀ ನಕ್ಸಲ್ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 12ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದು ಮೂವರು ಡಿಆರ್'ಜಿ ಯೋಧರು ಹುತಾತ್ಮರಾಗಿದ್ದಾರೆ.
"ಮೂವರು ಡಿಆರ್'ಜಿ ಯೋಧರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ. 12 ಕ್ಕೂ ಹೆಚ್ಚು ನಕ್ಸಲರನ್ನು ಕೊಲ್ಲಲಾಗಿದೆ. 8-10 ನಕ್ಸಲರು ಗಾಯಗೊಂಡಿದ್ದಾರೆ," ಎಂದು ಆಪರೇಷನ್ ಪ್ರಹಾರ್ ನಿರ್ದೇಶಕ ಡಿಎಂ ಅವಸ್ಥಿ ಹೇಳಿದ್ದಾರೆ.

ಇವರಲ್ಲಿ ಇಬ್ಬರು ಯೋಧರು ಕಾರ್ಯಾಚರಣೆ ಮುಗಿಸಿ ವಾಪಸ್ ಬರುವಾಗ ಬಿಜಾಪುರ್ ನಲ್ಲಿ ಸುಧಾರಿತ ಸ್ಪೋಟಕ ವಸ್ತುವಿನ ಸ್ಪೋಟದಿಂದ ಗಾಯಗೊಂಡಿದ್ದಾರೆ.
ಶನಿವಾರ ಛತ್ತೀಸ್ ಗಢ ಪೊಲೀಸರು, ಸಿಆರ್ ಪಿಎಫ್ ಜವಾನರು, ನಕ್ಸಲ್ ನಿಗ್ರಹ ಪಡೆಗಳು ಭಾರತೀಯ ವಾಯು ಸೇನೆಯ ಸಹಕಾರದೊಂದಿದೆ ಈ ಬೃಹತ್ ನಕ್ಸಲ್ ನಿಗ್ರಹ ಕಾರ್ಯಾಚರಣೆ ಆಪರೇಷನ್ ಪ್ರಹಾರ್ ಆರಂಭಿಸಿದ್ದವು.

ಕಾರ್ಯಾಚರಣೆ ವೇಳೆ ಗಾಯಗೊಂಡ ಹಲವು ಸಿಬ್ಬಂದಿಗಳನ್ನು ಹೆಲಿಕಾಫ್ಟರ್ ಗಳ ಮೂಲಕ ತುರ್ತಾಗಿ ಆಸ್ಪತ್ರೆಗಳಿಗೆ ಸೇರಿಸಲಾಯಿತು. ಇನ್ನು ಕಾರ್ಯಾಚರಣೆಯ ಅಂತ್ಯಕ್ಕೆ ಕಚ್ಛಾ ಬಾಂಬ್, ಗ್ರೆನೇಡ್, ಶಸ್ತ್ರಾಸ್ತ್ರಗಳು ಸೇರಿ ನಕ್ಸಲರಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶನಿವಾರ ಚಿಂತಗುಫಾದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇಂದೂ ಕಾರ್ಯಾಚರಣೆ ಮುಂದುವರಿದು ದಾಂತೇವಾಡದ ನಕ್ಸಲರ ಕ್ಯಾಂಪ್ ಮೇಲೆ ಭದ್ರತಾ ಪಡೆಗಳು ಮುಗಿ ಬಿದ್ದಿದ್ದವು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications