ಛತ್ತೀಸ್ ಗಢ: ಮೋದಿ ಸಭೆಗೂ ಮುನ್ನಾದಿನ ನಕ್ಸಲರ ದಾಳಿಗೆ ನಾಲ್ವರು ಬಲಿ
ದಾಂತೇವಾಡ, ನವೆಂಬರ್ 8: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಛತ್ತೀಸ್ ಗಢದಲ್ಲಿ ನಕ್ಸಲರು ಮತ್ತೊಂದು ದಾಳಿ ನಡೆಸಿದ್ದು, ಸಿಐಎಸ್ಎಫ್ ಯೋಧ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಅವರ ಭೇಟಿಯ ಮುನ್ನಾದಿನವೇ ದಾಂತೇವಾಡದಲ್ಲಿ ಈ ದಾಳಿ ನಡೆದಿದೆ.
ನಕ್ಸಲರು ಸುಧಾರಿತ ಸ್ಫೋಟಕಗಳನ್ನು ಬಳಸಿ ಕೇಂದ್ರೀಯ ಕೈಗಾರಿಕಾ ಪಡೆಯ ವಾಹನವನ್ನು ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಸಿಐಎಸ್ಎಫ್ ಯೋಧ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ನರೇಂದ್ರ ಮೋದಿ ಜಗ್ದಲ್ಪುರದಲ್ಲಿ ಪ್ರಚಾರ ನಡೆಸಲಿದ್ದರೆ, ರಾಹುಲ್ ಗಾಂಧಿ ಎರಡು ದಿನದಲ್ಲಿ ಐದು ಕಡೆ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ನಕ್ಸಲ್ ಪೀಡಿತ ದಾಂತೇವಾಡ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಇದು ಎರಡನೆಯ ದಾಳಿಯಾಗಿದೆ. ಅ.30ರಂದು ನಕ್ಸಲರು ದೂರದರ್ಶನದ ಛಾಯಾಗ್ರಾಹಕ ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದರು.
Cowardly Maoist terror attack in Dantewada of Chattisgarh this morning. 3 CISF Jawans and 3 civilians injured seriously, battling for their life. CISF Coy in civilian bus was on election duty and going to buy vegetables/groceries this morning. Reports of casualties as well. pic.twitter.com/RvNUcD4GnL
— Aditya Raj Kaul (@AdityaRajKaul) 8 November 2018
ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದಾಳಿ ನಡೆದಿದೆ.
ಛತ್ತೀಸ್ ಗಢದಲ್ಲಿ ನವೆಂಬರ್ 12ರಂದು ಎಂಟು ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ 18 ವಿಧಾನಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 20ರಂದು ಉಳಿದ 72 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications