ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ ಎಂದ ಛೋಟಾ ಶಕೀಲ್
ನವದೆಹಲಿ, ಆಗಸ್ಟ್ 26: ಭಾರತಕ್ಕೆ ಬೇಕಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ಇದ್ದಾನೆ ಎಂಬ ವರದಿಗಳನ್ನು ದೇಶಭ್ರಷ್ಟ ಭೂಗತ ಪಾತಕಿ ಛೋಟಾ ಶಕೀಲ್ ತಳ್ಳಿಹಾಕಿದ್ದಾನೆ. ಪಾಕಿಸ್ತಾನ ಸರ್ಕಾರವು ದಾವೂದ್ ಇಬ್ರಾಹಿಂ ತನ್ನ ನೆಲದಲ್ಲಿಯೇ ಇದ್ದಾನೆ ಎಂದು ಒಪ್ಪಿಕೊಂಡು ಬಳಿಕ ನಿರಾಕರಿಸಿತ್ತು.
'ಡಿ ಕಂಪೆನಿ'ಯ ಸದಸ್ಯರಲ್ಲಿ ಒಬ್ಬನಾದ ಛೋಟಾ ಶಕೀಲ್, ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾನೆ. ಕರಾಚಿಯ ಕ್ಲಿಫ್ಟನ್ ಪ್ರದೇಶದಲ್ಲಿ ದಾವೂದ್ ಇಬ್ರಾಹಿಂ ವಾಸಿಸುತ್ತಿದ್ದಾನೆ ಎಂದು ಬಿಂಬಿಸುವುದು ಭಾರತೀಯ ಮಾಧ್ಯಮಗಳ ಹೊಣೆಗಾರಿಕೆ. ಪಾಕಿಸ್ತಾನ ಸೇರಿದಂತೆ ಯಾವುದೇ ಸರ್ಕಾರಕ್ಕೆ ತಾವು ಉತ್ತರದಾಯಿಗಳಲ್ಲ ಎಂದು ಹೇಳಿದ್ದಾನೆ.
'ಅದು ನಿಮ್ಮ ಜವಾಬ್ದಾರಿ, ನಮ್ಮದಲ್ಲ. ನಾವು ಕರಾಚಿಯಲ್ಲಿ ಇಲ್ಲದೇ ಇರುವಾಗ ನಮ್ಮ ಮೇಲೆ ಯಾರು ಅಧಿಕಾರ ಚಲಾಯಿಸಲು ಸಾಧ್ಯ?' ಎಂದು ಛೋಟಾ ಶಕೀಲ್, ನಿರ್ಬಂಧಕ್ಕೆ ಒಳಗಾದ 88 ಉಗ್ರರ ಪಟ್ಟಿಯಲ್ಲಿ ಪಾಕಿಸ್ತಾನ ಸರ್ಕಾರವು ಆತನ ವಿಳಾಸ ಹೆಸರಿಸಿರುವ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾನೆ.

'ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಕಾಲದಲ್ಲಿ ನೀವು ಏನನ್ನು ಬೇಕಾದರೂ ಬಿಂಬಿಸಬಹುದು. ಬಂಗಲೆ ಅಥವಾ ಕಾರು ಇದೆ ಎನ್ನಬಹುದು. ದಾವೂದ್ ಇಬ್ರಾಹಿಂನ ಮನೆ ಎಂದು ನೀವು ತೋರಿಸಿರುವುದೆಲ್ಲವೂ ನಿಮ್ಮ ಜವಾಬ್ದಾರಿಯಷ್ಟೇ. ನಮ್ಮದಲ್ಲ. ನೀವು ಏನನ್ನು ಬೇಕಾದರೂ ತೋರಿಸಲು ಸ್ವತಂತ್ರರಾಗಿದ್ದೀರಿ' ಎಂದು ವ್ಯಂಗ್ಯವಾಗಿ ಹೇಳಿದ್ದಾನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications