Budget 2024: ಇದು ತೆರಿಗೆ ಹೊರೆ ಇಲ್ಲದ, ವಿಕಸಿತ ಭಾರತದ ಬಜೆಟ್: ಕೆ.ಸುಧಾಕರ್
ನವದೆಹಲಿ, ಜುಲೈ 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್ ಮಂಡಿಸದೆ, ರಾಷ್ಟ್ರೀಯ ಬಜೆಟ್ ಮಂಡಿಸಿದೆ. ವೋಟ್ ಬ್ಯಾಂಕ್ ಬಜೆಟ್ ಮಂಡಿಸದೆ ವಿಕಸಿತ ಭಾರತದ ಬಜೆಟ್ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ 2024 ನೇ ಸಾಲಿನ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ ಎಂದು ಅವರು ಹೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅಭಿವೃದ್ಧಿ ಗುರಿಯ ಹಾಗೂ ತೆರಿಗೆ ಹೊರೆ ಇಲ್ಲದ, ಸಮತೋಲಿತ ಬಜೆಟ್ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದರಿಂದ ಬಜೆಟ್ನಲ್ಲೂ ತಾರತಮ್ಯ ಮಾಡಬಹುದು ಎಂಬ ವಿರೋಧ ಪಕ್ಷಗಳ ಸುಳ್ಳಿನ ಊಹೆಗಳಿಗೆ ಈ ಬಜೆಟ್ ತಣ್ಣೀರು ಎರಚಿದೆ.
ಈ ಬಜೆಟ್ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್ ಎಂದು ಅವರು ಬಣ್ಣಿಸಿದ್ದಾರೆ.
ಚಿಕ್ಕಬಳ್ಳಾಪುರ ಜನರಿಗೂ ಹೆಚ್ಚು ಲಾಭ
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್ ಬಲಗೊಳಿಸುವ ಕ್ರಮದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರೈತರಿಗೆ ಹೆಚ್ಚು ಲಾಭ ಸಿಗಲಿದೆ. ಈ ಭಾಗದಲ್ಲಿ ತರಕಾರಿ ಬೆಳೆಗಾರರ ಸಂಖ್ಯೆ ಹೆಚ್ಚಿರುವುದರಿಂದ ಈ ಕ್ರಮ ಶ್ಲಾಘನೀಯ.

ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ.
ನಮ್ಮ ಜಿಲ್ಲೆ ಜನರಿಗೆ ಉದ್ಯೋಗವಕಾಶ
ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಅಗಾಧ ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದೆ. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್ನಲ್ಲಿ ತಂದಿರುವುದಕ್ಕೆ ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂಸದರ ಹರ್ಷ ವ್ಯಕ್ತಪಡಿಸಿದರು.
ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯ. ಈ ಕುರಿತು ನನಗೂ ಚಿಂತನೆಗಳಿತ್ತು. ಇದನ್ನು ಕೇಂದ್ರವೇ ಕೈಗೆತ್ತಿಕೊಂಡಿರುವುದರಿಂದ ಸ್ವಾವಲಂಬಿ ಮಹಿಳೆಯರಿಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿದಂತಾಗಿದೆ ಎಂದು ತಿಳಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications