ಭಾರತೀಯ ಸೇನೆ 300 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಸಲು ಕಾರಣವೇನು?
ನವದೆಹಲಿ, ಜುಲೈ.16: ಭಾರತ-ಚೀನಾದ ಲಡಾಖ್ ಪೂರ್ವಭಾಗದಲ್ಲಿರುವ ಗಾಲ್ವಾನ್ ಕಣಿವೆ ಸಂಘರ್ಷದಿಂದ ಭಾರತ ಎಚ್ಚೆತ್ತುಕೊಂಡಿದೆ. ಡ್ರ್ಯಾಗನ್ ರಾಷ್ಟ್ರವನ್ನು ಎದುರಿಸಲು ಸೇನೆಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳ ಪೂರೈಕೆಗೆ ಕೇಂದ್ರ ರಕ್ಷಣಾ ಇಲಾಖೆ ಮುಂದಾಗಿದೆ.
Recommended Video
ಭಾರತೀಯ ಸೇನೆಗಾಗಿ 300 ಕೋಟಿ ರೂಪಾಯಿ ಮೌಲ್ಯದ ಅಗತ್ಯ ಶಸ್ತ್ರಾಸ್ತ್ರಗಳನ್ನು ಖರೀದಿಸುವುದಕ್ಕೆ ವಿಶೇಷ ಅಧಿಕಾರವನ್ನು ನೀಡಲು ರಕ್ಷಣಾ ಸಚಿವಾಲಯವು ಸಮ್ಮತಿಸಿದೆ. ಮುಂದಿನ ಆರು ತಿಂಗಳಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳಿಗೆ ಆರ್ಡರ್ ನೀಡಿ ಒಂದು ವರ್ಷದೊಳಗೆ ಆಮದು ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ.
ಭಾರತೀಯ ಗಡಿಯಲ್ಲಿ ಸೃಷ್ಟಿಯಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಪರಿಷತ್ ಸಭೆಯಲ್ಲಿ ಶಸ್ತ್ರಾಸ್ತ್ರಗಳ ಖರೀದಿಗೆ ಅನುಮತಿ ನೀಡಲಾಗಿದೆ.

ಗಡಿಯಲ್ಲಿ ಸೃಷ್ಟಿಯಾಗಿರುವ ಯುದ್ಧದ ಕರಿಛಾಯೆ
ಭಾರತದ ಉತ್ತರದ ಗಡಿಯುದ್ಧಕ್ಕೂ ಯುದ್ಧೋನ್ಮಾದದ ಕರಿಛಾಯೆ ಮೂಡಿದೆ. ಇಂಥ ಪರಿಸ್ಥಿತಿಯಲ್ಲಿ ಭಾರತೀಯ ಸೇನಾ ಯೋಧರಿಗೆ ಶಕ್ತಿ ತುಂಬುವಂತಾ ಶಸ್ತ್ರಾಸ್ತ್ರಗಳನ್ನು ಒದಗಿಸುವ ಅಗತ್ಯತೆ ಸೃಷ್ಟಿಯಾಗಿದೆ. ಗಡಿಯಲ್ಲಿ ಉದ್ವಿಗ್ನತೆಯನ್ನು ಗಮನದಲ್ಲಿ ಇಟ್ಟುಕೊಂಡು ಶಸ್ತ್ರಾಸ್ತ್ರಗಳ ಖರೀದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಭೆಯಲ್ಲಿ ಸಮ್ಮತಿಸಲಾಯಿತು.

ಸೇನೆ ಬಲಪಡಿಸಲು 3 ಸೇವೆಗಳ ಬಗ್ಗೆ ಹೆಚ್ಚಿನ ಆಸಕ್ತಿ
ಭಾರತೀಯ ಸೇನೆಯನ್ನು ಬಲಪಡಿಸುವ ಉದ್ದೇಶದಿಂದ ಮೂರು ಸೇವೆಗಳನ್ನು ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಯೋಧರಿಗೆ ಅಗತ್ಯವಿರುವ ಸೇನಾ ವೇದಿಕೆ, ಸೇನಾ ಉಪಕರಣ ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದುವುದಕ್ಕೆ ಹೆಚ್ಚಿನ ಗಮನ ನೀಡಲಾಗುತ್ತಿದೆ.

ಅಮೆರಿಕಾದಿಂದ 72,000 ರೈಫಲ್ ಗಳ ಖರೀದಿ
ಸಶಸ್ತ್ರ ಪಡೆಯ ಆರ್ಥಿಕ ನಿಧಿಯ ಅಡಿಯಲ್ಲಿ ಅಮೆರಿಕಾದಿಂದ 72,000 ಎಸ್ಐಜಿ-716 ಅಸಾಲ್ಟ್ ರೈಫಲ್ ಗಳ ಖರೀದಿಗೆ ಆರ್ಡರ್ ಕೊಡಲಾಗಿದೆ. ಮೊದಲ ಹಂತದಲ್ಲಿ 72000 ರೈಫಲ್ ಗಳನ್ನು ಈಗಾಗಲೇ ಆಮದು ಮಾಡಿಕೊಳ್ಳಲಾಗಿದ್ದು, ಎರಡನೇ ಬಾರಿ 72,000 ರೈಫಲ್ ಗಳನ್ನು ನೀಡುವಂತೆ ಕೋರಲಾಗಿದೆ.

ಮಷಿನ್ ಗನ್ ಹಾಗೂ ಎಕೆ-203 ರೈಫಲ್ ಖರೀದಿ
ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಿಯೋಜಿಸಲ್ಪಟ್ಟ ಗಡಿ ರಕ್ಷಣಾ ಸಿಬ್ಬಂದಿಗೆ ಸುಧಾರಿತ ಎಕೆ-203 ರೈಫಲ್ ಗಳನ್ನು ನೀಡಲು ತೀರ್ಮಾನಿಸಲಾಗಿದೆ. ಅಮೇಥಿಯಲ್ಲೇ ಭಾರತ ಮತ್ತು ರಷ್ಯಾ ಜಂಟಿಯಾಗಿ ಈ ರೈಫಲ್ ಉತ್ಪಾದಿಸಲಿವೆ. ಉಭಯ ರಾಷ್ಟ್ರಗಳ ನಡುವೆ ಕೆಲವು ಭಿನ್ನಾಭಿಪ್ರಾಯವಿದ್ದು, ಎಲ್ಲ ಸಮಸ್ಯೆ ಇತ್ಯರ್ಥಗೊಂಡ ಬಳಿಕ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಇದರ ನಡುವೆ ಭಾರತದಲ್ಲಿ ಲೈಟ್ ಮಷಿನ್ ಗನ್ ಗಳ ಸಂಗ್ರಹಣೆ ಪ್ರಮಾಣವು ತೀರಾ ಕಡಿಮೆಯಾಗಿತ್ತು. ಈ ಹಿನ್ನೆಲೆ ಇತ್ತೀಚಿಗಷ್ಟೇ 16,000 ಲೈಟ್ ಮಷಿನ್ ಗನ್ ರಫ್ತು ಮಾಡುವಂತೆ ಇಸ್ರೇಲ್ ಗೆ ಭಾರತೀಯ ರಕ್ಷಣಾ ಸಚಿವಾಲಯವು ಕೋರಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications