ಕಾಂಗ್ರೆಸ್ ಅಧ್ಯಕ್ಷರದ್ದೇ ಒಂದು ದಾರಿ, ಉಳಿದವರದ್ದು ಇನ್ನೊಂದು ದಾರಿ!
ನಾಗಪುರ, ನವೆಂಬರ್ 22: ಛತ್ತೀಸ್ ಗಢ ಕಾಂಗ್ರೆಸ್ನಲ್ಲಿ ಸೀಟು ಹಂಚಿಕೆ ಸಂದರ್ಭದಲ್ಲಿ ಉಂಟಾದ ಗೊಂದಲವು ಪಕ್ಷ ಮೊದಲ ಬಾರಿಗೆ ಅಧಿಕಾರಕ್ಕೆ ಬರುವ ಅವಕಾಶಗಳನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ.
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಈ ತಿಂಗಳ ಆರಂಭದಲ್ಲಿಯೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ, ಪಕ್ಷದ ಅಭ್ಯರ್ಥಿಯೊಬ್ಬರು ತಮ್ಮ ಕ್ಷೇತ್ರವನ್ನು ಬದಲಿಸುವಂತೆ ದುಂಬಾಲು ಬಿದ್ದಿದ್ದರು.
ತಮಗೆ ಕೊಟ್ಟಿರುವುದು ಸುಲಭವಾಗಿ ಗೆಲ್ಲುವಂತಹ ಕ್ಷೇತ್ರ. ಅದರ ಬದಲು ಹೆಚ್ಚು ಪ್ರತಿಷ್ಠೆಯ ಮತ್ತು ಸ್ಪರ್ಧಾತ್ಮಕ ಕ್ಷೇತ್ರವನ್ನು ನೀಡುವಂತೆ ಅವರು ಕೋರಿದ್ದರು. ಆದರೆ, ಕಾಂಗ್ರೆಸ್ ನಾಯಕತ್ವ ಅವರ ಬೇಡಿಕೆಯನ್ನು ತಿರಸ್ಕರಿಸಿತ್ತು.

ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗುವ ಕೆಲ ಸಮಯಕ್ಕೂ ಮುನ್ನ, ಛತ್ತೀಸ್ ಗಢ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೆಲ್ ಕರೆ ಮಾಡಿ, ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದರು.
ಇದರಿಂದ ಹತಾಶರಾದರೂ, ಪಕ್ಷ ಹೇಳಿದಂತೆ ಕೇಳುವುದಾಗಿ ಅಭ್ಯರ್ಥಿ ಪ್ರತಿಕ್ರಿಯೆ ನೀಡಿದ್ದರು.
ಆದರೆ, ಬಳಿಕ ಅವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವುದು ಪಕ್ಷದ ಮೇಲೆ ಒತ್ತಡ ಹೆಚ್ಚಿಸಿತ್ತು. ಎರಡು ದಿನ ಯಾರ ಕೈಗೂ ಅವರು ಸಿಕ್ಕಿರಲಿಲ್ಲ. ಅವರ ಸಂಪರ್ಕದಲ್ಲಿ ಇರಲು ಬಯಸಿದ್ದವರು ಕಾರ್ನಲ್ಲಿ ಚಾಲಕನ ಮೂಲಕ ಸಂದೇಶ ರವಾನಿಸಬೇಕಾಗಿತ್ತು.
ಕೊನೆಗೂ ಆ ಅಭ್ಯರ್ಥಿಯ ಹಠವೇ ಗೆದ್ದಿತು. ಮುಖ್ಯಮಂತ್ರಿ ರಮಣ್ ಸಿಂಗ್ ಸಂಪುಟದ ಸಚಿವರೊಬ್ಬರು ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಅವರ ವಿರುದ್ಧ ಸ್ಪರ್ಧಿಸುವ ತಮ್ಮ ಆಸೆಯಂತೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.
ಆದರೆ, ಬಾಘೆಲ್ ಮತ್ತು ಅಭ್ಯರ್ಥಿಗಳ ನಡುವೆ ಸೀಟು ಹಂಚಿಕೆಯ ವಿವಾದಗಳು ಮುಂದುವರಿದಿವೆ. ಇದು ಮೂರು ಬಾರಿ ಸತತವಾಗಿ ಅಧಿಕಾರ ಗಿಟ್ಟಿಸಿಕೊಂಡಿದ್ದ ಬಿಜೆಪಿಯನ್ನು ಮಣಿಸಲು ಇದ್ದ ಅವಕಾಶಕ್ಕೆ ಹಿನ್ನಡೆ ಉಂಟುಮಾಡಿದೆ ಎನ್ನಲಾಗಿದೆ.
ಈಗ ಅಭ್ಯರ್ಥಿಯ ಆಯ್ಕೆ, ಪ್ರಚಾರ, ಮತದಾನ ಎಲ್ಲವೂ ಮುಗಿದಿದೆ. ಡಿ.11ರಂದು ಪ್ರಕಟವಾಗಲಿರುವ ಫಲಿತಾಂಶಕ್ಕಾಗಿ ಎಲ್ಲರೂ ಕಾಯ್ದಿದ್ದಾರೆ. ಈ ಬಾರಿ ಅಧಿಕಾರಕ್ಕೇರುವ ಆಸೆ ಹೊಂದಿದ್ದ ಕಾಂಗ್ರೆಸ್ನ ಒಳಜಗಳಗಳು ಪಕ್ಷಕ್ಕೆ ಮಾರಕವಾಗುವುದು ಖಚಿತ ಎನ್ನಲಾಗಿದೆ.
ಬಾಘೆಲ್ ಅವರೇ ತಮ್ಮ ಪಕ್ಷದ ಸಾಧ್ಯತೆಗಳನ್ನು ಸಾಯಿಸಿದ್ದಾರೆ ಎಂದು ಕಾಂಗ್ರೆಸ್ಸಿಗರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಾಘೆಲ್ ಮತ್ತು ಪಕ್ಷದ ಇತರೆ ನಾಯಕರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಬಾಘೆಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲ ದೊರೆತಿಲ್ಲ.
ಬಾಘೆಲ್ ಅವರನ್ನು ಮೂಲೆಗುಂಪು ಮಾಡುವ ಸಲುವಾಗಿಯೇ ಅವರು ಸೂಚಿಸಿದ್ದ ಅನೇಕ ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗಿತ್ತು. ತಮ್ಮ ಶಿಫಾರಸಿನ ಅಭ್ಯರ್ಥಿಗಳಿಗೆ ಟಿಕೆಟ್ ಸಿಗುವುದು ಅನುಮಾನ ಎಂಬುದು ತಿಳಿದಾಗ ಅವರು ದೆಹಲಿಗೆ ತೆರಳಿದ್ದರು.
ಧಮತರಿ ಕ್ಷೇತ್ರದಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಾಘೆಲ್ ರಾಜೀನಾಮೆ ನೀಡುವ ಬೆದರಿಕೆಯನ್ನೂ ಹಾಕಿದ್ದರು. ಇದರಿಂದ ಎಲ್ಲವೂ ಯಡವಟ್ಟಾಯಿತು. ಅಭ್ಯರ್ಥಿಗಳ ಆಯ್ಕೆಗೆ ಅವರ ಗೆಲ್ಲುವ ಸಾಮರ್ಥ್ಯವೇ ಮುಖ್ಯ ಮಾನದಂಡ. ಆದರೆ, ಅವರು ಶಿಫಾರಸು ಮಾಡಿದವರು ಅಷ್ಟೊಂದು ಸಮರ್ಥರಾಗಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications