Breaking: ಛತ್ತೀಸ್ಗಢದಲ್ಲಿ ಮುಂದುವರಿದ ನಕ್ಸಲರ ಅಟ್ಟಹಾಸ, ಬ್ಲಾಸ್ಟ್ಲ್ಲಿ ಯೋಧರಿಗೆ ಗಾಯ....
ಬೆಂಗಳೂರು, ಜೂನ್ 05: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಹಾವಳಿ ಮತ್ತೆ ಶುರುವಾಗಿದ್ದು, ಸೋಮವಾರ ಐಇಡಿ ಬ್ಲಾಸ್ಟ್ ಮಾಡುವ ಮೂಲಕ ನಕ್ಸಲರು ಯೋಧರನ್ನು ಕೊಲ್ಲಲ್ಲು ಸಂಚು ರೂಪಿಸಿದ್ದರು. ಸದ್ಯ ಸುಧಾರಿತ ಸ್ಪೋಟಕವಾದ ಐಇಡಿ ಬ್ಲಾಸ್ಟ್ನಿಂದಾಗಿ ಸಿಆರ್ಪಿಎಫ್ 85 ಬೆಟಾಲಿಯನ್ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಈ ಬಗ್ಗೆ ಛತ್ತೀಸ್ಗಢ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಬಿಜಾಪುರ ಜಿಲ್ಲೆಯ ತಕ್ಮೆಟಾ ಹಿಲ್ ಬಳಿಯ ಗಂಗಾಲೂರು ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಯೋಧರನ್ನು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಅವರನ್ನು ವಿಮಾನದಲ್ಲಿ ರಾಯ್ಪುರಕ್ಕೆ ಕರೆತರಲಾಗುತ್ತಿದೆ. ಘಟನಾ ಸ್ಥಳದಿಂದ ಸಿಆರ್ಪಿಎಫ್ ತಂಡವು ಪುಸ್ನಾರ್ ಕ್ಯಾಂಪ್ನಿಂದ ಹಿರೋಲಿಗೆ ಹೊರಟಿತ್ತು. ಈ ವೇಳೆ ನಕ್ಸಲರು ಭೂಗತದಲ್ಲಿ ಹಾಕಿದ್ದ ಒತ್ತಡ-ಪ್ರಚೋದಿತ ಐಇಡಿ ಮೇಲೆ ತೆರಳಿದ್ದಾರೆ. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಕಳೆದ ಮೇ ತಿಂಗಳಿಂದಲೂ ಸಣ್ಣನೆಯ ಜಕಮಕಿ ನಡೆಯುತ್ತಲೇ ಇದೆ ಎನ್ನಲಾಗಿದೆ. ಬಿಜಾಪುರದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಯ ಇಬ್ಬರು ಜವಾನರು ಗಾಯಗೊಂಡಿದ್ದರು. ಪುಸ್ನಾರ್ ಮತ್ತು ಹಿರೋಲಿ ಗ್ರಾಮ ಪ್ರದೇಶದಲ್ಲಿ ಮಾವೋವಾದಿಗಳು ಐಇಡಿ ದಾಳಿ ನಡೆಸಲು ಯೋಜಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.
ಇಲ್ಲಿನ ಗಂಗಲೂರು ಪೊಲೀಸ್ ಠಾಣೆಯಿಂದ ಶೋಧ ಕಾರ್ಯಾಚರಣೆ ನಡೆಸಲು ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ಕೋಬ್ರಾ ಪಡೆಯನ್ನು ಕಳುಹಿಸಲಾಗಿದೆ. ಕೋಬ್ರಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆಯಿತು, ಇದರಲ್ಲಿ ಇಬ್ಬರು ಜವಾನರು ಗಾಯಗೊಂಡಿದ್ದಾರೆ. ಮೂರು ಮಂದಿ ಮಾವೋವಾದಿಗಳಿಗೂ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications