ಹಾವು & ಏಣಿ ಆಟ: ಛತ್ತೀಸ್ಗಢ ಸಿಎಂ & ಕಾಂಗ್ರೆಸ್ ಅಭ್ಯರ್ಥಿ ಬಘೇಲ್ಗೆ ಭಾರಿ ಹಿನ್ನಡೆ!
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸುತ್ತೆ ಅನ್ನೋ ಕಾಂಗ್ರೆಸ್ ನಾಯಕರ ನಂಬಿಕೆ ಹುಸಿಯಾಗುತ್ತಿದೆ. ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಲ್ಲಿ ಕಾಂಗ್ರೆಸ್ ಬಹುತೇಕ ಸೋಲನ್ನು ಕಂಡಿದೆ. ಅಧಿಕೃತವಾಗಿ ಸೋಲು ಘೋಷಣೆ ಆಗಬೇಕಿದೆ ಅಷ್ಟೇ. ಹೀಗಿದ್ದಾಗ ಮತ್ತೊಂದು ರಾಜ್ಯದಲ್ಲೂ, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಬಹುತೇಕ ಗ್ಯಾರಂಟಿ ಆಗುತ್ತಿದೆ. ಹಾಗಾದರೆ ಯಾವುದು ಆ ರಾಜ್ಯ?
ಬೆಳಗ್ಗೆ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಬಿಜೆಪಿ 37 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 46 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ಈಗ ದಿಢೀರ್ ಎಲ್ಲಾ ಬದಲಾಗಿದ್ದು, ಕಾಂಗ್ರೆಸ್ ಛತ್ತೀಸ್ಗಢ ವಿಧಾನಸಭೆ ಫಲಿತಾಂಶದಲ್ಲಿ ಹಿಂದೆ ಬೀಳುತ್ತಿದೆ.

ಹೀಗೆ ಬಿಜೆಪಿ ಛತ್ತೀಸ್ಗಢದಲ್ಲಿ ಮತ್ತೆ ಅಧಿಕಾರ ಹಿಡಿಯುವ ಮುನ್ಸೂಚನೆಯು ಸಿಕ್ಕಿದೆ. ಹಾಗಾದರೆ ಈಗಿನ ಮಾಹಿತಿ ಪ್ರಕಾರ ಬಿಜೆಪಿ ಎಷ್ಟು ಸ್ಥಾನದಲ್ಲಿ ಮುಂದೆ ಇದೆ..? ಹಾಗೇ ಕಾಂಗ್ರೆಸ್ ಎಷ್ಟು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ?
ಸ್ವತಃ ಮುಖ್ಯಮಂತ್ರಿಗೆ ಭಾರಿ ಹಿನ್ನಡೆ!
ಛತ್ತೀಸ್ಗಢ ರಾಜ್ಯದಲ್ಲಿ ಹಾಲಿ ಸಿಎಂ ಮತ್ತು ಕಾಂಗ್ರೆಸ್ ಅಭ್ಯರ್ಥಿ ಭೂಪೇಶ್ ಬಘೇಲ್ 407 ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಈಗಾಗಲೇ ಬಿಜೆಪಿ ಪಕ್ಷ 43 ಸ್ಥಾನದಲ್ಲಿ ಬಹುತೇಕ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಕೇವಲ 37 ಸ್ಥಾನದಲ್ಲಿ ಬಹುತೇಕ ಗೆಲುವನ್ನು ಸಾಧಿಸಿದೆ. ಹೀಗಾಗಿ ಭಾಗಶಃ ಛತ್ತೀಸ್ಗಢ ಬಿಜೆಪಿ ತೆಕ್ಕೆಗೆ ಬಿದ್ದಂತಾಗಿದೆ. ಇನ್ನೇನು ಕೆಲವೇ ಕ್ಷಣದಲ್ಲಿ ಅಂತಿಮ ಫಲಿತಾಂಶ ಹೊರಬೀಳಲಿದೆ.
ಸರ್ಕಾರ ರಚಿಸಲು ಎಷ್ಟು ಸ್ಥಾನ ಬೇಕು?
ಛತ್ತೀಸ್ಗಢದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಕಾಂಗ್ರೆಸ್ ಲೆಕ್ಕಾಚಾರ ನಿಧಾನವಾಗಿ ಮಂಕಾಗ್ತಿದೆ. ಒಟ್ಟು 90 ಸ್ಥಾನ ಇರುವ, ಛತ್ತೀಸ್ಗಢ ರಾಜ್ಯದಲ್ಲಿ ಬಹುಮತ ಪಡೆಯಲು 46 ಸ್ಥಾನ ಬೇಕಿದೆ. ಈ ಮೊದಲು ಕಾಂಗ್ರೆಸ್ ಇಲ್ಲಿ ಭಾರಿ ಬಹುಮತ ಪಡೆಯುವ ಮುನ್ಸೂಚನೆ ಸಿಕ್ಕಿತ್ತು.

ಆದ್ರೆ ಟ್ರೆಂಡ್ ಸಂಪೂರ್ಣ ಬದಲಾಗಿದ್ದು, ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಈಗ ಬಹುಮತಕ್ಕಿಂತ ಕೆಳಗೆ ಬಿದ್ದಿದೆ. ಆದರಲ್ಲೂ ಸ್ವತಃ ಛತ್ತೀಸ್ಗಢ ರಾಜ್ಯದಲ್ಲಿ ಸ್ವತಃ ಸಿಎಂ ಭೂಪೇಶ್ ಬಘೇಲ್ ಅವರಿಗೆ ಶಾಕ್ ಸಿಗುತ್ತಿದೆ.
ಕಾಂಗ್ರೆಸ್ ನಾಯಕರ ಶ್ರಮ ವ್ಯರ್ಥ?
ಇನ್ನು ಈ ಬಾರಿ ಹೇಗಾದರೂ ಮಾಡಿ ಮತ್ತೊಮ್ಮೆ ಛತ್ತೀಸ್ಗಢ ರಾಜ್ಯದಲ್ಲಿ ಅಧಿಕಾರವನ್ನ ಪಡೆಯಬೇಕು ಅನ್ನೊದು ಕಾಂಗ್ರೆಸ್ ನಾಯಕರ ಹಠವಾಗಿತ್ತು. ಇದೇ ಕಾರಣಕ್ಕೆ ಕೇಂದ್ರದ, ಹಿರಿಯ ನಾಯಕರ ದಂಡೇ ಛತ್ತೀಸ್ಗಢಕ್ಕೆ ಬಂದು ಪ್ರಚಾರ ನಡೆಸಿತ್ತು. ಈಗ ನೋಡುತ್ತಿದ್ರೆ ಎಲ್ಲವೂ ಉಲ್ಟಾ ಆಗುತ್ತಿದೆ. ಅಂದುಕೊಂಡ ಮಟ್ಟಿಗೆ ಛತ್ತೀಸ್ಗಢ ವಿಧಾನಸಭೆಯಲ್ಲಿ ಈಗ ಕಾಂಗ್ರೆಸ್ಗೆ ಸ್ಥಾನಗಳು ಸಿಗುತ್ತಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications