ಛತ್ತೀಸ್ ಗಢ ದುರಂತ, ದಿಗ್ವಿಜಯ್ ಸಿಂಗ್ ದಿಗ್ಭ್ರಮೆ
ಬಿಲಾಸ್ ಪುರ(ಛತ್ತೀಸ್ ಗಢ), ನ.11: ಛತ್ತೀಸ್ ಗಢ ಸರ್ಕಾರ ಆಯೋಜಿಸಿದ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಎಂಟು ಜನ ಮಹಿಳೆಯರು ಮೃತಪಟ್ಟಿದ್ದು, 24ಕ್ಕೂ ಅಧಿಕ ಮಂದಿ ಜೀವನ್ಮರಣ ಹೋರಾಟ ನಡೆಸಿದ್ದಾರೆ, ಕೂಡಲೇ ಆರೋಗ್ಯ ಸಚಿವ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
ಆರೋಗ್ಯ ಸಚಿವ ಅಮರ್ ಅಗರವಾಲ್ ಅವರ ಸ್ವಕ್ಷೇತ್ರದಲ್ಲೇ ಶನಿವಾರ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೂಲಗಳ ಪ್ರಕಾರ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಮಹಿಳೆಯರು ಸೋಮವಾರದ ವೇಳೆಗೆ ಜ್ವರದಿಂದ ನರಳಲು ಪ್ರಾರಂಭಿಸಿದರು. ಮಂಗಳವಾರ ಬೆಳಗ್ಗೆ 8 ಜನ ಸಾವನ್ನಪ್ಪಿದ್ದಾರೆ. 24ಕ್ಕೂ ಅಧಿಕ ಮಂದಿ ದೇಹಸ್ಥಿತಿ ವಿಷಮವಾಗಿದೆ.

ಆರೋಗ್ಯ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದಿಗ್ವಿಜಯ್ ಸಿಂಗ್ ಟೀಕಿಸಿದ್ದಾರೆ. ಸರ್ಕಾರಿ ನಿಯಮಗಳ ಪ್ರಕಾರ ಸಂತಾನಹರಣ ಚಿಕಿತ್ಸೆಗೆ ಒಳಪಡುವವರಿಗೆ 1,400 ರು ಹಾಗೂ ಮಹಿಳೆಯರನ್ನು ಕರೆ ತರುವವರಿಗೆ 200 ರು ಮೊತ್ತ ಸಿಗಲಿದೆ.
8 people die in a Sterilisation Camp in Chattisgarh. Govt must take a stern action against them. Can't imagine how could this happen ?
— digvijaya singh (@digvijaya_28) November 11, 2014 ಆದರೆ, ದಿಗ್ವಿಜಯ್ ಸಿಂಗ್ ಅವರ ಆರೋಪವನ್ನು ಅಲ್ಲಗೆಳೆದಿರುವ ರಮಣ್ ಸಿಂಗ್ ಅವರ ಬಿಜೆಪಿ ಸರ್ಕಾರ, ಈಗಾಗಲೇ ಘಟನೆ ಬಗ್ಗೆ ಮೂವರು ತಜ್ಞರಿರುವ ಸಮಿತಿ ರಚಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಮೃತಪಟ್ಟ ಮಹಿಳೆಯರ ಕುಟುಂಬಕ್ಕೆ 2 ಲಕ್ಷ ರು ಪರಿಹಾರ ಧನ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರುರೂ ಪರಿಹಾರ ನೀಡಲಾಗುತ್ತಿದೆ ಎಂದು ಘೋಷಿಸಿದೆ.
And that too in Health Minister's Constituency ! He must resign.
— digvijaya singh (@digvijaya_28) November 11, 2014 -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications