ಛತ್ತೀಸ್ ಗಢದಲ್ಲಿ ಕಾಂಗ್ರೆಸ್ಸಿಗೆ ಪುಕ ಪುಕ, ಕುದುರೆ ವ್ಯಾಪಾರದ ಭೀತಿ
ರಾಯ್ ಪುರ್, ಡಿಸೆಂಬರ್ 11: ಛತ್ತೀಸ್ಗಡ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಬಹು ಗೊಂದಲದಿಂದ ಕೂಡಿದೆ. ಆದರೆ, ಕಾಂಗ್ರೆಸ್ ಮಾತ್ರ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ. ಆದರೆ, ಕಾಂಗ್ರೆಸ್ಸಿಗೆ ಕುದುರೆ ವ್ಯಾಪಾರದ ಭೀತಿ ಎದುರಾಗಿದ್ದು, ತನ್ನ ಅಭ್ಯರ್ಥಿಗಳನ್ನು ಕಾಯಲು ಸಕತ್ ಯೋಜನೆ ಹಾಕಿಕೊಂಡಿದೆ.
ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಸುರಕ್ಷಿತವಾಗಿರಿಸಲು ಕಾಂಗ್ರೆಸ್ ಹೈಕಮಾಂಡ್ ಯೋಜನೆ ಹಾಕಿಕೊಂಡಿದ್ದು, ಈ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿದ ಸೂಚನೆಯಂತೆ ನಡೆದುಕೊಳ್ಳಲಾಗಿದೆ.
ಹೈಕಮಾಂಡ್ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಅಭ್ಯರ್ಥಿಗಳನ್ನು ಹೇಗೆಲ್ಲ ಕಾಯ್ದುಕೊಳ್ಳಬೇಕು ಎಂಬುದರ ಬಗ್ಗೆ ಸೂಚನೆಗಳನ್ನು ಪಡೆದುಕೊಳ್ಳಲಾಗುತ್ತಿದೆ.
ಛತ್ತೀಸ್ಗಡ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಬಹು ಗೊಂದಲದಿಂದ ಕೂಡಿದೆ. ಕೆಲವು ಸಂಸ್ಥೆಗಳು, ಮಾಧ್ಯಮಗಳು ಕಾಂಗ್ರೆಸ್ಗೆ ಬಹುಮತ ನೀಡಿದ್ದರೆ ಇನ್ನು ಕೆಲವು ಬಿಜೆಪಿ ನೀಡಿದೆ, ಮತ್ತೆ ಕೆಲವು ಎರಡಕ್ಕೂ ಸಮಬಲ ಬರುತ್ತದೆಂದು ಹೇಳಿವೆ.
ಪೋಲ್ಸ್ ಆಫ್ ಪೋಲ್ಸ್ ಅಥವಾ ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಛತ್ತೀಸ್ಘಡ್ನಲ್ಲಿ ಯಾವ ಪಕ್ಷಕ್ಕೂ ಬಹುಮತ ಬರುತ್ತಿಲ್ಲ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ 43 ಸ್ಥಾನ ಗಳಿಸಿದರೆ, ಬಿಜೆಪಿ 40 ಸ್ಥಾನಗಳಲ್ಲಿ ವಿಜಯ ಸಾಧಿಸುತ್ತಿದೆ. ಇತರೆ ಪಕ್ಷಗಳು 6 ಸ್ಥಾನ ಗೆಲ್ಲಲಿವೆ. ಅಲ್ಲಿಗೆ ಛತ್ತೀಸ್ಘಡ್ನಲ್ಲಿ ಮೈತ್ರಿ ಸರ್ಕಾರ ರಚಿತವಾಗಲಿದೆ.
ಡಿ.11ರ ಈ ಸಮಯ 10 ಗಂಟೆ ಟ್ರೆಂಡಿಂಗ್ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ 54, ಬಿಜೆಪಿ 24 ಹಾಗೂ ಇತರೆ 8 ಪೂರ್ಣ ಟ್ರೆಂಡಿಂಗ್ ತಿಳಿಯಲು ಈ ಲಿಂಕ್ ಫಾಲೋ ಮಾಡಿ

ಕಾಂಗ್ರೆಸ್ಸಿಗೆ ಆತಂಕ ಏಕೆ?
ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಪಕ್ಷವು ಆತಂಕದ ಸ್ಥಿತಿಯಲ್ಲಿದೆ. ಪಕ್ಷದ ಶಾಸಕರನ್ನು ಇತರೆ ಪಕ್ಷದವರು ತಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದು ಎಂಬ ಸಂಶಯ ಬಲವಾಗಿ ಕಾಡುತ್ತಿದೆ. ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್ ಹಾಗೂ ಚುನಾವಣಾ ಆಯೋಗ ನಿಗಾ ವಹಿಸಿದೆ.
ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಗೆಲುವು ಸಾಧಿಸಿದ ಅಭ್ಯರ್ಥಿಗಳು ರಾಯ್ ಪುರಕ್ಕೆ ತೆರಳುವಂತೆ ಸೂಚಿಸಲಾಗಿದೆ. ಅಪ್ತರನ್ನು ಬಿಟ್ಟು ಉಳಿದವರ ಸಂಪರ್ಕ ಸಾಧಿಸದಂತೆ ಎಚ್ಚರಿಕೆ ನೀಡಲಾಗಿದೆ. ರಾಯ್ ಪುರ್ ತಲುಪಿದ ಬಳಿಕ ಅವರನ್ನು ಗೌಪ್ಯ ಸ್ಥಳಕ್ಕೆ ರವಾನಿಸುವ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ.

ಅಜಿತ್ ಸಿಂಗ್ ಪರಿಸ್ಥಿತಿಯ ಭೀತಿ
2003ರಲ್ಲಿ ಆಗಿನ ಮುಖ್ಯಮಂತ್ರಿ ಅಜಿತ್ ಜೋಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ನಡೆದ ಶಾಸಕರ ಕುದುರೆ ವ್ಯಾಪಾರ ನಂತರ ದೊಡ್ಡ ಹಗರಣವಾಗಿ ಸಿಬಿಐ ತನಿಖೆಗೊಳಪಟ್ಟಿದೆ.
ನಂತರ ಕಾಂಗ್ರೆಸ್ ಜತೆ ವೈಮನಸ್ಸು ಉಂಟಾಗಿ 2016ರಲ್ಲಿ ಪಕ್ಷ ತೊರೆದರು. ಕಳೆದ ಕೆಲವು ದಿನಗಳ ಹಿಂದೆ ಜನತಾ ಕಾಂಗ್ರೆಸ್ ಛತ್ತೀಸಗಢ್ (ಜೆಸಿಸಿ) ಪಕ್ಷ ಕಟ್ಟಿದರು. ಮಯಾವತಿ ಅವರನ್ನು ಪ್ರಧಾನಿ ಮಾಡಲು ಬಿಎಸ್ಪಿಗೆ ಬೆಂಬಲ ಘೋಷಿಸುವುದಾಗಿ ಹೇಳಿದ್ದಾರೆ. ಈಗ ಸದ್ಯ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿದ್ದಾರೆ.

ಸಮೀಕ್ಷೆಗಳಲ್ಲಿ ಸಮಬಲ
2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 49, ಕಾಂಗ್ರೆಸ್ 39, ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದರು.
ಆದರೆ, 2018ರ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಬಿಜೆಪಿ 2, ಕಾಂಗ್ರೆಸ್ 6 ಸ್ಥಾನ ಕಡಿಮೆಗಳಿಸಲಿದ್ದಾರೆ. ಇತರರು 8 ಸ್ಥಾನ ಹೆಚ್ಚುಗಳಿಸಲಿದ್ದಾರೆ.
ಆದರೆ, 2018ರ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಬಿಜೆಪಿ 2, ಕಾಂಗ್ರೆಸ್ 6 ಸ್ಥಾನ ಕಡಿಮೆಗಳಿಸಲಿದ್ದಾರೆ. ಇತರರು 8 ಸ್ಥಾನ ಹೆಚ್ಚುಗಳಿಸಲಿದ್ದಾರೆ.
ಆದರೆ, ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಲ ಸಿಗುವಂತೆ ಕಾಣಿಸಿದರೂ ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ದಾಟುವ ಸ್ಥಿತಿ ಬರುವುದಿಲ್ಲ ಎಂಬ ಸ್ಥಿತಿಯಿದೆ.

ಮಾಯಾವತಿ ಮೇಲೆ ಕಣ್ಣು
ಕಳೆದ 15 ವರ್ಷಗಳಿಂದ ರಮಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಅಧಿಕಾರ ನಡೆಸುತ್ತಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 39 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಬಿಜೆಪಿಯು 49 ಸ್ಥಾನ ಪಡೆದಿತ್ತು. ಬಿಎಸ್ ಪಿ ಹಾಗೂ ಪಕ್ಷೇತರರು ತಲಾ 1 ಸ್ಥಾನದಲ್ಲಿ ಗೆದ್ದಿದ್ದರು.
ಬಹುಜನ ಸಮಾಜ ಪಕ್ಷವು 35 ಸ್ಥಾನಗಳಲ್ಲಿ ಹಾಗೂ ಜನತಾ ಕಾಂಗ್ರೆಸ್ ಛತ್ತೀಸ್ ಗಢ 55 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಹೀಗಾಗಿ, ಕಾಂಗ್ರೆಸ್ ಈ ಬಾರಿ ಗೆದ್ದ ಸ್ಥಾನಗಳನ್ನು ಉಳಿಸಿಕೊಂಡು, ಬೇರೆ ಪಕ್ಷಗಳು ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಲು ಯತ್ನಿಸುತ್ತಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications