Breaking: ಛತ್ತೀಸ್ಗಢದಲ್ಲಿ ಮುಂದುವರಿದ ನಕ್ಸಲರ ಅಟ್ಟಹಾಸ, ಬ್ಲಾಸ್ಟ್ಲ್ಲಿ ಯೋಧರಿಗೆ ಗಾಯ....
ಬೆಂಗಳೂರು, ಜೂನ್ 05: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಹಾವಳಿ ಮತ್ತೆ ಶುರುವಾಗಿದ್ದು, ಸೋಮವಾರ ಐಇಡಿ ಬ್ಲಾಸ್ಟ್ ಮಾಡುವ ಮೂಲಕ ನಕ್ಸಲರು ಯೋಧರನ್ನು ಕೊಲ್ಲಲ್ಲು ಸಂಚು ರೂಪಿಸಿದ್ದರು. ಸದ್ಯ ಸುಧಾರಿತ ಸ್ಪೋಟಕವಾದ ಐಇಡಿ ಬ್ಲಾಸ್ಟ್ನಿಂದಾಗಿ ಸಿಆರ್ಪಿಎಫ್ 85 ಬೆಟಾಲಿಯನ್ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಈ ಬಗ್ಗೆ ಛತ್ತೀಸ್ಗಢ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಬಿಜಾಪುರ ಜಿಲ್ಲೆಯ ತಕ್ಮೆಟಾ ಹಿಲ್ ಬಳಿಯ ಗಂಗಾಲೂರು ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಯೋಧರನ್ನು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಅವರನ್ನು ವಿಮಾನದಲ್ಲಿ ರಾಯ್ಪುರಕ್ಕೆ ಕರೆತರಲಾಗುತ್ತಿದೆ. ಘಟನಾ ಸ್ಥಳದಿಂದ ಸಿಆರ್ಪಿಎಫ್ ತಂಡವು ಪುಸ್ನಾರ್ ಕ್ಯಾಂಪ್ನಿಂದ ಹಿರೋಲಿಗೆ ಹೊರಟಿತ್ತು. ಈ ವೇಳೆ ನಕ್ಸಲರು ಭೂಗತದಲ್ಲಿ ಹಾಕಿದ್ದ ಒತ್ತಡ-ಪ್ರಚೋದಿತ ಐಇಡಿ ಮೇಲೆ ತೆರಳಿದ್ದಾರೆ. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಕಳೆದ ಮೇ ತಿಂಗಳಿಂದಲೂ ಸಣ್ಣನೆಯ ಜಕಮಕಿ ನಡೆಯುತ್ತಲೇ ಇದೆ ಎನ್ನಲಾಗಿದೆ. ಬಿಜಾಪುರದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಯ ಇಬ್ಬರು ಜವಾನರು ಗಾಯಗೊಂಡಿದ್ದರು. ಪುಸ್ನಾರ್ ಮತ್ತು ಹಿರೋಲಿ ಗ್ರಾಮ ಪ್ರದೇಶದಲ್ಲಿ ಮಾವೋವಾದಿಗಳು ಐಇಡಿ ದಾಳಿ ನಡೆಸಲು ಯೋಜಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.
ಇಲ್ಲಿನ ಗಂಗಲೂರು ಪೊಲೀಸ್ ಠಾಣೆಯಿಂದ ಶೋಧ ಕಾರ್ಯಾಚರಣೆ ನಡೆಸಲು ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ಕೋಬ್ರಾ ಪಡೆಯನ್ನು ಕಳುಹಿಸಲಾಗಿದೆ. ಕೋಬ್ರಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆಯಿತು, ಇದರಲ್ಲಿ ಇಬ್ಬರು ಜವಾನರು ಗಾಯಗೊಂಡಿದ್ದಾರೆ. ಮೂರು ಮಂದಿ ಮಾವೋವಾದಿಗಳಿಗೂ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications