ಮಾಧ್ಯಮದವರನ್ನು ಕೊಲ್ಲುವ ಉದ್ದೇಶ ಇರಲಿಲ್ಲ: ನಕ್ಸಲರ ಹೇಳಿಕೆ
ಛತ್ತೀಸ್ ಗಢ, ನವೆಂಬರ್ 2: ಛತ್ತೀಡ್ಗಢದ ದಾಂತೇವಾಡದಲ್ಲಿ ಅ.30ರಂದು ಚುನಾವಣಾ ಪೂರ್ವ ಪರಿಸ್ಥಿತಿಯ ವರದಿ ಮಾಡಲು ಹೋಗಿದ್ದ ದೂರದರ್ಶನದ ತಂಡದ ಮೇಲೆ ದಾಳಿ ನಡೆಸಿ ಛಾಯಾಗ್ರಾಹಕ ಮತ್ತು ಇಬ್ಬರು ಪೊಲೀಸರನ್ನು ಹತ್ಯೆ ಮಾಡಿದ್ದ ನಕ್ಸಲರು, ಆ ಘಟನೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮಾಧ್ಯಮದವರನ್ನು ಗುರಿಯಾಗಿಸುವ ಯಾವ ಉದ್ದೇಶವೂ ಇರಲಿಲ್ಲ ಎಂದು ನಕ್ಸಲು ಹೇಳಿದ್ದಾರೆ. ಈ ಹೇಳಿಕೆಯನ್ನು ಕೈಬಹರದಲ್ಲಿ ಬರೆದ ಹಾಳೆಯಲ್ಲಿ ಬಿಡುಗಡೆ ಮಾಡಲಾಗಿದೆ.

ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ದೂರದರ್ಶನದ ಛಾಯಾಗ್ರಾಹಕ ಅಚ್ಯುತಾನಂದ ಸಾಹು ಮೃತಪಟ್ಟಿದ್ದರು. ಅವರನ್ನು ರಕ್ಷಿಸಲು ಮುಂದಾದ ಇಬ್ಬರು ಕಾನ್ಸ್ಟೆಬಲ್ಗಳನ್ನು ಸಹ ನಕ್ಸಲರು ಕೊಂದಿದ್ದರು. ದೂರದರ್ಶನದ ಇತರೆ ಸಿಬ್ಬಂದಿ ತಪ್ಪಿಸಿಕೊಂಡಿದ್ದರು.
Naxals release a statement on Dantewada attack, saying 'DD Cameraman Achutyanand Sahu was killed after being caught in the ambush and we had no intention of targeting the media.' pic.twitter.com/bAoEQ8ScaS
— ANI (@ANI) 2 November 2018
ನಕ್ಸಲರು ಬಿಡುಗಡೆ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ್, 'ಮಾಧ್ಯಮದವರ ಮೇಲೆ ದಾಳಿ ಮಾಡುವ ಉದ್ದೇಶ ಇರದಿದ್ದರೆ ಕ್ಯಾಮೆರಾವನ್ನು ಏಕೆ ದೋಚಲಾಯಿತು? ಏಕೆಂದರೆ ಮಾಧ್ಯಮದವರ ಮೇಲೆ ದಾಳಿ ನಡೆಸುವ ಮುನ್ನ ಅಲ್ಲೇನು ನಡೆದಿತ್ತು ಎನ್ನುವುದು ಕ್ಯಾಮೆರಾದಲ್ಲಿ ಸಾಕ್ಷ್ಯಗಳು ದಾಖಲಾಗಿದ್ದವು. ಛಾಯಾಗ್ರಾಹಕನ ದೇಹದಲ್ಲಿದ್ದ ಹಲವು ಗುಂಡೇಟುಗಳು ಮತ್ತು ತಲೆಬುರಡೆಯನ್ನು ಒಡೆದಿರುವುದು ಅದು ತಪ್ಪಿ ನಡೆದ ಘಟನೆ ಅಲ್ಲ ಎನ್ನುವುದಕ್ಕೆ ಪುರಾವೆ' ಎಂದು ಹೇಳಿದ್ದಾರೆ.
ದೆಹಲಿಯಿಂದ ಬಂದಿದ್ದ ದೂರದರ್ಶನ ವಾಹಿನಿಯ ವರದಿಗಾರರ ತಂಡ, ಬೆಳಿಗ್ಗೆ ಅಭಿಷೇಕ್ ಪಲ್ಲವ್ ಅವರ ಸಂದರ್ಶನ ಮುಗಿಸಿ, ನೀಲಭಯ ಎಂಬ ಸ್ಥಳಕ್ಕೆ ತೆರಳುತ್ತಿದ್ದರು. ಆಗ ನಕ್ಸಲರ ತಂಡ ಅವರ ಮೇಲೆ ದಾಳಿ ನಡೆಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications