1 ಲಕ್ಷ ಮೌಲ್ಯದ ಫೋನ್ಗಾಗಿ ಡ್ಯಾಮ್ನಿಂದ 21 ಲಕ್ಷ ಲೀಟರ್ ನೀರನ್ನು ಹೊರ ಹಾಕಿಸಿದ ಅಧಿಕಾರಿ!
ನವದೆಹಲಿ, ಮೇ. 26: ಅಧಿಕಾರಿಯೊಬ್ಬರು ಡ್ಯಾಮ್ನಲ್ಲಿ ತನ್ನ ಫೋನ್ ಬಿದ್ದ ಕಾರಣ ಮೊಬೈಲ್ ಹುಡುಕಲು ಬರೋಬ್ಬರಿ 21 ಲಕ್ಷ ಲೀಟರ್ ನೀರನ್ನು ಮೂರು ದಿನಗಳ ಕಾಲ ಹೊರಹಾಕಿಸಿರುವ ಘಟನೆ ವರದಿಯಾಗಿದೆ. ಛತ್ತೀಸ್ಗಢದ ಸರ್ಕಾರಿ ಅಧಿಕಾರಿಯು ತನ್ನ ಮೊಬೈಲ್ಗಾಗಿ ಇಡೀ ಜಲಾಶಯವನ್ನೇ ಖಾಲಿ ಮಾಡಿ ಜನರ ಕೆಂಗಣ್ಣಿಗೆ ಮಾತ್ರವಲ್ಲ ಸರ್ಕಾರದ ಆಕ್ರೋಶಕ್ಕೂ ಗುರಿಯಾಗಿದ್ದಾರೆ.
ಛತ್ತೀಸ್ಗಢದಲ್ಲಿ ಈ ವಿಲಕ್ಷಣ ಘಟನೆ ನಡೆದಿದ್ದು, ದುಬಾರಿ ಫೋನ್ ಅನ್ನು ಮರುಪಡೆಯಲು ಜಲಾಶಯದಿಂದ 21 ಲಕ್ಷ ಲೀಟರ್ ನೀರನ್ನು ಹರಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಘಟನೆ ವೈರಲ್ ಆದ ಬೆನ್ನಲ್ಲೆ ಮಾಹಿತಿ ನೀಡಿರುವ ಅವರು, ಆ ನೀರು "ಬಳಕೆಗೆ ಯೋಗ್ಯವಾಗಿಲ್ಲ" ಎಂದು ಹೇಳಿದ್ದಾರೆ.

ಇದರ ಜೊತೆಗೆ ಅಧಿಕಾರಿಯು ಸ್ಥಳೀಯ ಉಪವಿಭಾಗಾಧಿಕಾರಿಯಿಂದ ಪೂರ್ವ ಮೌಖಿಕ ಅನುಮತಿಯನ್ನು ಪಡೆದಿದ್ದಾಗಿ ತಿಳಿಸಿದ್ದಾರೆ. ಇನ್ನು, ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡ ಹಾಗೂ ಸಂಬಂಧಪಟ್ಟ ಅಧಿಕಾರಿಯಿಂದ ಅನುಮತಿ ಪಡೆಯದ ಆರೋಪದ ಮೇಲೆ ಜಿಲ್ಲಾಧಿಕಾರಿ ರಾಜೇಶ್ ವಿಶ್ವಾಸ್ ಅವರನ್ನು ಅಮಾನತುಗೊಳಿಸಿದ್ದಾರೆ.
ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್ನ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು ಖೇರ್ಕಟ್ಟಾ ಅಣೆಕಟ್ಟಿನಲ್ಲಿ ರಜೆಯನ್ನು ಆನಂದಿಸುತ್ತಿದ್ದಾಗ ಆಕಸ್ಮಿಕವಾಗಿ 1 ಲಕ್ಷ ರೂಪಾಯಿ ಮೌಲ್ಯದ ಸ್ಮಾರ್ಟ್ಫೋನ್ ಅನ್ನು 15 ಅಡಿ ಆಳದ ನೀರಿನಿಂದ ತುಂಬಿದ್ದ ಜಲಾಶಯದಲ್ಲಿ ಬೀಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಮೊಬೈಲ್ ಹುಡುಕಲು ನೀರಿಗೆ ಧುಮುಕಿದ್ದರು.

ಆದರೆ, ಮೊಬೈಲ್ ಹೊರತೆಗೆಯುವ ಪ್ರಯತ್ನ ವಿಫಲವಾದಾಗ, ಅಧಿಕಾರಿಯು ಮೂರು ದಿನಗಳ ಕಾಲ ನಿರಂತರವಾಗಿ ಎರಡು 30hp ಡೀಸೆಲ್ ಪಂಪ್ಗಳನ್ನು ಚಲಾಯಿಸಿ, 21 ಲಕ್ಷ ಲೀಟರ್ ನೀರನ್ನು ಖಾಲಿ ಮಾಡಿದ್ದಾರೆ. ಈ ನೀರನ್ನು 1,500 ಎಕರೆ ಕೃಷಿ ಭೂಮಿಗೆ ನೀರುಣಿಸಲು ಸಾಕಾಗುತ್ತದೆ. ಆದರೆ ಮೊಬೈಲ್ಗಾಗಿ ಎಲ್ಲಾ ನೀರನ್ನು ಹೊರಹಾಕಲಾಗಿದೆ.
ಸೋಮವಾರ ಸಂಜೆಯಿಂದ ಪಂಪ್ಗಳು ನೀರನ್ನು ಹೊರ ಹಾಕಲು ಆರಂಭಿಸಿದವು ಮತ್ತು ಗುರುವಾರದವರೆಗೆ ಕೆಲಸ ಮಾಡಿದ್ದವು. ದೂರಿನ ಮೇರೆಗೆ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಇದನ್ನು ತಡೆದಿದ್ದಾರೆ. ಆದರೆ, ಆರು ಅಡಿ ಆಳದವರೆಗೆ ಅಂದರೆ ಸುಮಾರು 21 ಲಕ್ಷ ಲೀಟರ್ ನೀರನ್ನು ಈಗಾಗಲೇ ಪಂಪ್ ಹೊಎಹಾಕಲಾಗಿತ್ತು. ಈ ಪ್ರದೇಶವು ಬೇಸಿಗೆಯಲ್ಲಿಯೂ ಸಹ 10 ಅಡಿ ಆಳದ ನೀರು ಇದ್ದು, ಪ್ರಾಣಿಗಳು ಬೇಸಿಗೆಯಲ್ಲಿ ದಾಹ ನೀಗಿಸಲು ಬಳಸುತ್ತಿದ್ದವು.
"ಸೆಲ್ಫಿ ತೆಗೆದುಕೊಳ್ಳುವಾಗ ಅವರ ಫೋನ್ ಕೈಯಿಂದ ಜಾರಿದೆ. ಮೊಬೈಲ್ನಲ್ಲಿ ಅಧಿಕೃತ ಇಲಾಖೆಯ ಡೇಟಾ ಇದ್ದ ಕಾರಣ ಅದನ್ನು ಮರಳಿ ಪಡೆಯಬೇಕಾಯಿತು. ನಾನು ನನ್ನ ಬಿಡುವಿನ ದಿನದಂದು ಅಲ್ಲಿ ಸ್ನಾನ ಮಾಡಲು ಕೆಲವು ಸ್ನೇಹಿತರೊಂದಿಗೆ ಭಾನುವಾರ ಅಣೆಕಟ್ಟಿಗೆ ಹೋಗಿದ್ದೆ. ನನ್ನ ಫೋನ್ ಓವರ್ಫ್ಲೋ ಟ್ಯಾಂಕರ್ಗಳಿಗೆ ಬಿತ್ತು. ಅದರ ನೀರು ಬಳಕೆಗೆ ಯೋಗ್ಯವಾಗಿರಲಿಲ್ಲ. ಅದು 10 ಅಡಿ ಆಳವಾಗಿತ್ತು" ಎಂದು ರಾಜೇಶ್ ವಿಶ್ವಾಸ್ ಹೇಳಿದ್ದಾರೆ.
ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ರಮಣ್ ಸಿಂಗ್, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. "ಸರ್ವಾಧಿಕಾರಿ" ರಾಜ್ಯ ಸರ್ಕಾರದ ಅಡಿಯಲ್ಲಿ ಅಧಿಕಾರಿಗಳು ಈ ಪ್ರದೇಶವನ್ನು ತಮ್ಮ ಪೂರ್ವಜರ ಆಸ್ತಿ ಎಂದು ಪರಿಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications