ಅರಿಯದೆ ತಪ್ಪೊಪ್ಪಿಕೊಂಡ ಭಾರತ: ವಿಕೆ ಸಿಂಗ್ ಹೇಳಿಕೆಗೆ ಚೀನಾ ಎದಿರೇಟು
ನವದೆಹಲಿ, ಫೆಬ್ರವರಿ 8: ಭಾರತದ ಎಲ್ಎಸಿ ಅತಿಕ್ರಮಣದ ಕುರಿತಾದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರ ಹೇಳಿಕೆಯು 'ಅರಿಯದೆ ಮಾಡಿದ ತಪ್ಪೊಪ್ಪಿಗೆ' ಎಂದು ಚೀನಾ ಹೇಳಿದೆ.
'ಚೀನಾವು ವಾಸ್ತವ ಗಡಿ ನಿಯಂತ್ರಣ ರೇಖೆಯನ್ನು ಹತ್ತು ಬಾರಿ ಉಲ್ಲಂಘನೆ ಮಾಡಿ ದಾಟಿದ್ದರೆ, ಭಾರತವು ಕನಿಷ್ಠ 50 ಬಾರಿಯಾದರೂ ಹಾಗೆ ಮಾಡಿರುತ್ತದೆ' ಎಂದು ಮದುರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಸೇನಾ ಮುಖ್ಯಸ್ಥರೂ ಆಗಿರುವ ವಿಕೆ ಸಿಂಗ್ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಭಾರತದ ಅತಿಕ್ರಮಣಗಳೇ ಚೀನಾ-ಭಾರತ ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಗೆ ಮೂಲ ಕಾರಣ ಎಂದು ಆರೋಪಿಸಿದ್ದಾರೆ.

'ಇದು ಭಾರತದ ಕಡೆಯಿಂದ ಅರಿವಿಲ್ಲದೆ ಮಾಡಿರುವ ತಪ್ಪೊಪ್ಪಿಗೆ. ಬಹಳ ಕಾಲದಿಂದ ಭಾರತವು ಚೀನಾದ ಭಾಗಗಳನ್ನು ಅತಿಕ್ರಮಿಸುವ ಪ್ರಯತ್ನವಾಗಿ ಗಡಿಯನ್ನು ದಾಟಿ ಬರುವ ಕೃತ್ಯಗಳನ್ನು ಮಾಡಿದೆ. ಈ ಮೂಲಕ ನಿರಂತರವಾಗಿ ವಿವಾದ ಹಾಗೂ ಘರ್ಷಣೆಗಳನ್ನು ಸೃಷ್ಟಿಸುತ್ತಲೇ ಇದೆ. ಇ ಒಪ್ಪಂದ ಆಘಾತದ ಬಳಿಕ ಭಾರತದ ಸಾಲ ವಾಪಸ್ ಕೊಟ್ಟ ಶ್ರೀಲಂಕಾ: ಚೀನಾ ಕೈವಾಡ ಶಂಕೆದು ಚೀನಾ-ಭಾರತ ಗಡಿ ವಿವಾದಕ್ಕೆ ಮೂಲ ಕಾರಣ' ಎಂದು ವಾಂಗ್ ಹೇಳಿದ್ದಾರೆ.
'ಚೀನಾದೊಂದಿಗೆ ಮಾಡಿಕೊಂಡಿರುವ ಒಮ್ಮತ, ಒಪ್ಪಂದಗಳು ಹಾಗೂ ಕರಾರುಗಳನ್ನು ಭಾರತ ಅನುಸರಿಸಬೇಕು ಮತ್ತು ಪ್ರಬಲ ಕ್ರಿಯೆಯ ಮೂಲಕ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಎತ್ತಿಹಿಡಿಯಬೇಕು' ಎಂದು ಅವರು ಆಗ್ರಹಿಸಿದ್ದಾರೆ.
'ಚೀನಾ ಎಲ್ಎಸಿ ಕುರಿತಾದ ತನ್ನದೇ ಗ್ರಹಿಕೆಯೊಂದಿಗೆ ಅನೇಕ ಬಾರಿ ಅತಿಕ್ರಮಣ ಮಾಡಿದೆ. ಅದೇ ರೀತಿ ನಮ್ಮ ಗ್ರಹಿಕೆಗೆ ಅನುಗುಣವಾಗಿ ನಾವು ಕೂಡ ಅನೇಕ ಬಾರಿ ಮಾಡಿದ್ದೇವೆಯೋ ನಿಮಗೆ ತಿಳಿದಿಲ್ಲ. ಚೀನಾದ ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ. ನಿಮಗೆ ಭರವಸೆ ನೀಡುತ್ತೇನೆ, ಚೀನಾ ಹತ್ತು ಬಾರಿ ಗಡಿ ದಾಟಿ ಬಂದಿದ್ದರೆ, ನಾವು ಕನಿಷ್ಠ 50 ಬಾರಿ ಅದನ್ನು ಮಾಡಿರುತ್ತೇವೆ' ಎಂದು ವಿಕೆ ಸಿಂಗ್ ತಿಳಿಸಿದ್ದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ












Click it and Unblock the Notifications