ಚೀನಾ ಅಣೆಕಟ್ಟಿನಿಂದ ಭಾರತದಲ್ಲಿ ಪ್ರವಾಹ ಭೀತಿ?
ಬೀಜಿಂಗ್, ನ.24: ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಚೀನಾ ದೇಶ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದೆ. ಈ ಮೂಲಕ ಭಾರತಕ್ಕೆ ಮತ್ತೊಮ್ಮೆ ತಲೆನೋವು ತಂದಿದೆ. ಈ ಅಣೆಕಟ್ಟಿನ ನಿರ್ಮಾಣದಿಂದ ಭಾರತ, ಬಾಂಗ್ಲಾದೇಶದ ಗಡಿಭಾಗದಲ್ಲಿ ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ.
ಟಿಬೆಟ್ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ 'ಯಾರ್ಲಾಂಗ್ ಜಂಗ್ಬೋ' (Yarlung Zangbo)
ಎಂದು ಹೆಸರಿಡಲಾಗಿದೆ. ಸಣ್ಣ ಮಟ್ಟದ ಅಣೆಕಟ್ಟು ನಿರ್ಮಾಣ ಮಾಡುತ್ತಿರುವ ಬಗ್ಗೆ ಚೀನಾ ಈ ಮುಂಚೆ ಭಾರತಕ್ಕೆ ತಿಳಿಸಿತ್ತು. ಅದರೆ, ಚೀನಾ ನಿರ್ಮಿಸಿರುವ ಈ ಅಣೆಕಟ್ಟಿನಿಂದಾಗಿ ಭಾರತ ಮತ್ತು ಬಾಂಗ್ಲಾದೇಶಗಳು ಆತಂಕಕ್ಕೀಡಾಗಿವೆ. ಅನೇಕ ಪ್ರಾಣ ಹಾನಿಗೆ ಕಾರಣವಾಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸಬೇಡಿ ಎಂದು ಭಾರತ ಮನವಿ ಮಾಡಿದ್ದರೂ ಲೆಕ್ಕಿಸದೆ ಚೀನಾ, ಅಣೆಕಟ್ಟು ನಿರ್ಮಾಣವನ್ನು ಪೂರ್ಣಗೊಳಿಸಿದೆ. ಅಣೆಕಟ್ಟುಗಳ ನಿರ್ಮಾಣದಿಂದ ಭಾರತಕ್ಕೆ ನೀರಿನ ಹರಿವು ಕಡಿಮೆ ಆಗಲಿದೆ. ಭಾನುವಾರದಿಂದಲೇ ಜಲವಿದ್ಯುತ್ ಕೇಂದ್ರ ಚಾಲನೆ ಪಡೆದುಕೊಂಡಿದೆ ಎಂದು ಚೀನಾ ಹೇಳಿದೆ.
ಬ್ರಹ್ಮಪುತ್ರ ನದಿಯಲ್ಲಿ ಅಣೆಕಟ್ಟು ಕಟ್ಟುತ್ತಿರುವ ಚೀನಾದ ಕ್ರಮಕ್ಕೆ ಭಾರತದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಬ್ರಹ್ಮ ಪುತ್ರ ನದಿಯ ಹರಿವನ್ನು ತಿರುವುಗೊಳಿಸಲು ಚೀನಾ ಪ್ರಯತ್ನಿಸುತ್ತಿದೆ ಎಂದು ಭಾರತ ಈ ಹಿಂದೆ ಆಕ್ಷೇಪಿಸಿತ್ತು. ಅರುಣಾಚಲ ಪ್ರದೇಶ, ಈಶಾನ್ಯ ರಾಜ್ಯಗಳಿಗೆ ಮಾರಕವಾಗಬಲ್ಲ ಈ ಯೋಜನೆ ಬಗ್ಗೆ ಪರಿಸರವಾದಿಗಳು ಕೂಗೆತ್ತಿದ್ದರು.
ಅದರೆ, ಚೀನಾ ತನ್ನ ಈ ಯೋಜನೆಯಿಂದ ನದಿ ಹರಿವಿಗೆ ಯಾವುದೇ ರೀತಿಯ ಅಡ್ಡಿಯಿಲ್ಲ ಎಂದು ಪ್ರತಿಪಾದಿಸಿತ್ತು. ಸುಮಾರು 2,000ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಮುಂದಾಗಿರುವ ಚೀನಾ ಜಂಗ್ಬೋ ಯೋಜನೆ ನಂತರ ಇದೇ ಮಾದರಿ ಐದು ಯೋಜನೆಗಳನ್ನು ರೂಪಿಸಿಕೊಂಡಿದೆ. ಯಾವುದೇ ಕೈಗಾರಿಕೆಗಳಿಲ್ಲದ ಟಿಬೇಟ್ ಪ್ರಾಂತ್ಯಕ್ಕೆ ಎಷ್ಟು ಪ್ರಮಾಣದ ವಿದ್ಯುತ್ ಏಕೆ ಬೇಕು ಎಂದು ಪರಿಸರವಾದಿಗಳು ಪ್ರಶ್ನಿಸಿದ್ದಾರೆ. ಸುಮಾರು 1.5 ಬಿಲಿಯನ್ ಡಾಲರ್ ಮೌಲ್ಯದ ಜಲವಿದ್ಯುತ್ ಕೇಂದ್ರ ಚಾಲನೆಗೊಂಡಿದ್ದು ಸಮುದ್ರಮಟ್ಟದಿಂದ 3,300ಮೀಟರ್ ಎತ್ತರದಲ್ಲಿ ಪ್ರಪಂಚದ ಮೇಲ್ಛಾವಣಿ ಎನಿಸಿಕೊಂಡಿರುವ ಟಿಬೇಟ್ ನಲ್ಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications