Chhattisgarh Assembly Elections: ಚುನಾವಣೆಗೂ ಮುನ್ನವೇ ರಕ್ತದೋಕಳಿ- ಬಿಜೆಪಿ ನಾಯಕನನ್ನು ಭೀಕರವಾಗಿ ಹತ್ಯೆಗೈದ ಮಾವೋವಾದಿಗಳು
ಛತ್ತೀಸ್ಗಢ ಚುನಾವಣೆಗೂ ಮುನ್ನ ನಕ್ಸಲೀಯರು ಮತ್ತೊಮ್ಮೆ ದಾಳಿ ಮಾಡುವ ಮೂಲಕ ಭೀತಿ ಹುಟ್ಟಿಸಿದ್ದಾರೆ. ರಾಜ್ಯದಲ್ಲಿ ಎಲ್ಲ ನಿರ್ಬಂಧಗಳ ನಡುವೆಯೂ ನಕ್ಸಲೀಯರು ಬಿಜೆಪಿ ನಾಯಕ ರತನ್ ದುಬೆ ಅವರನ್ನು ಕೊಂದಿದ್ದಾರೆ. ಈ ದಾಳಿಯ ಬಗ್ಗೆ ಬಸ್ತಾರ್ ರೇಂಜ್ ಐಜಿ ಸುಂದರರಾಜ್ ಪಿ ಖಚಿತಪಡಿಸಿದ್ದಾರೆ.
ಮಾಹಿತಿ ಪ್ರಕಾರ ಬಿಜೆಪಿ ಮುಖಂಡ ಮತ್ತು ಜಿಲ್ಲಾ ಪಂಚಾಯತ್ ಸದಸ್ಯ ರತನ್ ದುಬೆ ಅವರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಲು ಕೌಶಲನರ್ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಈ ದಾಳಿ ನಡೆದಿದೆ. ಈ ವೇಳೆ ಗಂಭೀರ ಗಾಯಗಳಿಂದ ಅವರು ಸಾವನ್ನಪ್ಪಿದ್ದಾರೆ. ಸಿಕ್ಕಿರುವ ಮಾಹಿತಿ ಪ್ರಕಾರ ಪ್ರಕರಣ ನಾರಾಯಣಪುರದ ಕೌಶಲ್ ನಾರ್ ಗ್ರಾಮದ ಕೊಸಲ್ನಾರ್ನಲ್ಲಿ ನಡೆದಿದೆ. ಈ ಘಟನೆಗೆ ಕಾರಣವೇನು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ರತನ್ ದುಬೆ ಅವರು ಕೌಶಲ್ ನಾರ್ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ನಕ್ಸಲೀಯರು ಅವರನ್ನು ಕೊಂದಿದ್ದಾರೆ. ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ನಡುವೆ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ನಕ್ಸಲೀಯರ ಮೇಲೆ ತೀವ್ರ ನಿಗಾ ಇಡಲಾಗಿದೆ. ಚುನಾವಣಾ ಪ್ರಚಾರದ ವೇಳೆ ನಕ್ಸಲೀಯರು ರಾಜಕೀಯ ಪಕ್ಷಗಳ ಮುಖಂಡರ ಮೇಲೆ ದಾಳಿ ನಡೆಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಕೆಲವು ದಿನಗಳ ಹಿಂದೆ ಮೊಹ್ಲಾ-ಮಾನ್ಪುರ್-ಅಂಬಗಢ ಚೌಕಿ ಜಿಲ್ಲೆಯ ಔಂಧಿ ಪ್ರದೇಶದ ನಕ್ಸಲ್ ಪೀಡಿತ ಗ್ರಾಮ ಸರ್ಖೇಡಾದಲ್ಲಿ ಬಿಜೆಪಿ ಮುಖಂಡ ಬಿರ್ಜುರಾಮ್ ತಾರಾಮ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ದುರ್ಗಾಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದಾಳಿ ನಡೆದಿತ್ತು.
ಈ ದಾಳಿಗೆ ಸಂಬಂಧಿಸಿದಂತೆ ಈ ಪ್ರದೇಶದಲ್ಲಿ ದುರ್ಗಾ ಮೂರ್ತಿ ಪ್ರತಿಷ್ಠಾಪನೆಯನ್ನು ನಕ್ಸಲೀಯರು ವಿರೋಧಿಸಿದ್ದರು ಎಂದು ಹೇಳಲಾಗಿದೆ. ಆದರೆ ಬಿರ್ಜುರಾಮ್ ಇದಕ್ಕೆ ಒಪ್ಪಲಿಲ್ಲ, ಅವರು ದುರ್ಗಾ ಪೂಜೆಯನ್ನು ಪ್ರಾರಂಭಿಸಿದರು. ಹೀಗಾಗಿ ಅವರ ಮೇಲೆ ನಕ್ಸಲೀಯರು ದಾಳಿ ಮಾಡಿದರು. ಆಯುಧಗಳೊಂದಿಗೆ ಕೆಲವರು ಮನೆಗೆ ನುಗ್ಗಿ ಈ ಹತ್ಯೆ ನಡೆಸಿದ್ದರು.
2009 ರ ವಿಧಾನಸಭಾ ಚುನಾವಣೆಯ ನಂತರ ನಕ್ಸಲೀಯರು ಬಿಜೆಪಿ ಅಭ್ಯರ್ಥಿ ದರ್ಬಾರ್ ಸಿಂಗ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications