ಛತ್ತೀಸ್ ಘಡದಲ್ಲಿ ಐಎಸ್ಐ ಸ್ಲೀಪರ್ ಸೆಲ್, ಇಬ್ಬರ ಬಂಧನ
ಐಎಸ್ಐ ಸ್ಲೀಪರ್ ಸೆಲ್ ನಡೆಸುತ್ತಿದ್ದರು ಎನ್ನಲಾದ ಮಣೀಂದ್ರ ಯಾದವ್ ಮತ್ತು ಸಂಜಯ್ ದೇವಗನ್ ಎನ್ನುವವರನ್ನು ಛತ್ತೀಸ್ ಘಡ ಪೊಲೀಸರು ಬಿಲಾಸ್ ಪುರ್ ನಲ್ಲಿ ಬಂಧಿಸಿದ್ದಾರೆ.
ಛತ್ತೀಸ್ ಘಡ, ಏಪ್ರಿಲ್ 16: ಐಎಸ್ಐ ಸ್ಲೀಪರ್ ಸೆಲ್ ನಡೆಸುತ್ತಿದ್ದರು ಎನ್ನಲಾದ ಇಬ್ಬರು ಶಂಕಿತ ಉಗ್ರರನ್ನು ಛತ್ತೀಸ್ ಘಡ ಪೊಲೀಸರು ಬಿಲಾಸ್ ಪುರ್ ನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮಣೀಂದ್ರ ಯಾದವ್ ಮತ್ತು ಸಂಜಯ್ ದೇವಗನ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.[ದೇವೇಗೌಡ ಬಗ್ಗೆ ಟ್ವೀಟ್ ಮಾಡಿದ ಒಮರ್, ಕೆರಳಿದ ಸಿಟಿ ರವಿ]
ಫೋನ್ ಕರೆಗಳನ್ನು ಟ್ಯಾಪ್ ಮಾಡಿ ಈ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಇತ್ತೀಚೆಗೆ ಕಾಶ್ಮೀರ ಮತ್ತು ಮಧ್ಯ ಪ್ರದೇಶದಲ್ಲಿ ಎಟಿಎಸ್ ನಿಂದ ಸೆರೆಯಾಗಿದ್ದ ಸತ್ವಿಂದರ್ ಸಿಂಗ್, ರಜ್ಜಾನ್ ತಿವಾರಿ, ಬಲ್ರಾಮ್ ಜತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಜಂಜ್ಗಿರ್ ಚಂಪಾ ಭಾಗಕ್ಕೆ ಸೇರಿದ ಈ ಇಬ್ಬರು ಬಂಧಿತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
"ಬಂಧಿತರ ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದು ಹಲವು ಕಡೆಗಳಿಂದ ಹಣ ಪಡೆಯುತ್ತಿದ್ದರು. ಮಾತ್ರವಲ್ಲ ಬೇರೆ ಬೇರೆ ಬ್ಯಾಂಕ್ ಖಾತೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದರು. ನಮಗೆ ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ದಾಳಿ ನಡೆಸಿ ಬಂಧಿಸಿದೆವು," ಎಂದು ಬಿಲಾಸ್ಪುರ್ ಎಸ್ಪಿ ಮಯಾಂಕ್ ಶ್ರೀವಾಸ್ತವ ಹೇಳಿದ್ದಾರೆ.[ಹೈಜಾಕ್ ಬೆದರಿಕೆ, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್]
"ಸಿವಿಲ್ ಲೈನ್ಸ್ ಪ್ರದೇಶದಿಂದ ಮಣೀಂದ್ರನನ್ನು ಬಂಧಿಲಾಗಿದೆ. ಆತ ರಜ್ಜಾನ್ ತಿವಾರಿ ಜತೆ ಸಂಪರ್ಕ ಇರುವುದನ್ನು ಒಪ್ಪಿಕೊಂಡಿದ್ದಾನೆ. ತಿವಾರಿ ನಿರ್ದೇಶನದ ಮೇರೆಗೆ ನಾನು ಹಣ ವರ್ಗಾವಣೆ ಮಾಡುತ್ತಿದ್ದ ಎನ್ನುವುದನ್ನು ಮಣೀಂದ್ರ ಒಪ್ಪಿಕೊಂಡಿದ್ದಾನೆ. ಇನ್ನು ದೇವಗನ್ ನನ್ನು ಇಲ್ಲಿನ ತೆಲಿಪಾರ ಭಾಗದಿಂದ ಬಂಧಿಸಲಾಗಿದೆ," ಎಂದು ಅವರು ಮಾಹಿತಿ ನೀಡಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications