ಛತ್ತೀಸ್ ಗಢದಲ್ಲಿ ಕಾಂಗ್ರೆಸ್ಸಿಗೆ ಪುಕ ಪುಕ, ಕುದುರೆ ವ್ಯಾಪಾರದ ಭೀತಿ
ರಾಯ್ ಪುರ್, ಡಿಸೆಂಬರ್ 11: ಛತ್ತೀಸ್ಗಡ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಬಹು ಗೊಂದಲದಿಂದ ಕೂಡಿದೆ. ಆದರೆ, ಕಾಂಗ್ರೆಸ್ ಮಾತ್ರ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ. ಆದರೆ, ಕಾಂಗ್ರೆಸ್ಸಿಗೆ ಕುದುರೆ ವ್ಯಾಪಾರದ ಭೀತಿ ಎದುರಾಗಿದ್ದು, ತನ್ನ ಅಭ್ಯರ್ಥಿಗಳನ್ನು ಕಾಯಲು ಸಕತ್ ಯೋಜನೆ ಹಾಕಿಕೊಂಡಿದೆ.
ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಸುರಕ್ಷಿತವಾಗಿರಿಸಲು ಕಾಂಗ್ರೆಸ್ ಹೈಕಮಾಂಡ್ ಯೋಜನೆ ಹಾಕಿಕೊಂಡಿದ್ದು, ಈ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿದ ಸೂಚನೆಯಂತೆ ನಡೆದುಕೊಳ್ಳಲಾಗಿದೆ.
ಹೈಕಮಾಂಡ್ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಅಭ್ಯರ್ಥಿಗಳನ್ನು ಹೇಗೆಲ್ಲ ಕಾಯ್ದುಕೊಳ್ಳಬೇಕು ಎಂಬುದರ ಬಗ್ಗೆ ಸೂಚನೆಗಳನ್ನು ಪಡೆದುಕೊಳ್ಳಲಾಗುತ್ತಿದೆ.
ಛತ್ತೀಸ್ಗಡ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಬಹು ಗೊಂದಲದಿಂದ ಕೂಡಿದೆ. ಕೆಲವು ಸಂಸ್ಥೆಗಳು, ಮಾಧ್ಯಮಗಳು ಕಾಂಗ್ರೆಸ್ಗೆ ಬಹುಮತ ನೀಡಿದ್ದರೆ ಇನ್ನು ಕೆಲವು ಬಿಜೆಪಿ ನೀಡಿದೆ, ಮತ್ತೆ ಕೆಲವು ಎರಡಕ್ಕೂ ಸಮಬಲ ಬರುತ್ತದೆಂದು ಹೇಳಿವೆ.
ಪೋಲ್ಸ್ ಆಫ್ ಪೋಲ್ಸ್ ಅಥವಾ ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಛತ್ತೀಸ್ಘಡ್ನಲ್ಲಿ ಯಾವ ಪಕ್ಷಕ್ಕೂ ಬಹುಮತ ಬರುತ್ತಿಲ್ಲ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ 43 ಸ್ಥಾನ ಗಳಿಸಿದರೆ, ಬಿಜೆಪಿ 40 ಸ್ಥಾನಗಳಲ್ಲಿ ವಿಜಯ ಸಾಧಿಸುತ್ತಿದೆ. ಇತರೆ ಪಕ್ಷಗಳು 6 ಸ್ಥಾನ ಗೆಲ್ಲಲಿವೆ. ಅಲ್ಲಿಗೆ ಛತ್ತೀಸ್ಘಡ್ನಲ್ಲಿ ಮೈತ್ರಿ ಸರ್ಕಾರ ರಚಿತವಾಗಲಿದೆ.
ಡಿ.11ರ ಈ ಸಮಯ 10 ಗಂಟೆ ಟ್ರೆಂಡಿಂಗ್ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ 54, ಬಿಜೆಪಿ 24 ಹಾಗೂ ಇತರೆ 8 ಪೂರ್ಣ ಟ್ರೆಂಡಿಂಗ್ ತಿಳಿಯಲು ಈ ಲಿಂಕ್ ಫಾಲೋ ಮಾಡಿ

ಕಾಂಗ್ರೆಸ್ಸಿಗೆ ಆತಂಕ ಏಕೆ?
ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಪಕ್ಷವು ಆತಂಕದ ಸ್ಥಿತಿಯಲ್ಲಿದೆ. ಪಕ್ಷದ ಶಾಸಕರನ್ನು ಇತರೆ ಪಕ್ಷದವರು ತಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದು ಎಂಬ ಸಂಶಯ ಬಲವಾಗಿ ಕಾಡುತ್ತಿದೆ. ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್ ಹಾಗೂ ಚುನಾವಣಾ ಆಯೋಗ ನಿಗಾ ವಹಿಸಿದೆ.
ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಗೆಲುವು ಸಾಧಿಸಿದ ಅಭ್ಯರ್ಥಿಗಳು ರಾಯ್ ಪುರಕ್ಕೆ ತೆರಳುವಂತೆ ಸೂಚಿಸಲಾಗಿದೆ. ಅಪ್ತರನ್ನು ಬಿಟ್ಟು ಉಳಿದವರ ಸಂಪರ್ಕ ಸಾಧಿಸದಂತೆ ಎಚ್ಚರಿಕೆ ನೀಡಲಾಗಿದೆ. ರಾಯ್ ಪುರ್ ತಲುಪಿದ ಬಳಿಕ ಅವರನ್ನು ಗೌಪ್ಯ ಸ್ಥಳಕ್ಕೆ ರವಾನಿಸುವ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ.

ಅಜಿತ್ ಸಿಂಗ್ ಪರಿಸ್ಥಿತಿಯ ಭೀತಿ
2003ರಲ್ಲಿ ಆಗಿನ ಮುಖ್ಯಮಂತ್ರಿ ಅಜಿತ್ ಜೋಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ನಡೆದ ಶಾಸಕರ ಕುದುರೆ ವ್ಯಾಪಾರ ನಂತರ ದೊಡ್ಡ ಹಗರಣವಾಗಿ ಸಿಬಿಐ ತನಿಖೆಗೊಳಪಟ್ಟಿದೆ.
ನಂತರ ಕಾಂಗ್ರೆಸ್ ಜತೆ ವೈಮನಸ್ಸು ಉಂಟಾಗಿ 2016ರಲ್ಲಿ ಪಕ್ಷ ತೊರೆದರು. ಕಳೆದ ಕೆಲವು ದಿನಗಳ ಹಿಂದೆ ಜನತಾ ಕಾಂಗ್ರೆಸ್ ಛತ್ತೀಸಗಢ್ (ಜೆಸಿಸಿ) ಪಕ್ಷ ಕಟ್ಟಿದರು. ಮಯಾವತಿ ಅವರನ್ನು ಪ್ರಧಾನಿ ಮಾಡಲು ಬಿಎಸ್ಪಿಗೆ ಬೆಂಬಲ ಘೋಷಿಸುವುದಾಗಿ ಹೇಳಿದ್ದಾರೆ. ಈಗ ಸದ್ಯ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿದ್ದಾರೆ.

ಸಮೀಕ್ಷೆಗಳಲ್ಲಿ ಸಮಬಲ
2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 49, ಕಾಂಗ್ರೆಸ್ 39, ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದರು.
ಆದರೆ, 2018ರ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಬಿಜೆಪಿ 2, ಕಾಂಗ್ರೆಸ್ 6 ಸ್ಥಾನ ಕಡಿಮೆಗಳಿಸಲಿದ್ದಾರೆ. ಇತರರು 8 ಸ್ಥಾನ ಹೆಚ್ಚುಗಳಿಸಲಿದ್ದಾರೆ.
ಆದರೆ, 2018ರ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಬಿಜೆಪಿ 2, ಕಾಂಗ್ರೆಸ್ 6 ಸ್ಥಾನ ಕಡಿಮೆಗಳಿಸಲಿದ್ದಾರೆ. ಇತರರು 8 ಸ್ಥಾನ ಹೆಚ್ಚುಗಳಿಸಲಿದ್ದಾರೆ.
ಆದರೆ, ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಲ ಸಿಗುವಂತೆ ಕಾಣಿಸಿದರೂ ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ದಾಟುವ ಸ್ಥಿತಿ ಬರುವುದಿಲ್ಲ ಎಂಬ ಸ್ಥಿತಿಯಿದೆ.

ಮಾಯಾವತಿ ಮೇಲೆ ಕಣ್ಣು
ಕಳೆದ 15 ವರ್ಷಗಳಿಂದ ರಮಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಅಧಿಕಾರ ನಡೆಸುತ್ತಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 39 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಬಿಜೆಪಿಯು 49 ಸ್ಥಾನ ಪಡೆದಿತ್ತು. ಬಿಎಸ್ ಪಿ ಹಾಗೂ ಪಕ್ಷೇತರರು ತಲಾ 1 ಸ್ಥಾನದಲ್ಲಿ ಗೆದ್ದಿದ್ದರು.
ಬಹುಜನ ಸಮಾಜ ಪಕ್ಷವು 35 ಸ್ಥಾನಗಳಲ್ಲಿ ಹಾಗೂ ಜನತಾ ಕಾಂಗ್ರೆಸ್ ಛತ್ತೀಸ್ ಗಢ 55 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಹೀಗಾಗಿ, ಕಾಂಗ್ರೆಸ್ ಈ ಬಾರಿ ಗೆದ್ದ ಸ್ಥಾನಗಳನ್ನು ಉಳಿಸಿಕೊಂಡು, ಬೇರೆ ಪಕ್ಷಗಳು ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಲು ಯತ್ನಿಸುತ್ತಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications