ಛತ್ತೀಸ್ ಗಢದ ಹೊಸ ರಾಜಧಾನಿಯ ಹೆಸರು ಅಟಲ್ ನಗರ!
ಭೋಪಾಲ್, ಆಗಸ್ಟ್ 22: ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಅವರ ನೆನಪಿಗಾಗಿ ಛತ್ತೀಸ್ ಗಢವು ತನ್ನ ರಾಜಧಾನಿ ನಯಾ ರಾಯ್ಪುರವನ್ನು 'ಅಟಲ್ ನಗರ' ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ.
2000 ನೇ ಇಸವಿಯಲ್ಲಿ ಮಧ್ಯಪ್ರದೇಶದಿಂದ ಹೊರಬಂದು ಛತ್ತೀಸ್ ಗಢ ಪ್ರತ್ಯೇಕ ರಾಜ್ಯವಾಗಿ ರೂಪುಗೊಳ್ಳುವಲ್ಲಿ ವಾಜಪೇಯಿ ಅವರ ಕೊಡುಗೆಯೂ ಇರುವುರಿಂದ ಅವರ ನೆನಪಿಗಾಗಿ ರಾಯ್ಪುರಕ್ಕೆ ಅವರದೇ ಹೆಸರನ್ನು ಇಡಲಾಗುವುದು ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಹೇಳಿದ್ದಾರೆ.
ಭಾರತದ ಅತ್ಯುತ್ತಮ ನಗರಗಳಲ್ಲೊಂದಾದ ನಯಾ ರಾಯ್ಪುರ ಸುಸಜ್ಜಿತ ನಗರವೆಂಬ ಹೆಗ್ಗಳಿಕೆ ಗಳಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಬೇರ್ಪಟ್ಟಾಗಲೂ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆವರು ರಾಯ್ಪುರಕ್ಕೆ ಬಂದು ಹೊಸ ನಗರ ಕಟ್ಟುವುದು ಹೇಗೆಂಬ ಬಗ್ಗೆ ಅಭ್ಯಸಿಸಿ ಹೋಗಿದ್ದರಂತೆ! ಅತೀ ಕಡಿಮೆ ಅವಅಧಿಯಲ್ಲಿ ಒಂದು ಆಧುನಿಕ ನಗರವನ್ನು ಇಷ್ಟೆಲ್ಲ ಸುಸಜ್ಜಿತವಾಗಿ ಕಟ್ಟಬಹುದು ಎಂಬುದಕ್ಕೆ ರಾಯ್ಪುರ ಒಂದು ಉದಾಹರಣೆ ಎಂದು ನಾಯ್ಡು ಅವರೇ ಹೇಳಿದ್ದರು.

ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ 93 ವರ್ಷ ವಯಸ್ಸಿನ ಅಟಲ್ ಬಿಹಾರಿ ವಾಜಪೇಯಿ ಅವರ ಸವಿನೆನಪಿಗಾಗಿ ರಾಯ್ಪುರವು 'ಅಟಲ್ ನಗರ'ವಾಗಿ ಬದಲಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications