Maharashtra: ಪೊಲೀಸ್ ಠಾಣೆಯಲ್ಲಿ ಶಿವಸೇನಾ ಮುಖಂಡನ ಮೇಲೆ ಬಿಜೆಪಿ ಶಾಸಕನಿಂದ ಗುಂಡು!
ಮುಂಬೈ ಫೆಬ್ರವರಿ 3: ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯ ನಗರ ಮುಖ್ಯಸ್ಥರ ಮೇಲೆ ಬಿಜೆಪಿ ಶಾಸಕರೊಬ್ಬರು ನಿನ್ನೆ ತಡ ರಾತ್ರಿ ಗುಂಡು ಹಾರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಮಹೇಶ್ ಗಾಯಕ್ವಾಡ್ ಮೇಲೆ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದು, ಅವರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸಬಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ)ಬಣದ ನಾಯಕ ಮಹೇಶ್ ಹಾಯಕ್ವಾಡ್ ಅವರ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಹೇಶ್ ಹಾಯಕ್ವಾಡ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಮುಂಬೈನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕಲ್ಯಾಣ್ ಪೂರ್ವ ಕ್ಷೇತ್ರವನ್ನು ಗಣಪತ್ ಗಾಯಕ್ವಾಡ್ ಪ್ರತಿನಿಧಿಸುತ್ತಾರೆ. ಅವರ ಪಕ್ಷವು ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಸೇನೆಯೊಂದಿಗೆ ಮೈತ್ರಿ ಹೊಂದಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಉಭಯ ಕಡೆಯವರು ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಮಾತುಕತೆ ವಾಗ್ವಾದಕ್ಕೆ ತಿರುಗಿ ತಡ ರಾತ್ರಿ ಮಹೇಶ್ ಗಾಯಕ್ವಾಡ್ ಮೇಲೆ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಸೇನಾ ನಾಯಕ ಮತ್ತು ಮತ್ತೊಬ್ಬ ಬೆಂಬಲಿಗರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹೇಶ್ ಗಾಯಕ್ವಾಡ್ ಅವರ ದೇಹದಿಂದ ಐದು ಗುಂಡುಗಳನ್ನು ಹೊರತೆಗೆಯಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, 'ಮಹೇಶ್ ಗಾಯಕ್ವಾಡ್ ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾದ ಜಮೀನಿಗೆ ಸಂಬಂಧಿಸಿದಂತೆ ಸಮಸ್ಯೆಯಾಗಿದೆ. ಅವರು ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆ' ಎಂದು ಹೇಳಿದ್ದಾರೆ.
"ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ಅವರ ನಡುವೆ ಸಾಕಷ್ಟು ವಿವಾದಗಳಿವೆ. ಹೀಗಾಗಿ ಅವರು ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು. ಆದರೆ ಗಣಪತ್ ಗಾಯಕ್ವಾರ್ಡ್ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದರು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ," ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುಧಾಕರ ಪಠಾರೆ ತಿಳಿಸಿದ್ದಾರೆ.
ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆಕ್ರೋಶ
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ತರಾಟೆಗೆ ತೆಗೆದುಕೊಂಡಿದೆ.
''ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮುಖ್ಯಮಂತ್ರಿ ಹಾಗೂ ಮಾಜಿ ಕಾರ್ಪೋರೇಟರ್ ಅವರ ಆಪ್ತರು, ಅವರಿಬ್ಬರೂ ಅಧಿಕಾರದಲ್ಲಿದ್ದಾರೆ ಎಂದರೆ ಈ ಜನರಿಗೆ ಕಾನೂನಿನ ಭಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ವಿಫಲವಾಗಿದೆ'' ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಹೇಳಿದ್ದಾರೆ.
2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ಬಂಡಾಯವೆದ್ದು ಬಿಜೆಪಿಯ ನೆರವಿನೊಂದಿಗೆ ಸರ್ಕಾರ ರಚಿಸಿದ ನಂತರ ಶಿವಸೇನೆ ಇಬ್ಭಾಗವಾಗಿತ್ತು. ಚುನಾವಣಾ ಆಯೋಗವು ಪಕ್ಷದ ಪರಂಪರೆಯ ಬಗ್ಗೆ ಶ್ರೀ ಶಿಂಧೆ ಪರವಾಗಿ ಕಳೆದ ವರ್ಷ ತೀರ್ಪು ನೀಡಿತ್ತು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications