ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧದ ಪ್ರಕರಣದಿಂದ ಹಿಂದೆ ಸರಿದ ಮುಖ್ಯ ನ್ಯಾಯಮೂರ್ತಿ
ನವದೆಹಲಿ, ಜ. 05: ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಿಂದೆ ಸರಿದಿದ್ದಾರೆ.
ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಪ್ರಕರಣದಲ್ಲಿ ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್ ಆದೇಶದ ಕುರಿತು 2020 ರಲ್ಲಿ ಟ್ವೀಟ್ ಮಾಡಿದ್ದಕ್ಕಾಗಿ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಆರೋಪವಿದೆ.
ಆ ಆದೇಶ ನೀಡಿದ ನ್ಯಾಯಾಧೀಶರಲ್ಲಿ ತಾನೂ ಇದ್ದ ಕಾರಣ, ಕುನಾಲ್ ಕಾಮ್ರಾ ವಿರುದ್ಧದ ಪ್ರಕರಣದ ವಿಚಾರಣೆಯ ಭಾಗವಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

2018 ರಲ್ಲಿ ಆರ್ಕಿಟೆಕ್ಟ್, ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಒಂದು ವಾರದ ನಂತರ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಮಂಜೂರು ಮಾಡಿದ್ದನ್ನು ಟೀಕಿಸಿ ಕುನಾಲ್ ಕಾಮ್ರಾ ಅನೇಕ ಟ್ವೀಟ್ಗಳನ್ನು ಹಾಕಿದ್ದರು.
ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ಅಂದಿನ ದ್ವಿಸದಸ್ಯ ಪೀಠವು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನದ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ನಾವು ಸಾಂವಿಧಾನಿಕ ನ್ಯಾಯಾಲಯವಾಗಿ ಕಾನೂನನ್ನು ರೂಪಿಸದಿದ್ದರೆ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸದಿದ್ದರೆ, ಮತ್ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿತ್ತು.
ಕುನಾಲ್ ಕಾಮ್ರಾ ಅರ್ನಬ್ ಗೋಸ್ವಾಮಿಗೂ ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕಿತ್ತಾಟ ನಡೆಯುತ್ತಲೆ ಇತ್ತು. ಮೂರು ವರ್ಷಗಳ ಹಿಂದೆ, ಮುಂಬೈನಿಂದ ಲಕ್ನೋಗೆ ವಿಮಾನದಲ್ಲಿ ಅರ್ನಬ್ರನ್ನು ಕೆಣಕಿದ್ದ ಕುನಾಲ್ಗೆ ಹಲವಾರು ವಿಮಾನಯಾನ ಸಂಸ್ಥೆಗಳು ನಿಷೇಧ ಹೇರಿದ್ದವು.

ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮಾಡಿದ ಟ್ವೀಟ್ಗಳಿಗೆ ಕ್ಷಮೆಯಾಚಿಸದೆ ಕುನಾಲ್ ಕಮ್ರಾ ಅವರು ತಮ್ಮ ಟೀಕೆ ಹಾಸ್ಯ ಮತ್ತು ಜೋಕ್ಗಳು ವಾಸ್ತವವಲ್ಲ ಎಂದು ಹೇಳಿದರು. "ಜೋಕ್ಗಳಿಗೆ ಯಾವುದೇ ರಕ್ಷಣೆ ಅಗತ್ಯವಿಲ್ಲ. ಇದು ಹಾಸ್ಯನಟನ ಗ್ರಹಿಕೆಯನ್ನು ಆಧರಿಸಿದೆ" ಎಂದು ಕುನಾಲ್ ಕಾಮ್ರಾ ಹೇಳಿದ್ದರು.
ಕುನಾಲ್ ಕಮ್ರಾ ಅವರನ್ನು ವಿಚಾರಣೆಗೆ ಒಳಪಡಿಸಲು ತಕ್ಷಣ ಅನುಮತಿ ನೀಡಿದ ಸರ್ಕಾರದ ಆಗಿನ ಉನ್ನತ ಕಾನೂನು ಅಧಿಕಾರಿ ಕೆಕೆ ವೇಣುಗೋಪಾಲ್ ಅವರು ಹಾಸ್ಯನಟನ ಟ್ವೀಟ್ಗಳು "ಕೆಟ್ಟ ಅಭಿರುಚಿಯಲ್ಲಿದೆ" ಎಂದು ಹೇಳಿದ್ದಾರೆ.
{document2}x
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications