ಛತ್ತೀಸ್ಗಢ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಶಾಕ್ ನೀಡುತ್ತಿದೆ ಬಿಜೆಪಿ!
ಛತ್ತೀಸ್ಗಢ ರಾಜ್ಯದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆದ್ದು ಬೀಗುತ್ತೆ ಎನ್ನುವ ಲೆಕ್ಕಾಚಾರ ಈಗ ಬದಲಾಗಿದೆ. ಆರಂಭದಲ್ಲಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಇದೀಗ ಮೆಲ್ಲಗೆ ಹಿಂದೆ ಬೀಳುತ್ತಿದೆ. ಹಾಗೆ ಬಿಜೆಪಿ ಮೆಲ್ಲಗೆ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಇದೇ ಕಾರಣಕ್ಕೆ ಛತ್ತೀಸ್ಗಢ ಚುನಾವಣಾ ಅಖಾಡ ರಂಗೇರಿದೆ. ಹಾಗಾದರೆ ಈಗಿನ ಮಾಹಿತಿ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಿಕ್ಕಿದೆ?
ಅಷ್ಟಕ್ಕೂ ಛತ್ತೀಸ್ಗಢ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬ ಕಾಂಗ್ರೆಸ್ನ ಲೆಕ್ಕಾಚಾರ ನಿಧಾನವಾಗಿ ಮಂಕಾಗ್ತಿದೆ. ಒಟ್ಟು 90 ಸ್ಥಾನ ಇರುವ, ಛತ್ತೀಸ್ಗಢ ರಾಜ್ಯದಲ್ಲಿ ಬಹುಮತ ಪಡೆಯಲು 46 ಸ್ಥಾನ ಬೇಕಿದೆ. ಈ ಮೊದಲು ಕಾಂಗ್ರೆಸ್ ಇಲ್ಲಿ ಭಾರಿ ಬಹುಮತ ಪಡೆಯುವ ಮುನ್ಸೂಚನೆ ಸಿಕ್ಕಿತ್ತು.

ಆದ್ರೆ ಈಗ ಟ್ರೆಂಡ್ ಸಂಪೂರ್ಣ ಬದಲಾಗಿದೆ. ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಈಗ ಬಹುಮತಕ್ಕಿಂತ ಕೆಳಗೆ ಬಿದ್ದಿದೆ. ಹೀಗಾಗಿಯೆ ಛತ್ತೀಸ್ಗಢ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಎಷ್ಟು ಸ್ಥಾನದಲ್ಲಿ ಕಾಂಗ್ರೆಸ್ಗೆ ಮುನ್ನಡೆ?
ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ ಛತ್ತೀಸ್ಗಢ ರಾಜ್ಯದಲ್ಲಿ 44 ಸ್ಥಾನದಲ್ಲಿ ಮುನ್ನಡೆ ಪಡೆದಿದ್ರೆ ಬಿಜೆಪಿ 44 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಪಕ್ಷೇತರರು 2 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಪೈಕಿ ಬಿಜೆಪಿ ಈಗಾಗಲೇ 24 ಸ್ಥಾನದಲ್ಲಿ ಗೆದ್ದಿದೆ. ಈ ನಡುವೆ ಕಾಂಗ್ರೆಸ್ ಕೇವಲ 22 ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಛತ್ತೀಸ್ಗಢದ ಚುನಾವಣಾ ಅಖಾಡ ರಂಗೇರಿದೆ.

ಬೆಳಗ್ಗೆ ಇದ್ದ ಟ್ರೆಂಡ್ ಏನು?
ಇನ್ನು ಬೆಳಗ್ಗೆ ಇಲ್ಲಿನ ಟ್ರೆಂಡ್ ಬೇರೆಯೆ ಆಗಿತ್ತು. ಛತ್ತೀಸ್ಗಢ ವಿಧಾನಸಭೆ ಫಲಿತಾಂಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಬಿಜೆಪಿ 37 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 46 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ದಿಢೀರ್ ಎಲ್ಲಾ ಬದಲಾಗಿ ಹೋಗುತ್ತಿದ್ದು, ಕಾಂಗ್ರೆಸ್ ಛತ್ತೀಸ್ಗಢ ವಿಧಾನಸಭೆ ಫಲಿತಾಂಶದಲ್ಲಿ ಹಿಂದೆ ಬೀಳುತ್ತಿದೆ. ಈ ಮೂಲಕವಾಗಿ ಬಿಜೆಪಿ ಛತ್ತೀಸ್ಗಢ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವ ಮುನ್ಸೂಚನೆ ಸಿಕ್ಕಿದೆ. ಈ ಮಧ್ಯೆ ಸಮಾನವಾಗಿ ಹೋರಾಟ ಇರುವ ಕಾರಣ, ಪೂರ್ಣ ಫಲಿತಾಂಶ ಬರುವವರೆಗೂ ಕಾದು ನೋಡಬೇಕು.
ಹೀಗೆ ಛತ್ತೀಸ್ಗಢ ಫಲಿತಾಂಶ ಕುತೂಹಲ ಕೆರಳಿಸುತ್ತಿದೆ ಇಲ್ಲಿ ಅಧಿಕಾರ ಹಿಡಿಯೋದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ಸರ್ಕಸ್ ಮಾಡಿದ್ದವು. ಹೀಗಿದ್ದಾಗ ಛತ್ತೀಸ್ಗಢ ಜನರಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ್ರೆ 500 ರೂ.ಗೆ ಸಿಲಿಂಡರ್ ಕೊಡುವ ಭರವಸೆ ಸೇರಿದಂತೆ ಹಲವು ವಾಗ್ದಾನ ನೀಡಲಾಗಿತ್ತು. ಕಾಂಗ್ರೆಸ್ ಕೂಡ ಕರ್ನಾಟಕದ ರೀತಿ ಹಲವು ಗ್ಯಾರಂಟಿಗಳ ಜಾರಿ ಮಾಡುವ ಭರವಸೆ ನೀಡಿತ್ತು. ಆದರೆ ಈಗಿನ ಸ್ಥಿತಿ ನೋಡಿದರೆ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಲಕ್ಷಣ ಕಂಡುಬರುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications