ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಿದೆ ಚೀನಾ!
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಏನಾಗಬಹುದು ಅಂತ ಭಾರತದಲ್ಲಷ್ಟೇ ಕುತೂಹಲವಿಲ್ಲ. ಚೀನಾ ಕೂಡ ಫಲಿತಾಂಶದ ಬಗ್ಗೆ ಕುತೂಹಲದ ಕಣ್ಣು ನೆಟ್ಟು ಕೂತಿದೆ. ಗುಜರಾತ್ ನಲ್ಲಿನ ಬೆಳವಣಿಗೆಗಳನ್ನು ತುಂಬ ಆಸಕ್ತಿಯಿಂದ ನೋಡುತ್ತಿರುವ ಚೀನಾಗೆ ಚುನಾವಣೆ ಫಲಿತಾಂಶ ಅದರ ಹಿತಾಸಕ್ತಿ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದಿದೆ.
ಗುಜರಾತ್ ನಲ್ಲಿ ಬಿಜೆಪಿ ದೊಡ್ಡ ಮಟ್ಟದ ಜಯ ದಾಖಲಿಸಿದರೆ, ಪ್ರಧಾನಿ ನರೇಂದ್ರ ಮೋದಿ ಅವರ ಕೈಗೊಂಡ ಕ್ರಾಂತಿಕಾರಿ ಆರ್ಥಿಕ ಸುಧಾರಣೆಗಳಿಗೆ ಜನ ಬೆಂಬಲ ದೊರೆತಿದೆ ಎಂದು ಸುಳಿವು ಸಿಕ್ಕಂತಾಗುತ್ತದೆ. ಒಂದು ವೇಳೆ ಬಿಜೆಪಿ ಸೋತರೆ ಅಥವಾ ಸರಳ ಬಹುಮತವಷ್ಟೇ ಪಡೆದರೆ ಸುಧಾರಣಾ ಕ್ರಮಗಳ ಬಗ್ಗೆ ಜನರಿಗೆ ಸಮಾಧಾನ ಇಲ್ಲ ಎಂಬ ಸಂದೇಶ ಸಿಗುತ್ತದೆ. ಸರಕಾರಕ್ಕೂ ಒಂದು ಎಚ್ಚರಿಕೆಯಾಗುತ್ತದೆ.
ಭಾರತದ ಆರ್ಥಿಕ ಸುಧಾರಣೆ ಬಗ್ಗೆ ಚೀನಿಯರಿಗೇಕೆ ಅಷ್ಟು ಆಸಕ್ತಿ ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಭಾರತದಲ್ಲಿ ಚೀನಿ ಕಂಪೆನಿಗಳ ಬಂಡವಾಳ ಹೂಡುಕೆ ಪ್ರಮಾಣ ಹೆಚ್ಚಾಗುತ್ತಲೇ ಇದೆ. "ನರೇಂದ್ರ ಮೋದಿ ಅವರ ಆರ್ಥಿಕ ಸುಧಾರಣೆಗಳ ಬಗ್ಗೆ ವಿಪಕ್ಷಗಳ ನಾಯಕರು ಹಾಗೂ ಆರ್ಥಿಕ ತಜ್ಞರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಗುಜರಾತ್ ಅಭಿವೃದ್ಧಿ ಮಾದರಿಯನ್ನು ಮೌಲ್ಯಮಾಪನ ಮಾಡುವುದಕ್ಕೆ ಸೂಕ್ತ ಕಾಲ" ಎಂದು ಚೀನಾದ ಸರಕಾರಿ ಮಾಧ್ಯಮ ಅಭಿಪ್ರಾಯ ಪಟ್ಟಿದೆ.

2016ರಲ್ಲಿ ಚೀನಿ ಕಂಪೆನಿಗಳ ಭಾರೀ ಹೂಡಿಕೆ
ಕಳೆದ ಕೆಲವು ವರ್ಷಗಳಲ್ಲಿ ಚೀನಾದಿಂದ ಭಾರತದಲ್ಲಾದ ಬಂಡವಾಳ ಹೂಡಿಕೆಯದು ಒಂದು ಲೆಕ್ಕಾಚಾರವಾದರೆ, 2016ರಲ್ಲಿ ಅದೆಷ್ಟೋ ಹೆಚ್ಚು ಪಟ್ಟು ಹೂಡಿಕೆ ಮಾಡಲಾಗಿದೆ. ಚೀನಾದ ಶಿಯೋಮಿ, ಒಪ್ಪೊದಂಥ ಹಲವು ಕಂಪೆನಿಗಳು ಭಾರತದಲ್ಲಿ ಒಳ್ಳೆ ವ್ಯವಹಾರ ನಡೆಸುತ್ತಿವೆ. ಒಂದು ವೇಳೆ ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ವಿಜಯ ಸಾಧಿಸಿದರೆ ಮತ್ತಷ್ಟು ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತರಲು ಮುಂದಾಗಬಹುದು" ಎಂದು ಲೇಖನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಸೋತರೆ ಆರ್ಥಿಕ ಸುಧಾರಣೆಗೆ ತಡೆ
ಒಂದು ವೇಳೆ ಬಿಜೆಪಿ ಸೋತ ಪಕ್ಷದಲ್ಲಿ ಆರ್ಥಿಕ ಸುಧಾರಣೆಗೆ ಮೋದಿ ನಡೆಸುತ್ತಿರುವ ಪ್ರಯತ್ನದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರುತ್ತದೆ. ಇನ್ನು ಭಾರತದ ಇತರ ರಾಜ್ಯಗಳ ಮೇಲೂ ಫಲಿತಾಂಶದ ಪ್ರಭಾವ ಆಗಿ, ಪ್ರಧಾನಿ ಮೋದಿಯ ಆರ್ಥಿಕ ಸುಧಾರಣಾ ಕ್ರಮಗಳಿಗೆ ತಡೆಯೊಡ್ಡಿದಂತಾಗುತ್ತದೆ ಎಂದು ಹೇಳಲಾಗಿದೆ.

ಜನರ ವಿಶ್ವಾಸ ಗಳಿಸಲು ಯತ್ನಿಸಬೇಕು
ಜನರಿಗೆ ಈಗಲೂ ಅನುಮಾನವಿದೆ. ಈ ಆರ್ಥಿಕ ಸುಧಾರಣೆಗಳಿಂದ ದೇಶದ ಸಣ್ಣ ವ್ಯವಹಾರಸ್ಥರು, ಜನ ಸಾಮಾನ್ಯರ ಮೇಲೆ ಯಾವುದೇ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂಬ ಅಭಿಪ್ರಾಯ ಇದೆ. ಆದ್ದರಿಂದ ಆರ್ಥಿಕ ಸುಧಾರಣೆಗಳಿಗೆ ಜನರ ಬೆಂಬಲ ಪಡೆಯಲು ಸರಕಾರ ಪ್ರಯತ್ನಗಳನ್ನು ಮಾಡಬೇಕು ಎಂದು ಚೀನಿ ಮಾಧ್ಯಮ ಬರೆದಿದೆ.

ಮುಂದಿನ ವಾರ ಬದಲಾವಣೆ ಕಾದಿದೆ
ಭಾರತದಲ್ಲಿ ವ್ಯವಹಾರ ನಡೆಸುತ್ತಿರುವ ಚೀನಿ ಕಂಪೆನಿಗಳು ಆರ್ಥಿಕ ನೀತಿಗಳಲ್ಲಿ ಬದಲಾವಣೆ ಮಾಡಿದರೆ ಅದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಮುಂದಿನ ವಾರ ಗುಜರಾತ್ ಫಲಿತಾಂಶದ ನಂತರ ಹಣಕಾಸು ಮಾರುಕಟ್ಟೆಯಲ್ಲಿ ಆಗಬಹುದಾದ ಬದಲಾವಣೆಗೆ ತಯಾರಿರುವಂತೆ ಸಹ ಬರೆದಿದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications